• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

9 ಮಂದಿ ಕೊಂದ ಹುಲಿ ಹತ್ಯೆ: ಪ್ರೊಟೋಕಾಲ್‌ ಪಾಲಿಸಿಲ್ಲ ಎಂದ ರಣದೀಪ್‌ ಹೂಡಾ

Any Mind by Any Mind
October 10, 2022
in ದೇಶ
0
ಬನ್ನೇರುಘಟ್ಟದಲ್ಲಿ ವಿಚಿತ್ರದ ಸೋಂಕಿಗೆ ಮೂರು ಬೆಂಗಾಲಿ ಹುಲಿ ಬಲಿ
Share on WhatsAppShare on FacebookShare on Telegram

ಕೆಲವೇ ದಿನಗಳ ಅಂತರದಲ್ಲಿ ಬರೋಬ್ಬರಿ ಒಂಬತ್ತು ಜನರನ್ನು ಕೊಂದ ಹುಲಿಯನ್ನು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಹೊಡೆದುರುಳಿಸಲಾಗಿದೆ.

ADVERTISEMENT

ಹೈದರಾಬಾದ್ ಮತ್ತು ಪಾಟ್ನಾದಿಂದ ಕರೆಸಲಾದ ಅರಣ್ಯ ಸಿಬ್ಬಂದಿಗಳ ತಂಡವು ಬಗಾಹಾದ ವಾಲ್ಮೀಕಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನರ ಹತ್ಯೆ ಮಾಡುತ್ತಿದ್ದ ಹುಲಿಯನ್ನು ಹೊಡೆದುರುಳಿಸಿದೆ ಎಂದು ಮುಖ್ಯ ವನ್ಯಜೀವಿ ವಾರ್ಡನ್ ಪ್ರಭಾತ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.

“ಹುಲಿಯನ್ನು ಬೋನಿನಲ್ಲಿ ಹಿಡಿಯಲು ಅರಣ್ಯ ಸಿಬ್ಬಂದಿ ಪ್ರಯತ್ನಿಸಿದ್ದಾರೆ. ಹುಲಿ ಜನವಸತಿ ಪ್ರದೇಶದಲ್ಲಿ ವಾಸಿಸಲು ಒಗ್ಗಿಕೊಂಡಿರುವುದು ಕಂಡುಬಂದಾಗ ಹತ್ಯೆಗೆ ಆದೇಶ ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಹುಲಿ ಒಂಬತ್ತು ಜನರನ್ನು ಕೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಬಗಾಹಿ ಗ್ರಾಮದ 36 ವರ್ಷದ ಸಂಜಯ್ ಮಹತೋ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅದಕ್ಕೂ ಮುನ್ನ ಸಿಗಡಿ ಗ್ರಾಮದ 12 ವರ್ಷದ ಬಗಾದಿ ಕುಮಾರಿಯನ್ನು ಹುಲಿ ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಸುತ್ತ ಮುತ್ತಲಿನ ಗ್ರಾಮಸ್ಥರಲ್ಲಿ ಭಾರಿ ಆತಂಕ ಮನೆ ಮಾಡಿತ್ತು.

https://twitter.com/RandeepHooda/status/1578988204505849856

ಹುಲಿಯ ಮೃತದೇಹವನ್ನು ವಿಧಿವಿಧಾನಗಳ ಪ್ರಕಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಜಿಲ್ಲಾ ಅರಣ್ಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ, ಬಾಲಿವುಡ್ ನಟ ರಣದೀಪ್ ಹೂಡಾ, ಅಧಿಕಾರಿಗಳು ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಹುಲಿಯನ್ನು ಗುಂಡಿಕ್ಕಿದ ನಂತರ ಜನರು ಅದನ್ನು ಎಳೆದಾಡಿದ್ದಾರೆ, ಚಿಕಿತ್ಸೆ ನೀಡಲು ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ. ಗಾಯಗೊಂಡ ಹುಲಿಯನ್ನು ಜನರು ತುಳಿದು, ಎಳೆದಾಡುತ್ತಿರುವ ಘಟನೆಯ ವಿಡಿಯೋವನ್ನು ಅವರು ಹಂಚಿಕೊಂಡಿದ್ದು, ರಾಷ್ಟ್ರಪ್ರಾಣಿಯನ್ನು ನಡೆಸುಕೊಳ್ಳಬೇಕಾದ ರೀತಿ ಇದಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ನಿಗದಿಪಡಿಸಿದ ಪ್ರೋಟೋಕಾಲ್‌ಗೆ ವಿರುದ್ಧವಾಗಿ ಹುಲಿಯನ್ನು ಬೇಟೆಯಾಡಲು ಬಿಹಾರ ಅರಣ್ಯ ಇಲಾಖೆಯು ಖಾಸಗಿ ಬೇಟೆಗಾರನನ್ನು ನಿಯೋಜಿಸಿದೆ ಎಂದು ಅವರು ಆರೋಪಿಸಿದ್ದಾರೆ.

Previous Post

ಬಿಜೆಪಿ ಸರ್ಕಾರ ಸಿಲಿಂಡರ್ ಹಾಗೂ ಬೆಲೆ ಏರಿಕೆ ವಿರುದ್ಧ ತಿರುಗಿಬಿದ್ದ ಮಹಿಳೆ

Next Post

ಉಕ್ರೇನ್‌ ನಗರಗಳ ಮೇಲೆ ರಷ್ಯಾದಿಂದ 75 ಕ್ಷಿಪಣಿ ದಾಳಿ, 8 ಸಾವು

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಉಕ್ರೇನ್‌ ನಗರಗಳ ಮೇಲೆ ರಷ್ಯಾದಿಂದ 75 ಕ್ಷಿಪಣಿ ದಾಳಿ, 8 ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada