
ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ನೀಡುವ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪದ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ದೇವಾಲಯ ಗಳಲ್ಲಿ ಶುದ್ಧ ನಂದಿನಿ ತಪ್ಪು ಬಳಕೆಗೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಶುದ್ಧ ನಂದಿನಿ ತುಪ್ಪ ಬಳಸಿ ಪ್ರಸಾದ ತಯಾರಿಕೆಗೆ ಸರ್ಕಾರ ಆದೇಶ ಮಾಡಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ಈ ಆದೇಶ ಮಾಡಿದ್ದು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲೂ ನಂದಿನಿ ತುಪ್ಪ ಬಳಸುವಂತೆ ತಿಳಿಸಲಾಗಿದೆ/
ದೇವಸ್ಥಾನದಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗು ದಾಸೋಹ ಭವನದಲ್ಲೂ ಕಡ್ಡಾಯವಾಗಿ ನಂದಿನಿ ತುಪ್ಪ ಮಾತ್ರ ಬಳಸಲು ಸೂಚನೆ ಕೊಡಲಾಗಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಕಟ್ಟಪ್ಪಣೆ ವಿಧಿಸಲಾಗಿದೆ.

ಆಂಧ್ರ ಪ್ರದೇಶದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಬೆನ್ನೆಲ್ಲೆ, ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಆದೇಶ ಹೊರ ಬಿದ್ದಿದೆ.