• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ನಾರದಾ ಲಂಚ ಪ್ರಕರಣ- ಟಿಎಂಸಿ ಶಾಸಕ, ಸಚಿವರ ಬಂಧನ ವಿರೋಧಿಸಿ ಸಿಬಿಐ ಕಚೇರಿ ಮುಂದೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ

Any Mind by Any Mind
May 17, 2021
in Uncategorized
0
ನಾರದಾ ಲಂಚ ಪ್ರಕರಣ- ಟಿಎಂಸಿ ಶಾಸಕ, ಸಚಿವರ ಬಂಧನ ವಿರೋಧಿಸಿ ಸಿಬಿಐ ಕಚೇರಿ ಮುಂದೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ
Share on WhatsAppShare on FacebookShare on Telegram

ನಾರದಾ ಲಂಚಪ್ರಕರಣದ ಆರೋಪದಡಿ ತೃಣಮೂಲ ಕಾಂಗ್ರೆಸ್ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ವು ಸೋಮುವಾರ ಬಂಧಿಸಿದೆ. ಬಂಧನ ವಿರೋಧಿಸಿ ಟಿಎಂಸಿ ಬೆಂಬಲಿಗರು ಕೋಲ್ಕತ್ತಾ ಸಿಬಿಐ ಕಚೇರಿಯ ಮುಂದೆ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ಈ ಪ್ರಕರಣ ಸಂಬಂಧ ಟಿಎಂಸಿ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಬಂಧನದ ವಿರುದ್ಧ ಮುಖ್ಯಮಂತ್ರಿ ಮಮತಾ ಕಿಡಿ

ಸಚಿವರು, ಶಾಸಕರ ಬಂಧನದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶಗೊಂಡಿದ್ದಾರೆ. ಇದೊಂದು ಅಕ್ರಮ ಬಂಧನವೆಂದು ವಿರೋಧಿಸಿದ ಅವರು ಸಿಬಿಐ ಕಚೇರಿಗೆ ತೆರಳಿದ್ದಾರೆ. ಮೊದಲು ನನ್ನನ್ನು ಬಂಧಿಸಲೆಂದು ಮಮತಾ ಸಿಬಿಐ ಗೆ ಸವಾಲು ಹಾಕಿದ್ದಾರೆಂದು ವಕೀಲ, ಟಿಎಂಸಿ ಮುಖಂಡ ಅನಿಂದ್ಯಾ ರೌತ್ ವರದಿಗಾರರಿಗೆ ತಿಳಿಸಿದ್ದಾರೆ

West Bengal Chief Minister Mamata Banerjee arrives at the CBI office pic.twitter.com/FM2B1zaeWL

— ANI (@ANI) May 17, 2021

ಸಿಬಿಐ ಕಚೇರಿ ಮುಂದೆ ಟಿಎಂಸಿ ನಾಯಕರಿಂದ ಪ್ರತಿಭಟನೆ

ಶಾಸಕ, ಸಚಿವರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಟಿಎಂಸಿ ಬೆಂಬಲಿಗರು, ಕಾರ್ಯಕರ್ತರು ಕೋಲ್ಕತ್ತಾದ ಸಿಬಿಐ ಕಚೇರಿ ಮುಂದೆ ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

#WATCH | TMC supporters hold protest outside the CBI office over the arrest of its leaders. pic.twitter.com/0lBPK92zfA

— ANI (@ANI) May 17, 2021

ಏನಿದು ನಾರದ ಲಂಚಪ್ರಕರಣ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವು ಅಧಿಕಾರಿಗಳು ಲಂಚ ಪಡೆಯುತ್ತಿದ್ದುದನ್ನು ನಾರದಾ ನ್ಯೂಸ್ ಪೋರ್ಟಲ್ ಕುಟುಕು ಕಾರ್ಯಾಚರಣೆ ಮೂಲಕ ಬಯಲಿಗೆ ಎಳೆದಿತ್ತು.

ನಾರದಾ ನ್ಯೂಸ್ ಪೋರ್ಟಲ್ ಮುಖ್ಯಸ್ಥ ಮ್ಯಾಥ್ಯೂ ಸ್ಯಾಮುಯಲ್ ಅವರು ಉದ್ಯಮಿ ರೂಪದಲ್ಲಿ ಟಿಎಂಸಿ ನಾಯಕರ ಜತೆ ವ್ಯವಹಾರ ಕುದುರಿಸುವ ಕಾರ್ಯಾಚರಣೆಯಾಗಿದ್ದು, 2014ರಲ್ಲಿ ಈ ಕುಟುಕು ಕಾರ್ಯಾಚರಣೆ ನಡೆಸಲಾಗಿತ್ತಾದರೂ 2016ರ ಪ.ಬಂಗಾಳ ಚುನಾವಣೆಯಲ್ಲಿ ಸದ್ದು ಮಾಡಿತ್ತು. ವ್ಯಾಪಾರಿಯಂತೆ ನಟಿಸಿ ಟಿಎಂಸಿ ನಾಯಕರಿಗೆ ಹಣದ ಆಮಿಷಯೊಡ್ಡುವ ಕುಟುಕು ಕಾರ್ಯಾಚರಣೆ ಇದಾಗಿದ್ದು, ಈ ಹಗರಣದ ವಿಡಿಯೋ ದೃಶ್ಯಾವಳಿಗಳು 2016 ರಲ್ಲಿ ಬಯಲಿಗೆ ಬಂದಿತ್ತು. ಹಾಗು ಹಲವು ಚಾನಲ್ ಗಳಲ್ಲಿ ಪ್ರಸಾರವಾಗಿತ್ತು.

ಈಸ್ಟಿಂಗ್ ಆಪರೇಷನ್ನಲ್ಲಿ ಹಲವು ಸಂಸದರು, ಶಾಸಕರು, ಅಧಿಕಾರಿಗಳ ಲಂಚಗುಳಿತನ ಬೆಳಕಿಗೆ ಬಂದಿತ್ತು. 7 ಸಂಸದರು, 4 ಜನ ಸಚಿವರು, ಒಬ್ಬರು ಶಾಸಕರು ಹಾಗು ಒಬ್ಬ ಐಪಿಎಸ್ ಅಧಿಕಾರಿ ಕಾಣಿಸಿಕೊಂಡಿಕೊಂಡಿದ್ದರು. 2017ರ ಮಾರ್ಚ್ ತಿಂಗಳಲ್ಲಿ ಕೋಲ್ಕತ್ತಾ ಹೈಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶ ನೀಡಿತ್ತು.

Tags: TMC workers protest outside CBI office after arrest of Bengal ministers
Previous Post

ಲಾಕ್‌ಡೌನ್‌ ವಿಸ್ತರಣೆ: ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯ –ಹೆಚ್‌ಡಿಕೆ

Next Post

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ  ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada