• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಷ್ಟ್ರ ರಾಜಕಾರಣ ಪ್ರವೇಶಿಸಲು ‘ಈಶಾನ್ಯ’ ಕಿಂಡಿಯ ದಾರಿ ಹಿಡಿದ ಟಿಎಂಸಿ

Shivakumar A by Shivakumar A
September 3, 2021
in ದೇಶ
0
ರಾಷ್ಟ್ರ ರಾಜಕಾರಣ ಪ್ರವೇಶಿಸಲು ‘ಈಶಾನ್ಯ’ ಕಿಂಡಿಯ ದಾರಿ ಹಿಡಿದ ಟಿಎಂಸಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಗದ್ದುಗೆ ಏರಿರುವ ಮಮತಾ ಬ್ಯಾನರ್ಜಿ. ಟಿಎಂಸಿ ಬಾವುಟವನ್ನು ದೇಶದೆಲ್ಲೆಡೆ ಹಾರಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇದಕ್ಕಾಗಿ, ಪಶ್ಚಿಮ ಬಂಗಾಳದ ಆಸುಪಾಸಿನ ರಾಜ್ಯಗಳಲ್ಲಿ ಮೊದಲು ಟಿಎಂಸಿಯ ನೆಲೆಯನ್ನು ಭದ್ರವಾಗಿಸಿ, ಆ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾಲು ಬಾಚಿಕೊಳ್ಳಲು ದೀದಿ ಮುಂದಾಗಿದ್ದಾರೆ.

ADVERTISEMENT

ಇತ್ತೀಚಿಗೆ ತ್ರಿಪುರಾ ಹಾಗೂ ಅಸ್ಸಾಂನ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರನ್ನು ಟಿಎಂಸಿಗೆ ಬರಮಾಡಿಕೊಳ್ಳಲಾಗಿದೆ. ಅಸ್ಸಾಂ ಕಾಂಗ್ರೆಸ್’ನಲ್ಲಿ ಮೂವತ್ತು ವರ್ಷವಿದ್ದ ಸುಶ್ಮಿತಾ ದೇವ್ ಆಗಸ್ಟ್ 16ರಂದು ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚಿಗೆ ಈಶಾನ್ಯ ರಾಜ್ಯಗಳ ಪ್ರಮುಖ ರಾಜಕೀಯ ನಾಯಕರಾದ ಮಾಜಿ ಸಚಿವ ಪ್ರಕಾಶ್ ದಾಸ್, ಮಾಜಿ ಶಾಸಕ ಸುಬಲ್ ಭೌಮಿಕ್, ತ್ರಿಪುರಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಾಂತನು ಸಾಹಾ ಸೇರಿದಂತೆ ಹಲವು ನಾಯಕರು ಟಿಎಂಸಿಯ ಕದ ತಟ್ಟಿದ್ದಾರೆ.

ತ್ರಿಪುರಾದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ವೇಳೆಗೆ ಪಕ್ಷವನ್ನು ಆಳವಾಗಿ ಬೇರೂರುವಂತೆ ಮಾಡಿ ಅಧಿಕಾರದಲ್ಲಿರುವ ಬಿಜೆಪಿಯ ಲೆಕ್ಕಾಚಾರವನ್ನು ಬುಡಮೇಲು ಮಾಡಲು ಟಿಎಂಸಿ ಯತ್ನಿಸುತ್ತಿದೆ.

ಅಸ್ಸಾಂನ ಬರಾಕ್ ಕಣಿವೆಯ ವ್ಯಾಪ್ತಿಯಲ್ಲಿ ಬರುವಂತಹ ಮೂರು ಜಿಲ್ಲೆಗಳಲ್ಲಿ ಟಿಎಂಸಿ ಪರ ಗಾಳಿ ಬೀಸುತ್ತಿದೆ. ಕಚಾರ್, ಕರೀಂಗಂಜ್ ಹಾಗೂ ಹೈಲಾಕಂಡಿಯಲ್ಲಿ ಪ್ರಭಾವಿ ನಾಯಕಿಯಾಗಿ ಗುರುತಿಸಿಕೊಂಡಂತಹ ಕಾಂಗ್ರೆಸ್ ನಾಯಕಿ ಸುಶ್ಮಿತಾ ಅವರನ್ನು ಟಿಎಂಸಿಗೆ ಸ್ವಾಗತಿಸಿ ದೊಡ್ಡ ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಚಿಂತನೆ ನಡೆಸಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ನಾಯಕರು ಪಕ್ಷಾಂತರ ಮಾಡುವ ಸಾಧ್ಯತೆಯನ್ನೂ ಈಗ ಅಲ್ಲಗೆಳೆಯಲಾಗುವುದಿಲ್ಲ.

“ಈಶಾನ್ಯ ರಾಜ್ಯಗಳಲ್ಲಿ ಟಿಎಂಸಿಯು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ ಆಯಾ ಪ್ರದೇಶದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೇರಿಸುವ ಚಿಂತನೆ ನಡೆಯುತ್ತಿದೆ. ಇದರಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಟಿಎಂಸಿಯ ನೆಲೆ ವಿಸ್ತರಿಸುವುದಲ್ಲದೇ, ಅದನ್ನು ಗಟ್ಟಿಗೊಳಿಸಿ ಮುಂಬರುವ ಚುನಾವಣೆಗಳಲ್ಲಿ ಸಶಕ್ತವಾಗಿ ಸ್ಪರ್ಧಿಸಲು ಅನುಕೂಲವಾಗುತ್ತದೆ,” ಟಿಎಂಸಿಯ ಮೂಲಗಳು ತಿಳಿಸಿವೆ.

ತ್ರಿಪುರಾದಲ್ಲಿ ಮೊದಲು ಚುನಾವಣೆ ಬರುವುದರಿಂದ ಅತ್ತ ಕಡೆಗೆ ಟಿಎಂಸಿ ಹೆಚ್ಚಿನ ಗಮನ ಹರಿಸಲಿದೆ. ಇಲ್ಲಿಯವರೆಗೆ ನಡೆದಿರುವ ಅವ್ಯವಹಾರ ಹಾಗೂ ಹಗರಣಗಳ ಕುರಿತು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಜನರ ಗಮನ ಸೆಳೆಯುವ ಯೋಜನೆಯಿದೆ. ಮುಖ್ಯವಾಗಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣವು ಬಿಜೆಪಿ ಪಾಲಿಗೆ ಮುಳುವಾಗಲಿದೆ.
ತ್ರಿಪುರಾದಲ್ಲಿ ಇಂಡಿಯನ್ ಪಾಲಿಟಿಕಲ್ ಆ್ಯಕ್ಷನ್ ಕಮಿಟಿ (I-PAC) ತಂಡವೊಂದು ಈಗಾಗಲೇ ಬಿಡು ಬಿಟ್ಟಿದ್ದು, ರಾಜಕೀಯವಾಗಿ ಟಿಎಂಸಿ ಬೆಳೆಯುವಲ್ಲಿ ಅದು ಸಹಕರಿಸಲಿದೆ. ರಾಜ್ಯದ ರಾಜಕೀಯ ಸ್ಥಿತಿಗತಿ, ಕೊರತೆ, ಸರ್ಕಾರದ ವೈಫಲ್ಯ, ಜನರ ಆಕಾಂಕ್ಷೆ, ಭಿನ್ನಮತೀಯ ನಾಯಕರ ವಿವರ ಸೇರಿದಂತೆ ಹಲವು ರೀತಿಯ ಮಾಹಿತಿಯನ್ನು ಒಳಗೊಂಡ ವಾಸ್ತವ ವರದಿಯನ್ನು ಈ ತಂಡ ಟಿಎಂಸಿ ನಾಯಕರಿಗೆ ನೀಡಲಿದೆ.

ತ್ರಿಪುರ ಬಿಜೆಪಿ ನಾಯಕರಾದ ಬಿಪ್ಲಬ್ ಕುಮಾರ್ ದೇಬ್ ಹಾಗೂ ಸುದೀಪ್ ರಾಯ್ ಬರ್ಮನ್ ಅವರ ನಡುವೆ ಉಂಟಾಗಿರುವ ಭಿನ್ನಮತವನ್ನು ಟಿಎಂಸಿಯು ಬಳಸಿಕೊಳ್ಳಲು ಯತ್ನಿಸುತ್ತಿದೆ. ಪಕ್ಷದಿಂದ ಹೊರಬರಲು ಯಾರಾದರು ಇಚ್ಚಿಸಿದರೆ ಕೂಡಲೇ ಅವರನ್ನು ಟಿಎಂಸಿ ಕಡೆಗೆ ಸೆಳೆಯಲು ತೀವ್ರವಾದ ಪ್ರಯತ್ನ ನಡೆಸಲಾಗುತ್ತಿದೆ.

ಇನ್ನು ತನ್ನದೇ ಪಕ್ಷದ ಮುಖಂಡರ ಸತ್ಯ ಶೋಧನಾ ತಂಡವನ್ನು ಈಶಾನ್ಯ ರಾಜ್ಯಗಳಿಗೆ ಟಿಎಂಸಿ ಕಳುಹಿಸಿಕೊಟ್ಟಿದೆ. ಈ ತಂಡವು ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳಲು ಇರುವ ಅವಕಾಶ ಹಾಗೂ ಅಲ್ಲಿ ಮೈತ್ರಿಯ ಸಾಧ್ಯತೆಯನ್ನು ಅಧ್ಯಯನ ಮಾಡಲಿದೆ.

ರಾಷ್ಟ್ರೀಯವಾಗಿ ಟಿಎಂಸಿಯನ್ನು ಬಲಪಡಿಸುವ ಇರಾದೆಯನ್ನು ಪಶ್ಚಿಮ ಬಂಗಾಳ ಚುನಾವಣೆಯ ನಂತರವೇ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ವ್ಯಕ್ತಪಡಿಸಿದ್ದರು. “ನೀವು ಯಾವುದೇ ತಪ್ಪು ಮಾಡಬೇಡಿ. ನಾವು ಇತರ ರಾಜ್ಯಗಳಿಗೂ ಹೋಗುತ್ತೇವೆ. ಅಲ್ಲಿ ಕೇವಲ ಪಕ್ಷವನ್ನು ಅಸ್ಥಿತ್ವಕ್ಕೆ ತರುವುದಷ್ಟೇ ಅಲ್ಲದೇ, ಅಧಿಕಾರವನ್ನೂ ಹಿಡಿಯುತ್ತೇವೆ,” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ರಾಜಕೀಯ ವಿಶ್ಲೇಷಕ ಬಿಸ್ವಂತ್ ಚಕ್ರವರ್ತಿ ಹೇಳುವ ಪ್ರಕಾರ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಪದೇ ಪದೇ ರಾಷ್ಟ್ರ ರಾಜಕಾರಣದ ಪಡಸಾಲೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಬಿಜೆಪಿಯೇತರ ಪಕ್ಷಗಳ ಮೈತ್ರಿಕೂಟವನ್ನು ರಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜತೆಗೇ, ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳ ಬಲ ಕಡಿಮೆ ಇರುವುದನ್ನು ಬಳಸಿಕೊಂಡು ತಮ್ಮ ಪಕ್ಷದ ಬಲವರ್ಧನೆಗೆ ಪ್ರಯತ್ನಿಸುತ್ತಿದ್ದಾರೆ, ಎಂದು ಹೇಳಿದ್ದಾರೆ.

ಈ ಎರಡೂ ವಿಚಾರಗಳು ಟಿಎಂಸಿಗೆ ಹೊಸತಲ್ಲ. ಈ ಹಿಂದೆ ಎರಡು ಬಾರಿ ಲೋಕಸಭಾ ಚುನಾವಣೆ ನಡೆದಾಗಲೂ ದೀದಿ ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದ್ದರು. ಇದರಿಂದಾಗಿ ವಿಪಕ್ಷಗಳ ನಡುವೆ ಮತಗಳು ವಿಭಜನೆಯಾಗುವುದನ್ನು ತಪ್ಪಿಸುವ ಯೋಚನೆ ದೀದಿಯದ್ದಾಗಿತ್ತು. ಆದರೆ, ಪ್ರತೀ ಬಾರಿಯೂ ಈ ಯೋಜನೆಯಲ್ಲಿ ದೀದಿ ವಿಫಲರಾಗಿದ್ದರು.

ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಈ ಹಿಂದೆಯೂ ಟಿಎಂಸಿ ಭಾಗವಹಿಸಿತ್ತು. ದೆಹಲಿಯಲ್ಲಿಯೂ ಕೆಲವು ಕ್ಷೇತ್ರಗಳನ್ನು ಗೆಲ್ಲುವಲ್ಲಿ ಟಿಎಂಸಿ ಸಫಲವಾಗಿತ್ತು. ಆದರೆ, ಟಿಎಂಸಿ ಬೆಂಬಲದಿಂದ ಗೆದ್ದು ಬಂದ ಶಾಸಕರು ನಂತರ ಬೇರೆ ಪಕ್ಷಗಳಿಗೆ ವಲಸೆ ಹೋಗಿದ್ದರು. ಇದರಿಂದಾಗಿ ದೀದಿ ಯೋಜನೆ ಬುಡಮೇಲಾಗಿತ್ತು.

ಆದರೆ, ಈ ಬಾರಿ ಅಂತಹ ಯಾವುದೇ ಪ್ರಮಾದಗಳಿಗೆ ಆಸ್ಪದ ನೀಡದಂತೆ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಅಸ್ಸಾಂನ ಬರಾಕ್ ಕಣಿವೆ ಪ್ರದೇಶದಲ್ಲಿ ಟಿಎಂಸಿಯ ಪ್ರಭಾವ ಈಗಾಗಲೇ ಇದ್ದು, ಅದನ್ನು ಮತ್ತಷ್ಟು ವೃದ್ಧಿಸುವ ಪ್ರಯತ್ನ ನಡೆಯುತ್ತಿದೆ. ಈ ಪ್ರಯತ್ನಗಳ ಫಲವೇನು ಎಂಬುದನ್ನು ತಿಳಿಯಲು ಚುನಾವಣೆಗೆ ಕಾಯಬೇಕಷ್ಟೇ.

Tags: BJPMamata Banerjeenational politicsTMC Partyಅಭಿಷೇಕ್ ಬ್ಯಾನರ್ಜಿಕಚಾರ್ಬಿಜೆಪಿಬಿಸ್ವಂತ್ ಚಕ್ರವರ್ತಿಮಾಜಿ ಶಾಸಕ ಸುಬಲ್ ಭೌಮಿಕ್ಮಾಜಿ ಸಚಿವ ಪ್ರಕಾಶ್ ದಾಸ್ಶಾಂತನು ಸಾಹಾಸುಶ್ಮಿತಾ
Previous Post

ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ:ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ

Next Post

ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ: ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಅಧಿಕಾರಿಗಳು

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ: ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಅಧಿಕಾರಿಗಳು

ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ: ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಅಧಿಕಾರಿಗಳು

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada