ಮೈಸೂರು (Mysuru): ಮೈಸೂರು ವಲಯದ ಚಿಕ್ಕನಹಳ್ಳಿ ಹಾಗೂ ಅದರ ಸುತ್ತಮುತ್ತಲ ಗ್ರಾಮಸ್ತರಲ್ಲಿ ಭೀತಿ ಹುಟ್ಟಿಸಿದ್ದ ಹುಲಿ (Tiger) ಕೊನೆಗೂ ಸೆರೆ ಸಿಕ್ಕಿದೆ.

ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಐದು ವರ್ಷದ ಗಂಡು ಹುಲಿ ಸೆರೆ ಸಿಕ್ಕಿದೆ. ಕಳೆದ ತಿಂಗಳು ಮೈಸೂರು ವಿಮಾನ ನಿಲ್ದಾಣದ ಬಳಿ ಕಾರು ಡಿಕ್ಕಿಯೊಡೆದು ಹುಲಿಯೊಂದು ಸಾವನಪ್ಪಿತ್ತು. ಮೈಸೂರಿನ ಹಲವೆಡೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದ ಹುಲಿ ಸೆರೆ ಅರಣ್ಯ ಇಲಾಖೆಗೆ ದೊಡ್ಡ ತಲೆ ನೋವಾಗಿತ್ತು. ಹುಲಿ ಸೆರೆಗೆ ಹಲವು ಕಡೆ ಬೋನನ್ನು ಇರಿಸಲಾಗಿತ್ತು.

ಸ್ಥಳಕ್ಕೆ ಮೈಸೂರು ವೃತ್ತದ ಸಿಎಫ್ ಡಾ ಮಾಲತಿಪ್ರಿಯಾ, ಡಿಸಿಎಫ್ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ಆರೋಗ್ಯವಾಗಿರೋ ಹಿನ್ನೆಲೆ ಅರಣ್ಯಕ್ಕೆ ಬಿಡಲು ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ರೇಡಿಯೋ ಕಾಲರ್ ಅಳವಡಿಸಿ ಚಲನವಲನಗಳ ಬಗ್ಗೆಯೂ ನಿಗಾ ಇಡಲಾಗಿದೆ.
Mysuru #tiger #tigercaptured #forestdepartment