ಬೈಕ್ ಒಂದಕ್ಕೆ ಹಿಂದಿಯಿಂದ ಟಿಪ್ಪರ್ ಹೊಡೆದ ಪರಿಣಾಮ ೊಂದೇ ಕುಟುಂಬದ ಮೂವರು ಮೃತಪಟ್ಟಿರುವ ಗಟನೆ ಬಳ್ಳಾರಿಯ ಕೌಲ್ ಬಜಾರ್ ಮೇಲ್ಸೇತುವೆಯಲ್ಲಿ ನಡೆದಿದೆ.
ಶಿಕ್ಷಕ ವೀರೇಶ್ (35), ಪತ್ನಿ ಅಂಜಲಿ(30), ಪುತ್ರ ದಿನೇಶ್ (5) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವಪುತ್ರಿ ಅನಿತಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯರಗುಡಿ ಕಡೆಯಿಂದ ಬಳ್ಳಾರಿಯ ಗಫೂರ್ ಟವರ್ ಕಡೆ ಬರುತ್ತಿದ್ದ ಸಮಯದಲ್ಲಿ ಕೌಲ್ ಬಜಾರ್ ಬಳಿ ಟಿಪ್ಪರ್ ಹಿಂಬದಿಯಿಂದ ಡಿಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಅತಿವೇಗ ಹಾಗೂ ಚಾಲನೆ ವೇಳೆ ಅಜಾಗರೂಕತೆಯೇ ಘಟನೆಗೆ ಮುಖ್ಯ ಕಾರಣ ಎಂದು ಹೇಳಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಚಿವ ಶ್ರೀರಾಮುಲು ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.