ಕಾದಂಬರಿಕಾರ ಎಸ್.ಎಲ್.ಬೈರಪ್ಪ ರಚಿಸಿರುವ ಟಿಪ್ಪುವಿನ ನಿಜ ಕನಸುಗಳು ನಾಟಕವು ಮೈಸೂರಿನ ರಂಗಾಯಣದ ಭೂಮಿಗೀತದಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಪ್ರದರ್ಶನ ಕಂಡಿತ್ತು.
ಭದ್ರತೆಗೆ ಸುಮಾರು 250ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು ಮತ್ತು ಟಿಕೆಟ್ ಇದ್ದವರಿಗೆ ಮಾತ್ರ ನಾಟಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು.
ಆರಂಭದಲ್ಲಿ ಪತ್ರಕರ್ತರು ಹಾಗೂ ಮಾಧ್ಯಮದವರಿಗೆ ಪ್ರವೇಶವನ್ನ ನಿಷೇಧಿಸಲಾಗಿತ್ತು ತಡನಂತರ ಪ್ರವೇಶ ಕಲ್ಪಿಸಲಾಯಿತ್ತಾದರೂ ಪೋಟೋ ಹಾಘು ವಿಡಿಯೋ ಚಿತ್ರೀಕರಣವನ್ನ ನಿಷೇಧಿಸಲಾಗಿತ್ತು.
ಸಂಸ್ಥೆಯ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾತನಾಡಿ ನಾಟಕ ಪ್ರದರ್ಶನಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪರಿಗಣಿಸದಂತೆ ರಂಗಾರಣ ಸಂಸ್ತೆಯೂ ಅರ್ಜಿ ಸಲ್ಲಿಸಿತ್ತು. 200ಕ್ಕೂ ಹೆಚ್ಚು ಟಿಕೆಟ್ಗಳು ಆನ್ಲೈನ್ನಲ್ಲಿ ಮಾರಾಟವಾಗಿದ್ದವು ಮತ್ತು ಸೋಮವಾರ ವೂ ಸಹ ನಾಟಕದ ಪ್ರದರ್ಶನವಿದೆ ಎಂದು ತಿಳಿಸಿದ್ದಾರೆ.
ನಾಟಕವನ್ನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ, ಶಾಸಕ ಕೆ.ಜಿ.ಬೋಪಯ್ಯ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಸಂತ್ಕುಮಾರ್, ಸಂಸದ ಪ್ರತಾಪ್ ಸಿಂಹ ಪತ್ನಿ ಅರ್ಪಿತಾ ಸಿಂಹ ನಾಟಕವನ್ನ ವೀಕ್ಷಿಸಿದ್ದರು.