• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶಾಲೆ ಸಮೀಪ ಅಕ್ರಮ ಮದ್ಯ ಮಾರಾಟ : ದೂರು ನೀಡಿದ ಅಂಧ ವ್ಯಕ್ತಿಯನ್ನು ಥಳಿಸಿದ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
March 21, 2022
in ದೇಶ
0
ಶಾಲೆ ಸಮೀಪ ಅಕ್ರಮ ಮದ್ಯ ಮಾರಾಟ : ದೂರು ನೀಡಿದ ಅಂಧ ವ್ಯಕ್ತಿಯನ್ನು ಥಳಿಸಿದ ಪೊಲೀಸರು
Share on WhatsAppShare on FacebookShare on Telegram

ತಂದೆ ಮಗನ ಜೋಡಿ ಕೊಲೆ ಮಾಡಿ ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಪೊಲೀಸ್‌ ದೌರ್ಜನ್ಯದ ಪಟ್ಟಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ದೃಷ್ಟಿ ದೋಷವುಳ್ಳ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ADVERTISEMENT

ಕವರಪಟ್ಟಿ ಗ್ರಾಮದ 29 ವರ್ಷದ ಶಂಕರ್ ಎಂಬ ವ್ಯಕ್ತಿ ಪುದುಕೊಟ್ಟೈ ಜಿಲ್ಲೆಯ ಶಾಲೆಯೊಂದರ ಬಳಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ದೂರು ನೀಡಿದ್ದಕ್ಕಾಗಿ ಪೊಲೀಸ್  ದೌರ್ಜನ್ಯಕ್ಕೆ ಒಳಗಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಾರ್ಚ್ 17 ರಂದು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಆರೋಪಿ ಪೊಲೀಸರನ್ನು ಅಮಾನತು ಮಾಡಿದ ಕೆಲವು ದಿನಗಳ ನಂತರ, ಪೊಲೀಸರು ನಡೆಸಿದ್ದ ದೌರ್ಜನ್ಯವನ್ನು ಸಂತ್ರಸ್ತ ವಿವರಿಸುತ್ತಿರುವ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲ್‌ ಆಗಿದೆ.

 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕರ್‌ ಅವರು ಹಾಸಿಗೆ ಮೇಲೆ ಮಲಗಿಕೊಂಡೇ ತಮಗಾದ ದೌರ್ಜನ್ಯವನ್ನು ವಿವರಿಸಿದ್ದಾರೆ. ದೃಷ್ಟಿ ದೋಷ ಇರುವ ಶಂಕರ್‌, ಪುದುಕೊಟ್ಟೈ ಜಿಲ್ಲೆಯ ವಿರಾಲಿಮೈಲ್‌ ಶಾಲೆ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದಾಗಿ ಪೊಲೀಸ್‌ ಕಂಟ್ರೋಲ್‌ ರೂಮ್‌(100)ಗೆ ಕರೆ ಮಾಡಿ ದೂರು ನೀಡಿದ್ದರು. ಈ ದೂರನ್ನು ವಿರಾಲಿಮಲೈ ಠಾಣೆಗೆ ವರ್ಗಾಯಿಸಲಾಗಿತ್ತು.


ವಿರಾಲಿಮಲೈ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ತನಗೆ ಕರೆ ಮಾಡಿ ಮೊದಲಿಗೆ ವಿವರಗಳನ್ನು ಕೇಳಿದ್ದಾರೆ. ಬಳಿಕ ನಿನಗೆ ಇದೆಲ್ಲಾ ಯಾಕೆ? ಬೇಕಾದರೆ ನೀನೂ ಮದ್ಯ ಮಾರಾಟ ಎಂದು ಜೋರು ಮಾಡಿರುವುದಾಗಿ ಶಂಕರ್‌ ತಿಳಿಸಿದ್ದಾರೆ.

ಬಳಿಕ ತನ್ನನ್ನು ವಿರಾಲಿಮಲೈ ಠಾಣೆಗೆ ತನ್ನನ್ನು ಕರೆದೊಯ್ದು ಮೂರು ಗಂಟೆಗಳ ಕಾಲ ಥಳಿಸಿದ್ದಾರೆ. ಯಾವುದರಿಂದ ಥಳಿಸಲಾಯಿತು ಅನ್ನುವುದು ಗೊತ್ತಿಲ್ಲ. ಬಹುಷ ಮರದ ದಿಮ್ಮಿನಿಂದ ನನ್ನ ಮೇಲೆ ಹಲ್ಲೆ ಮಾಡಿರಬಹುದು. ಶಬ್ಧದ ಆಧಾರದಲ್ಲಿ ಹೇಳುವುದಾದರೆ, ನನ್ನ ಮೇಲೆ ಹಲ್ಲೆ ನಡೆಸಿದ ನಾಲ್ವರಲ್ಲಿ ಒಬ್ಬರು ಮಹಿಳೆಯೂ ಇದ್ದರೂ ಎಂದು ಶಂಕರ್‌ ಆರೋಪಿಸಿದ್ದಾರೆ.  

ಶಂಕರ್ ಅವರು ಮೊದಲು ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ, ಅವರು ತಮ್ಮ ದೂರನ್ನು ನಿರ್ಲಕ್ಷಿಸಿದರು ಮತ್ತು “ತನಗೆ ಮಾಡಲು ಬೇರೆ ಕೆಲಸವಿಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ. ಶಂಕರ್ ಅವರು ಆಕೆಯೊಂದಿಗೆ ತರ್ಕಿಸಲು ಪ್ರಯತ್ನಿಸಿ, ಬಳಿಕ ಅದನ್ನು ಕೈಬಿಟ್ಟರು ಎಂದು ಶಂಕರ್‌ ತಿಳಿಸಿದ್ದಾರೆ.  ಈ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಇತರ ಮಕ್ಕಳನ್ನು ಒತ್ತಾಯಿಸಲಾಗುತ್ತಿದೆ ಎಂದು ಶಾಲಾ ಮಕ್ಕಳು ತನಗೆ ತಿಳಿಸಿದ್ದಾರೆ, ಅದರ ಆಧಾರದಲ್ಲಿ ಪೊಲೀಸರಿಗೆ ದೂರು ನೀಡಿದ್ದೆ ಎಂದು ಅವರು ಹೇಳಿದ್ದಾರೆ.

Shankar (29) with visual impairment, who was victim of police high handedness in Viralimalai for complaining about illegal liquor sale, is seen narrating his ordeal in this video. He says he was assaulted by four police personnel with a log. Three of them have been suspended. pic.twitter.com/BySWY3IxbS

— azeefa (@AzeefaFathima) March 20, 2022

ಕವರಪಟ್ಟಿಯ ಶಾಲೆಯೊಂದರ ಬಳಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಮಾರ್ಚ್ 15 ರಂದು ಶಂಕರ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ನಂತರ ಅದನ್ನು ವಿರಾಲಿಮಲೈ ಪೊಲೀಸ್ ಠಾಣೆ ಗಮನಕ್ಕೆ ತರಲಾಗಿದೆ ಎಂದು ವರದಿಯಾಗಿದೆ. ಶಂಕರ್ ಸರ್ಕಾರಿ ಶಾಲೆಯ ಬಳಿ ಎಲೆಕ್ಟ್ರಿಕಲ್ ಅಂಗಡಿ ನಡೆಸುತ್ತಿದ್ದ ಎನ್ನಲಾಗಿದೆ. ‌

 ವಿರಾಲಿಮಲೈ ಪೊಲೀಸರು ಕರೆ ಮಾಡಿದವರ ಸ್ಥಳವನ್ನು ಪತ್ತೆಹಚ್ಚಿ ಶಂಕರ್‌ನನ್ನು ಎತ್ತಿಕೊಂಡು ಬುಧವಾರ ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು. ಆದರೆ, ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಎಂದು ಶಂಕರ್ ಹೇಳಿದ್ದರಿಂದ, ಅವರ ನಡುವೆ ವಾಗ್ವಾದ ನಡೆಯಿತು ಎಂದು ದಿ ನ್ಯೂಸ್‌ ಮಿನಿಟ್‌ (TNM) ವರದಿ ಮಾಡಿದೆ.

TNM ಪುದುಕೊಟ್ಟೈ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಪಾರ್ಥಿಬನ್ ಅವರನ್ನು ಸಂಪರ್ಕಿಸಿದಾಗ, ಈ ವಿಷಯವು ಇಲಾಖಾ ಮಟ್ಟದ ತನಿಖೆಯಲ್ಲಿದೆ ಎಂದು ಹೇಳಿದ್ದಾರೆ. ವಿರಾಲಿಮಲೈ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ತಿರುಚ್ಚಿ ಡಿಐಜಿ ಶರವಣ ಸುಂದರ್ ಹೇಳಿದ್ದಾರೆ.

Tags: BJPCongress PartyCovid 19ಅಕ್ರಮ ಮದ್ಯ ಮಾರಾಟಅಂಧ ವ್ಯಕ್ತಿಪೊಲೀಸರುಬಿಜೆಪಿಶಾಲೆ ಸಮೀಪ
Previous Post

ಬಿಜೆಪಿಗೆ ಓಟ್‌ ಹಾಕಿದ ಮುಸ್ಲಿಂ ಮಹಿಳೆಗೆ ತ್ರಿವಳಿ ತಲಾಖ್‌ ಬೆದರಿಕೆ!

Next Post

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಿಂದ ಉಚಿತ ಅವಕಾಶ : ಸಚಿವ ಸುಧಾಕರ್

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಿಂದ ಉಚಿತ ಅವಕಾಶ : ಸಚಿವ ಸುಧಾಕರ್

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಿಂದ ಉಚಿತ ಅವಕಾಶ : ಸಚಿವ ಸುಧಾಕರ್

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada