• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಒಂಟಿ‌ ಮಹಿಳೆಯರಿಗೂ ರೇಷನ್ ಕಾರ್ಡ್: ತಮಿಳು ನಾಡು ಸರ್ಕಾರದ ನಿರ್ಧಾರ ಒಂಟಿ ಮಹಿಳೆಯರ ಬದುಕಿನಲ್ಲಿ ಬದಲಾವಣೆ ತರಲಿದೆಯೇ?

ಫಾತಿಮಾ by ಫಾತಿಮಾ
November 4, 2021
in ದೇಶ
0
ಒಂಟಿ‌ ಮಹಿಳೆಯರಿಗೂ ರೇಷನ್ ಕಾರ್ಡ್: ತಮಿಳು ನಾಡು ಸರ್ಕಾರದ ನಿರ್ಧಾರ ಒಂಟಿ ಮಹಿಳೆಯರ ಬದುಕಿನಲ್ಲಿ ಬದಲಾವಣೆ ತರಲಿದೆಯೇ?
Share on WhatsAppShare on FacebookShare on Telegram

ಅವಿವಾಹಿತ, ತಮ್ಮ ಪತಿ ಅಥವಾ ಕುಟುಂಬದಿಂದ ಬೇರ್ಪಟ್ಟಿರುವ ತಮಿಳುನಾಡಿನ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಲಾಗುವುದು ಎಂದು ಹೇಳಿರುವ ತಮಿಳು ನಾಡಿನ ಸರ್ಕಾರ ಈ ಮಹಿಳೆಯರು ಇನ್ನು ಮುಂದೆ ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿಗಳನ್ನು ಪಡೆಯಬಹುದು‌ ಎಂದಿದೆ.

ADVERTISEMENT

ಇವರೂ ಸಹ ಪಡಿತರ ಚೀಟಿ ಪಡೆಯಲು ಇತರ ಎಲ್ಲರಂತೆಯೇ ಅರ್ಜಿ ಸಲಿಸಬೇಕಿದೆ. ಹೊಸ ಕಾರ್ಡ್ ಪಡೆಯಲು ಅರ್ಜಿದಾರರು ಗ್ಯಾಸ್ ಸಂಪರ್ಕ ಹೊಂದಿರುವ ಅಡುಗೆ ಮನೆ ಅಥವಾ ಇತರ ಅಡುಗೆ ಸೌಲಭ್ಯವನ್ನು ಹೊಂದಿರಬೇಕು. ತನ್ನ ಆಧಾರ್ ಕಾರ್ಡ್ ಮತ್ತು ಗ್ಯಾಸ್ ಬಿಲ್ ವಿವರಗಳೊಂದಿಗೆ ಒಂಟಿಯಾಗಿ ವಾಸಿಸುವವ ವಿವರಗಳನ್ನು ಲಿಖಿತವಾಗಿ ಸಲ್ಲಿಸಬೇಕು.  ಇದರ ನಂತರ, ಮನೆಯನ್ನು ಕಂದಾಯ ನಿರೀಕ್ಷಕರು ಲೆಕ್ಕಪರಿಶೋಧನೆ ಮಾಡಿ ಕಾರ್ಡ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ತಮ್ಮ ಸಂಗಾತಿಯಿಂದ ಕಾನೂನುಬದ್ಧವಾಗಿ ಬೇರ್ಪಡದೆ  ಬೇರೆಯದೇ ಆಗಿ ಜೀವಿಸುವ ಮಹಿಳೆಯರಿಗೆ  ಈ ಹಿಂದೆ ಪಡಿತರ ಚೀಟಿ ಪಡೆಯಲು ಸಾಧ್ಯವಿರಲಿಲ್ಲ. ಇದನ್ನು ತಪ್ಪಿಸಲು ಮಹಿಳೆಯರಿಗೆ ಅನುಕೂಲವಾಗುವಂತೆ ಕಾನೂನಿನಲ್ಲಿ ತಿದ್ದುಪಡಿ ಮಾಡಲಾಗಿದೆ.

ಪ್ರಸ್ತುತ ನಿಯಮಗಳ ಪ್ರಕಾರ ವ್ಯಕ್ತಿಯು ಮರಣಹೊಂದಿದ್ದರೆ, ವಿವಾಹಕ್ಕೊಳಪಟ್ಟರೆ, ದತ್ತು ಪಡೆದಿದ್ದರೆ ಅಥವಾ ವಿಚ್ಛೇದನ ಪಡೆದಿದ್ದರೆ ಮಾತ್ರ ಕುಟುಂಬದ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದುಹಾಕಬಹುದು. ಆದರೆ ಇನ್ನು ಮುಂದೆ ಒಂಟಿ ಮಹಿಳೆಯರೂ ಹೊಸ ಕಾರ್ಡ್‌ಗೆ ಅರ್ಜಿ ಹಾಕಬಹುದು.

ಪ್ರತ್ಯೇಕವಾಗಿ ವಾಸಿಸುವ ತನ್ನ ಹೆಂಡತಿಯ ಹೆಸರನ್ನು ರೇಷನ್ ಕಾರ್ಡ್‌ನಿಂದ ತೆಗೆದುಹಾಕಲು ಪತಿ ಸಿದ್ಧವಿಲ್ಲದಿದ್ದಾಗ, ಮಹಿಳೆಯು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ತನ್ನ ಆಹಾರ ಭದ್ರತೆಯನ್ನು ಕಳೆದುಕೊಳ್ಳುತ್ತಾಳೆ.  ಆದ್ದರಿಂದ, ಮಹಿಳೆಯ ಸ್ವಯಂ ಘೋಷಣೆಯ ಆಧಾರದ ಮೇಲೆ‌ ಕ್ಷೇತ್ರ ಪರಿಶೀಲನಾ ವರದಿಯ ನಂತರ ನಾಗರಿಕ ಸರಬರಾಜು ವಲಯದ ಅಧಿಕಾರಿಗಳು ಪತಿಯ ಪಡಿತರ ಚೀಟಿಯಿಂದ ಆಕೆಯ ಹೆಸರನ್ನು ತೆಗೆದುಹಾಕಬಹುದು ಮತ್ತು ಅವರಿಗೆ ಹೊಸದನ್ನು ನೀಡಬಹುದು‌‌ ಎಂಬುವುದಾಗಿ ಸರ್ಕಾರದ ಅಧಿಕೃತ ಹೇಳಿಕೆಯು ಉಲ್ಲೇಖಿಸಿದೆ.

ಈ ಹಿಂದೆ, ಮಕ್ಕಳೊಂದಿಗೆ ಅಥವಾ ಇಲ್ಲದೆ ಪ್ರತ್ಯೇಕವಾಗಿ ವಾಸಿಸುವ ವಿವಾಹಿತ ಮಹಿಳೆ ಕಾನೂನುಬದ್ಧವಾಗಿ ಪತಿಯಿಂದ ಬೇರ್ಪಟ್ಟ ಹೊರತು ಪಡಿತರ ಚೀಟಿ ಪಡೆಯಲು ಅರ್ಹರಾಗಿರಲಿಲ್ಲ.  ಅವಿವಾಹಿತ ಮಹಿಳೆಯರನ್ನು ‘ಕುಟುಂಬ’ ಎಂದು ಪರಿಗಣಿಸಲಾಗುತ್ತಿರಲಿಲ್ಲ. ಇದು ಪೋಷಕರಿಂದ ಮತ್ತು ಪತಿಯಿಂದ ಬೇರ್ಪಟ್ಟ ಮಹಿಳೆಯರನ್ನು ಸರ್ಕಾರಿ ಸೌಲಭ್ಯಗಳಿಂದ ದೂರವಿಟ್ಟಿತ್ತು.

ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ (ಎಐಡಿಡಬ್ಲ್ಯುಎ)ವು ಒಂಟಿ ಮಹಿಳೆಯರಿಗೆ, ವಿಶೇಷವಾಗಿ ಕಡಿಮೆ ಆದಾಯದ ಸ್ತರದಿಂದ ಬಂದವರಿಗೆ ಪಡಿತರ ಚೀಟಿಗಳನ್ನು ಒದಗಿಸುವ ಬಗ್ಗೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.‌ ತಮಿಳು ನಾಡು ಸರ್ಕಾರದ ಹೊಸ ನೀತಿಯನ್ನು ಸ್ವಾಗತಿಸಿರುವ ಸಂಘವು ಇದರ ಪ್ರಯೋಜನಗಳು ಅಗತ್ಯವಿರುವವರಿಗೆ ತಲುಪುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಇದು ರಾಜ್ಯ ಸರ್ಕಾರದ ಅತ್ಯುತ್ತಮ ಮತ್ತು ಪ್ರಗತಿಪರ ನಿರ್ಧಾರಗಳಲ್ಲಿ ಒಂದಾಗಿದೆ ಎಂದು ಸಂಘ ಹೇಳಿದೆ.  ಎಐಡಿಡಬ್ಲ್ಯೂಎ ರಾಜ್ಯ ಕಾರ್ಯದರ್ಶಿ ಎಸ್‌ಕೆ ಪೊನ್ನುತ್ತಾಯಿ ಮಾತನಾಡಿ “ಲಾಕ್‌ಡೌನ್ ಘೋಷಣೆಯಾದಾಗ ಮಹಿಳೆಯರು ಪೊಂಗಲ್ ಮತ್ತು ಇತರ ಹಬ್ಬಗಳ ಸಮಯದಲ್ಲಿ ಪಡಿತರ ಚೀಟಿಗಳ ಕೊರತೆಯಿಂದಾಗಿ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗಿರಲಿಲ್ಲ. ಈಗ ಸರ್ಕಾರದ ಈ   ನಿರ್ಧಾರವು ಆಹಾರ ಭದ್ರತೆ ಮತ್ತು ಉಳಿದ ಎಲ್ಲಾ ಪ್ರಯೋಜನಗಳು ಅಗತ್ಯವಿರುವವರಿಗೆ ತಲುಪುವುದನ್ನು ಖಚಿತಪಡಿಸುತ್ತದೆ” ಎಂದು ಹೇಳಿದ್ದಾರೆ.

‘ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ’ ಪರಿಕಲ್ಪನೆಯ ಕುರಿತು ಮಾತನಾಡಿದ ಹಿರಿಯ ವಕೀಲೆ ಸುಧಾ ರಾಮಲಿಂಗಂ “ನಾವು ಯಾವಾಗಲೂ ಪಿತೃಪ್ರಧಾನ ಸಂಸ್ಕೃತಿಯಿಂದ  ಮಾರ್ಗದರ್ಶನ ಪಡೆದುಕೊಂಡವರು. ಮಹಿಳೆಯರು ಗಂಡನ ಕುಟುಂಬದಲ್ಲಿ ವಾಸಿಸುತ್ತಾರೆ ಮತ್ತು ಸ್ವಂತವಾಗಿ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂಬುವುದು ಇದೇ ಸಂಸ್ಕೃತಿಯ ನಂಬಿಕೆ” ಎಂದು  ಹೇಳಿದ್ದಾರೆ.

ತಮಿಳುನಾಡು ಸರ್ಕಾರವು ಕೈಗೊಂಡಿರುವ ಈ ಐತಿಹಾಸಿಕ ನಿರ್ಧಾರವು ಮಹಿಳೆಯರ ಬದುಕಿನಲ್ಲಿ ಅತಿ ಮುಖ್ಯವಾದ ಪಾತ್ರ ನಿರ್ವಹಿಸಲಿದ್ದು ಪತಿಯಿಂದ ಅಥವಾ ಕುಟುಂಬದಿಂದ ದೂರವಿರಲು ಬಯಸಿ ಆರ್ಥಿಕ ಕಾರಣದಿದ ಬೇರ್ಪಡಲಾಗದ ಮಹಿಳೆಯರಿಗೆ ಬಲ ತುಂಬಲಿದೆ. ಈಗಾಗಲೇ ಈ ನಿರ್ಧಾರಕ್ಕೆ ಪ್ರಗತಿಪರ ವಲಯದಿಂದ ತೀವ್ರ ಬೆಂಬಲ ವ್ಯಕ್ತವಾಗಿದ್ದು ದೇಶಾದ್ಯಂತ ಈ ನೀತಿ ಅಳವಡಿಸಿಕೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

Tags: Covid 19EligibleFamilyGovt RecognisesRation CardsSingle WomenTNನರೇಂದ್ರ ಮೋದಿ
Previous Post

ಪುನೀತ್‌ ರಾಜ್‌ ಕುಮಾರ್ ಸಮಾಧಿಗೆ ನಮನ ಸಲ್ಲಿಸಿದ ತಮಿಳು ನಟ ವಿಜಯ್‌ ಸೇತುಪತಿ | vijaysethupathi |

Next Post

ಬೆಂಗಳೂರಿನ ಪ್ರಮುಖ ರಸ್ತೆಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರಿಡಲು ಒತ್ತಾಯ!

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಬೆಂಗಳೂರಿನ ಪ್ರಮುಖ ರಸ್ತೆಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರಿಡಲು ಒತ್ತಾಯ!

ಬೆಂಗಳೂರಿನ ಪ್ರಮುಖ ರಸ್ತೆಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರಿಡಲು ಒತ್ತಾಯ!

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada