• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟಿಕಾಯತ್‌ ಒಬ್ಬ ಡಕಾಯಿತ – ಬಿಜೆಪಿ ಸಂಸದ

Shivakumar A by Shivakumar A
September 21, 2021
in ದೇಶ, ರಾಜಕೀಯ
0
ಟಿಕಾಯತ್‌ ಒಬ್ಬ ಡಕಾಯಿತ – ಬಿಜೆಪಿ ಸಂಸದ

DJH¥ÿæØßÚU ÜæÜ »ô¢ÇU, âæ¢âÎ

Share on WhatsAppShare on FacebookShare on Telegram

ಮಧ್ಯಪ್ರದೇಶದ  ಲೋಕಸಭಾ ಕ್ಷೇತ್ರ ಕ್ಷೇತ್ರ  ಬಾಹ್ರೈಚ್ ಸಂಸದ ಅಕ್ಷಯಬರ್ ಲಾಲ್ ಗೋಂಡ್ ಅವರು ರೈತ ನಾಯಕ ಟಿಕಾಯತ್ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ರಾಕೇಶ್ ಟಿಕಾಯತ್ ಒಬ್ಬ ಡಕಾಯಿತ ಎಂದು ಹೇಳಿರುವ ಅವರು, ರೈತ ಆಂದೋಲನವನ್ನು ‘ಸಿಖ್ಖಿಸ್ತಾನ್’ಗಾಗಿ ನಡೆಯುತ್ತಿರುವ ಪ್ರತಿಭಟನೆ ಎಂದು ಆರೋಪಿಸಿದ್ದಾರೆ. 

ADVERTISEMENT

ಸೆಪ್ಟೆಂಬರ್ 2020ರಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ಜಾರಿಯಾಗಿತ್ತು. ಇದರ ವಿರುದ್ದನಡೆಯುತ್ತಿರುವ ಪ್ರತಿಭಟನೆ ರೈತರ ಪ್ರತಿಭಟನೆಯಲ್ಲ. ಇವರು ರಾಜಕೀಯ ಪಕ್ಷಗಳ ಬೆಂಬಲಿತರು. ಇವರಿಗೆ ಸಿಖ್ಖಿಸ್ತಾನ್ ಹಾಗು ಪಾಕಿಸ್ತಾನದಿಂದ ಪ್ರಚೋದಿಸಲಾಗುತ್ತಿದೆ, ಎಂದು ಅಕ್ಷಯವರ್ ಹೇಳಿದ್ದಾರೆ.

“ಟಿಕಾಯತ್ ಒಬ್ಬ ಡಕಾಯಿತ. ಇದು ನಿಜವಾದ ರೈತರ ಪ್ರತಿಭಟನೆಯಾಗಿದಿದ್ದರೆ, ದೇಶದಲ್ಲಿ ಹಾಲು, ತರಕಾರಿ, ಆಹಾರ ಧಾನ್ಯ ಹಾಗೂ ಹಣ್ಣುಗಳ ಕೊರತೆ ಎದುರಾಗುತ್ತಿತ್ತು. ಇವರು ನಿಜವಾದ ರೈತರಲ್ಲ. ಇವರಿಗೆ ವಿದೇಶಿ ಮೂಲಗಳಿಂದ ಹಣ ಸಂದಾಯವಾಗುತ್ತಿದೆ. ಪ್ರಮುಖವಾಗಿ ಕೆನಡಾದಿಂದ ಹಣ ಬರುತ್ತಿದೆ. ಆತಂಕವಾದಿಗಳಿಂದ ಹಣ ಹರಿದು ಬರುತ್ತಿದೆ. ಇದರ ಕುರಿತಾಗಿ ತನಿಖೆ ನಡೆಯುತ್ತಿದೆ,” ಎಂದು ಆರೋಪಿಸಿದ್ದಾರೆ. 

ಕಳೆದ ವರ್ಷ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದ ಬಳಿಕ ಬಹುತೇಕ ಉತ್ತರ ಭಾರತದ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಬಟನೆಗೆ ಕರ್ನಾಟಕವೂ ಸೇರಿದಂತೆ ದೇಶದೆಲ್ಲೆಡೆಯಿಂದ ಬೆಂಬಲ ಲಭಿಸಿದೆ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದು ಎಂ ಎಸ್ ಪಿಗೆ ಕಾನೂನಿನ ಮಾನ್ಯತೆ ನೀಡುವಂತೆ ಪ್ರತಿಭಟನಾನಿರತರು ಬೇಡಿಕೆಯಿಟ್ಟಿದ್ದಾರೆ. 

ರೈತ ಪ್ರತಿಭಟನೆಯ ಕುರಿತು ಕರ್ನಾಟಕದ ವಿಧಾನಸಭೆ ಅಧಿವೇಶನದಲ್ಲಿಯೂ ತೀವ್ರವಾದ ಚರ್ಚೆ ನಡೆದಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದೊಂದು ಕಾಂಗ್ರೆಸ್ ಪ್ರಾಯೋಜಿತ ಹೊರಾಟ. ವಿದೇಶಿ ಏಜೆಂಟರ ಮೂಲಕ ನಡೆಸಲಾಗುತ್ತಿರುವ ಆಂದೋಲನ ಎಂದು ಹೇಳಿದ್ದಾರೆ. 

ಇದಕ್ಕೆ ಉತ್ತರ ನೀಡಿರುವ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್, ಸರ್ಕಾರದ ಆರೋಪಕ್ಕೆ ಪೂರಕವಾದ ಸಾಕ್ಷ್ಯಾಧಾರಗಳಿದ್ದರೆ ಕೂಡಲೇ ಇದಕ್ಕೆ ಸಂಬಂಧಿಸಿದವರನ್ನು ಬಂಧಿಸಬೇಕು. ಇಲ್ಲದಿದ್ದರೆ, ಇದು ರೈತರಿಗೆ ಮಾಡುತ್ತಿರುವ ಅಪಮಾನ ಎಂದು ಹೇಳಿದ್ದಾರೆ. 

ಸಿಎಂ ಸದನದಲ್ಲಿ ನೀಡಿರುವ ಹೇಳಿಕೆಯಿಂದ ಕುಪಿತರಾದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದು ಎಂದು ಜರೆದಿದ್ದಾರೆ. 

Tags: BJPCentral Farm LawsCongress Partyfarm lawsFarm laws protestFarmersFarmers protestrakesh tikaitನರೇಂದ್ರ ಮೋದಿಬಿಜೆಪಿ
Previous Post

ಪಂಜಾಬ್ ಬಳಿಕ ಕಾಂಗ್ರೆಸಿಗೆ ರಾಜಸ್ಥಾನದಲ್ಲಿ ಶುರುವಾಯ್ತು ಸಮಸ್ಯೆ; ಅಲ್ಲೂ ಆಗುತ್ತಾ ಸಿಎಂ ಚೇಂಜ್?

Next Post

ಪಾಕ್ ಗೂಢಚಾರಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಪಾಕ್ ಗೂಢಚಾರಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಪಾಕ್ ಗೂಢಚಾರಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada