• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಒಳಗೆ ಶುರುವಾಯ್ತು ಟಿಕೆಟ್​​ ದಂಗಲ್​.. ಎಲ್ಲರೂ ದಿಲ್ಲಿಗೆ ದೌಡು

ಕೃಷ್ಣ ಮಣಿ by ಕೃಷ್ಣ ಮಣಿ
April 7, 2023
in Top Story, ಇದೀಗ, ಕರ್ನಾಟಕ
0
ಬಿಜೆಪಿ ಒಳಗೆ ಶುರುವಾಯ್ತು ಟಿಕೆಟ್​​ ದಂಗಲ್​.. ಎಲ್ಲರೂ ದಿಲ್ಲಿಗೆ ದೌಡು
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಏ.07: ಕಾಂಗ್ರೆಸ್​-ಜೆಡಿಎಸ್​ ಹೆಚ್ಚು ಕಡಿಮೆ ಟಿಕೆಟ್​ ಘೋಷಣೆ ಮಾಡಿ ಆಗಿದೆ. ಇನ್ನುಳಿದ ಕೆಲವು ಕ್ಷೇತ್ರಗಳ ಪಟ್ಟಿ ಫೈನಲ್​ ಮಾಡಲು ಮುಂದಾಗಿವೆ. ಈ ನಡುವೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ದೆಹಲಿಗೆ ಶಿಫ್ಟ್​ ಆಗಿದೆ. 224 ಕ್ಷೇತ್ರಗಳಿಗೆ ತಲಾ 3 ಹೆಸರನ್ನು ಕಳುಹಿಸಿದ್ದು, 2 ದಿನ ದೆಹಲಿಯಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಸಂಸದೀಯ ಸದಸ್ಯರು ಭಾಗಿಯಾಗಲಿದ್ದಾರೆ. CM ಬಸವರಾಜ್ ಬೊಮ್ಮಾಯಿ, ಅಧ್ಯಕ್ಷ ನಳೀನ್ ಕುಮಾರ್​ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಮನ್ಸೂಕ್ ಮಾಂಡವೀಯ, ಅಣ್ಣಾಮಲೈ, BL ಸಂತೋಷ್, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೂಡ ಭಾಗಿಯಾಗಲಿದ್ದಾರೆ.

ರಾಷ್ಟ್ರ ರಾಜಧಾನಿಗೆ ಆಕಾಂಕ್ಷಿಗಳು ದಂಡಯಾತ್ರೆ..!

BJP ಟಿಕೆಟ್ ಪಡೆಯಲು ಆಕಾಂಕ್ಷಿತರು ದೆಹಲಿಗೆ ದಂಡಯಾತ್ರೆ ಮಾಡಿದ್ದಾರೆ. ದೆಹಲಿಯಲ್ಲೇ ಇದ್ದುಕೊಂಡು ಟಿಕೆಟ್ ಪಡೆಯಲು ಕಸರತ್ತು ಶುರು ಮಾಡಿದ್ದಾರೆ. ರಾಜ್ಯ ನಾಯಕರು ಹಾಗು ಕೇಂದ್ರ ನಾಯಕರ ಮೇಲೆ ಒತ್ತಡ ಹಾಕಲು ಕಸರತ್ತು ಮಾಡುತ್ತಿದ್ದಾರೆ. ಹಾಲಿ ಶಾಸಕರು, ಮಾಜಿ ಶಾಸಕರು, ಟಿಕೆಟ್ ಆಕಾಂಕ್ಷಿಗಳು ಕೂಡ ದೆಹಲಿಗೆ ಹೊರಟಿದ್ದು, ಕೊನೆ ಕ್ಷಣದಲ್ಲಿ ಟಿಕೆಟ್ ಮಿಸ್ ಆಗುವ ಸಾಧ್ಯತೆ ಹೆಚ್ಚಿರುವ ಕಾರಣ ದೆಹಲಿಯಲ್ಲೇ ಇದ್ದುಕೊಂಡು ಟಿಕೆಟ್ ಪಡೆಯಲು ತಂತ್ರಗಾರಿಕೆ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ದೆಹಲಿ ದಂಡಯಾತ್ರೆಗಾಗಿ ಕ್ಷೇತ್ರದ ಪ್ರಚಾರವನ್ನೂ ತೊರೆದು ಹೊರಟಿದ್ದಾರೆ. ಈಗಾಗಲೇ ಒಂದು ಕ್ಷೇತ್ರಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಿದ್ದು, ಒಂದೇ ಕ್ಷೇತ್ರದ ಮೂವರು ದಿಲ್ಲಿಗೆ ಹೊರಟು ನಿಂತಿದ್ದಾರೆ.

ಜಾತಿ, ಸಾಮರ್ಥ್ಯ, ಗೆಲ್ಲುವ ಅಭ್ಯರ್ಥಿಗಳ ಲೆಕ್ಕಾಚಾರ..

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದ್ದು, ಸರ್ವೆಗಳ ಆಧಾರದ ಮೇಲೆ ಅಭ್ಯರ್ಥಿಗಳ ಟಿಕೆಟ್ ಭವಿಷ್ಯ ನಿರ್ಧಾರ ಮಾಡಲಾಗುತ್ತದೆ ಎನ್ನಲಾಗಿದೆ. ರಾಜ್ಯ ಹಾಗೂ ಕೇಂದ್ರ ನಾಯಕರು ಹಲವಾರು ಸರ್ವೆಗಳನ್ನು ಮಾಡಿಸಿದ್ದು, ಆ ಸರ್ವೆಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅಭ್ಯರ್ಥಿ ವರ್ಚಸ್ಸು, ಜಾತಿ, ಸಾಮರ್ಥ್ಯ, ಎದುರಾಳಿ ಅಭ್ಯರ್ಥಿ ಪರಿಗಣನೆ ಮಾಡಲಾಗುತ್ತದೆ ಎನ್ನಲಾಗಿದೆ. ಇನ್ನು ಗುಜರಾತ್ ಹಾಗು ಉತ್ತರ ಪ್ರದೇಶ ಮಾದರಿಯನ್ನು ಆಧರಿಸಿಯೂ ಟಿಕೆಟ್ ಹಂಚಿಕೆ ಮಾಡಲು ಮುಂದಾಗಿದ್ದು, ಹೊಸಬರಿಗೆ ಟಿಕೆಟ್ ಕೊಡಲು ನಿರ್ಧಾರ ಮಾಡಲಾಗಿದೆ. ಮೊದಲ ಹಂತದಲ್ಲಿ ಕಾಂಗ್ರೆಸ್​​ ಪಕ್ಷದ ರೀತಿಯಲ್ಲೇ 124 ಕ್ಷೇತ್ರ ಗಳಿಗೆ ಟಿಕೆಟ್ ಪ್ರಕಟ ಮಾಡಲಿದ್ದು, ಏಪ್ರಿಲ್ 9 ಅಥವಾ 10ರಂದು ಮೊದಲ ಪಟ್ಟಿ ಬಿಡುಗಡೆಗೆ ಸಿದ್ದತೆ ಮಾಡಲಾಗ್ತಿದೆ.

ಜೆಡಿಎಸ್​​, ಕಾಂಗ್ರೆಸ್​ ಘೋಷಣೆ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್..!

ಜೆಡಿಎಸ್, ಕಾಂಗ್ರೆಸ್​ನಿಂದ ಘೋಷಣೆ ಆಗಿರುವ ಕ್ಷೇತ್ರಕ್ಕೆ ಮಾತ್ರ ಟಿಕೆಟ್ ಘೋಷಣೆ ಮಾಡುವ ಮೂಲಕ ಬಿಜೆಪಿ ರಾಜಕೀಯ ತಂತ್ರಗಾರಿಕೆ ಮಾಡಲು ಮುಂದಾಗಿದೆ. ಬಿಜೆಪಿ ಎಲ್ಲಾ ಕ್ಷೇತ್ರಗಳಿಗೂ ಟಿಕೆಟ್ ಘೋಷಣೆ ಮಾಡಿದರೆ ಬಂಡಾಯ ಎದ್ದು ಬೇರೆ ಪಕ್ಷಗಳಿಗೆ ವಲಸೆ ಹೋಗುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಹಾಗು ಜೆಡಿಎಸ್ ಟಿಕೆಟ್ ಘೋಷಣೆ ಮಾಡಿದ ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆ ಮಾಡುವುದು, ಆ ಬಳಿಕ ಕಾಂಗ್ರೆಸ್ ಹಾಗು ಜೆಡಿಎಸ್ ಉಳಿದ ಕ್ಷೇತ್ರಗಳಿಗೂ ಟಿಕೆಟ್ ಘೋಷಣೆ ನೋಡಿಕೊಂಡು ಆ ನಂತರ ಟಿಕೆಟ್ ಘೋಷಣೆ ಮಾಡುವ ನಿರ್ಧಾರ ಮಾಡಲಾಗಿದೆ. ಈಗಾಗಲೇ ಬಿ.ಎಸ್ ಯಡಿಯೂರಪ್ಪ ಮನೆಗೆ ಆಕಾಂಕ್ಷಿಗಳು ಬಂದು ಭೇಟಿ ನೀಡುತ್ತಿದ್ದು, ತಮ್ಮ ಮಕ್ಕಳಿಗೆ, ತಮ್ಮ ನಾಯಕರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿಯಲ್ಲಿ ಆಕ್ರೋಶದ ಕಟ್ಟೆ ಹೊಡೆಯುವ ಲಕ್ಷಣ ಕಾಣಿಸುತ್ತಿದ್ದು, ಟಿಕೆಟ್ ಘೋಷಣೆ ಆದ ಬಳಿಕ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳೂ ಇದೆ ಎನ್ನಬಹುದು.

ಕೃಷ್ಣಮಣಿ

Tags: 2023 election2023 Election Resultassembly electionBJPBJP Partybjp ticektbjpkarnatakaBOMMAIBreaking Newsbreaking news in kannadaBS YeddyurappaBSYCandidateCMcmbommaiCmIbrahimctraviDKShivakumarElection Commissionelection resultHDDHDKJanasankalpa YatreJDSKannadakannada latest newskannada livetvkannada newskannada news channelkannada news headlineskannada news livekannada news todayKarnataka Electionkarnataka latest newskarnataka newskarnataka news livekumaraswamylatest newslive newsNalin Kumar KateelNewsNews Headlinesnews in kannadaOnline News KannadaPancharatna YatrePratidhvanisiddaramaiahState ElectionVijayasankalpaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಬಿಜೆಪಿ ಸ್ಟಾರ್​ ಪ್ರಚಾರಕ ಸುದೀಪ್​ ಜಾಹೀರಾತು ಪ್ರಸಾರ ಮಾಡದಂತೆ ಜೆಡಿಎಸ್​ ಆಗ್ರಹ

Next Post

‘ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಪುತ್ರನಿಗೆ ಟಿಕೆಟ್​ ನೀಡಿ’ : ಪಕ್ಷದ ವರಿಷ್ಠರೆದುರು ಎಂಟಿಬಿ ಮನವಿ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
‘ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಪುತ್ರನಿಗೆ ಟಿಕೆಟ್​ ನೀಡಿ’ : ಪಕ್ಷದ ವರಿಷ್ಠರೆದುರು ಎಂಟಿಬಿ ಮನವಿ

‘ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಪುತ್ರನಿಗೆ ಟಿಕೆಟ್​ ನೀಡಿ’ : ಪಕ್ಷದ ವರಿಷ್ಠರೆದುರು ಎಂಟಿಬಿ ಮನವಿ

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada