• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರತಿಧ್ವನಿ, TNM ಇಂಪ್ಯಾಕ್ಟ್:‌ 3 ಕ್ಷೇತ್ರಗಳಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ

Shivakumar A by Shivakumar A
November 25, 2022
in Top Story, ಕರ್ನಾಟಕ
0
ಪ್ರತಿಧ್ವನಿ, TNM ಇಂಪ್ಯಾಕ್ಟ್:‌ 3 ಕ್ಷೇತ್ರಗಳಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ನಡೆದ ಭಾರೀ ಪರಮಾಣದ ಮತದಾರರ ಮಾಹಿತಿ ಕಳ್ಳತನದ ಕುರಿತು ದಿ ನ್ಯೂಸ್ ಮಿನಿಟ್ ಮತ್ತು ಪ್ರತಿದ್ವನಿ ತಂಡ ನಡೆಸಿ ತನಿಖಾ ವರದಿಯ ಬಳಿಕ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ನಗರದ ಮೂರು ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿಗಳ ಪರಿಶೀಲನೆಗೆ ನಿರ್ದೇಶನ ನೀಡಿದೆ. ಚುನಾವಣಾ ಸಂಸ್ಥೆಯು ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯನ್ನು 15 ದಿನಗಳವರೆಗೆ ವಿಸ್ತರಿಸಿದೆ.

ADVERTISEMENT

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗವು, ” ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದ ಕ್ಷೇತ್ರಗಳಲ್ಲಿ ಮತದಾರರ ಸೇರ್ಪಡೆ ಮತ್ತು ಹೆಸರು ಅಳಿಸುವಿಕೆ ಬಗ್ಗೆ 100% ಪರಿಶೀಲನೆಗೆ ಒಳಪಡಿಸಲಾಗುವುದು, ಈ ಕ್ಷೇತ್ರಗಳಲ್ಲಿ ಡಿಸೆಂಬರ್ 24 ರವರೆಗೂ ಮತದಾರರ ಪರಿಷ್ಕರಣೆಗೆ ಅವಧಿ ವಿಸ್ತರಿಸಲಾಗುವುದು” ಎಂದು ತಿಳಿಸಿದೆ.

PRATIDHVANI AND TNM ಪ್ರತಿಧ್ವನಿ ಶೋಧ | ಸರ್ಕಾರದ ಬೆಂಬಲದೊಂದಿಗೆ ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿದ ಬೆಂಗಳೂರಿನ NGO

ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ಶುದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಬಿಬಿಎಂಪಿಯ ಹೊರಗಿನ ವಿಶೇಷ ಅಧಿಕಾರಿಗಳನ್ನು ಸಹ ಚುನಾವಣಾ ಆಯೋಗ ನೇಮಿಸಿದೆ. ಅಕ್ರಮವಾಗಿ ಸಂಗ್ರಹಿಸಿದ ದಾಖಲೆಗಳು ಪ್ರತ್ಯಕ್ಷ ಅಥವಾ ಪರೋಕ್ಷ ಬಳಕೆಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಈ ನಡುವೆ, ಬಿಬಿಎಂಪಿಯ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಎಡಿಇಒ) ಎಸ್ ರಂಗಪ್ಪ, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಶುರು ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಪ್ರತಿಧ್ವನಿ ಇಂಪ್ಯಾಕ್ಟ್; ಬಿಬಿಎಂಪಿ ವಿಶೇಷ ಆಯುಕ್ತ, ಜಿಲ್ಲಾಧಿಕಾರಿ ಅಮಾನತು

ಮತದಾರರ ಪಟ್ಟಿಗಳ ಪರಿಶುದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಖಚಿತಪಡಿಸಿಕೊಳ್ಳಲು ಮೂವರು ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಶಿವಾಜಿನಗರ ಕ್ಷೇತ್ರದ ಉಸ್ತುವಾರಿಯಾಗಿ ಮಾಡಲಾಗಿದೆ, ಆರ್ ವಿಶಾಲ್ (ಐಎಎಸ್) ರನ್ನು ಚಿಕ್ಕಪೇಟೆಗೆ ವಿಶೇಷ ಅಧಿಕಾರಿಯಾಗಿದ್ದು, ಅಜಯ್ ನಾಗಭೂಷಣ (ಐಎಎಸ್) ಮಹದೇವಪುರ ಪ್ರಭಾರಿ ವಿಶೇಷ ಅಧಿಕಾರಿಯಾಗಲಿದ್ದಾರೆ.

ಸ್ಪೋಟಕ ವರದಿ; ಮತದಾರರ ಮಾಹಿತಿ ಸಂಗ್ರಹಿಸಲು ಚಿಲುಮೆ ಏಜೆಂಟ್‌ಗಳಿಗೆ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಕಛೇರಿಯಲ್ಲಿ ತರಬೇತಿ.!

ಮತದಾರರ ಡೇಟಾವನ್ನು ಸಂಗ್ರಹಿಸಲು ಖಾಸಗಿ ವ್ಯಕ್ತಿಗಳು ತಪ್ಪು ಗುರುತಿನ ಚೀಟಿಗಳನ್ನು ಬಳಸಿರುವುದನ್ನು ನಮ್ಮ ತಂಡ ವರದಿ ಬಹಿರಂಗಗೊಳಿಸಿದ್ದು, ಆ ವರದಿ ಆಧಾರದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಇಸಿಐ ಹೇಳಿದೆ. ವರದಿಯ ಪ್ರಕಾರ, ಮೂರು ಕ್ಷೇತ್ರಗಳಾದ   ಶಿವಾಜಿನಗರ,   ಚಿಕ್ಕಪೇಟೆ ಮತ್ತು   ಮಹದೇವಪುರದಲ್ಲಿ ಖಾಸಗಿ ವ್ಯಕ್ತಿಗಳನ್ನು BLOS/BLC ಎಂದು ಗುರುತಿಸುವ ನಕಲಿ ಗುರುತಿನ ಚೀಟಿಗಳು ಕಂಡುಬಂದಿವೆ. ಈ ಮೂರು ಕ್ಷೇತ್ರಗಳ ಬಿಬಿಎಂಪಿಯ ಮೂವರು ಚುನಾವಣಾ ನೋಂದಣಿ ಅಧಿಕಾರಿಗಳನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಆಯೋಗ ಹೇಳಿದೆ.

ನವೆಂಬರ್ 16 ರಂದು ಟಿಎನ್‌ಎಂ ಮತ್ತು ಪ್ರತಿಧ್ವನಿ ತಮ್ಮ  ತನಿಖಾ ವರದಿಯಲ್ಲಿ ಬೆಂಗಳೂರಿನ ಚಿಲುಮೆ ಎಜುಕೇಷನಲ್ ಟ್ರಸ್ಟ್ ಎಂಬ ಖಾಸಗಿ ಎನ್‌ಜಿಒ ನಾಗರಿಕರಿಂದ ಕಾನೂನುಬಾಹಿರವಾಗಿ ಡೇಟಾವನ್ನು ಸಂಗ್ರಹಿಸಲು ಚುನಾವಣಾ ಅಧಿಕಾರಿಗಳಂತೆ ಬಿಂಬಿಸಿ ನೂರಾರು ಕ್ಷೇತ್ರ ಕಾರ್ಯಕರ್ತರನ್ನು ನಿಯೋಜಿಸಿದೆ ಎಂದು ಪ್ರಕಟಿಸಿತ್ತು.  

ಚಿಲುಮೆಯಿಂದ ಅಕ್ರಮವಾಗಿ ಮತದಾರರ ಮಾಹಿತಿ ಕಲೆ; ಅಸಲಿಗೆ ಇದರ ಹಿಂದಿರುವ ಉದ್ದೇಶ ಏನು ?
ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿಕೊಂಡು ಮತದಾರರ ಮಾಹಿತಿ ಸಂಗ್ರಹಿಸಿದ ಅಪರಿಚಿತರು: ಶಿವಾಜಿನಗರ ನಿವಾಸಿಗಳ ಆರೋಪ

ಟಿಎನ್‌ಎಂ ತನಿಖಾ ವರದಿಯ ನಂತರ, ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎರಡು ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಪೊಲೀಸ್ ಪ್ರಕರಣಗಳು ಚಿಲುಮೆಯ ಮುಖ್ಯಸ್ಥ ರವಿಕುಮಾರ್ ಕೃಷ್ಣಪ್ಪ ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ, ಎನ್‌ಜಿಒಗೆ ಸೇರಿದ ಖಾಸಗಿ ವ್ಯಕ್ತಿಗಳಿಗೆ ಮತದಾರರ ಡೇಟಾವನ್ನು ಹಂಚಿಕೊಳ್ಳದಂತೆ ನಾಗರಿಕರಿಗೆ ಎಚ್ಚರಿಕೆ ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆಯನ್ನು ನೀಡಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರನ್ನು ಪಟ್ಟಿಯಿಂದ ಅಳಿಸುವ ನೆಪದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಎಂದು ಹೇಳಿಕೊಳ್ಳುವ ಜನರು ತಮ್ಮ ಮನೆಗೆ ಮರಳಿದ್ದಾರೆ ಎಂದು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಮತದಾರರು ಆತಂಕ ವ್ಯಕ್ತಪಡಿಸಿದ್ದರು. ‌

ಬಿಜೆಪಿಯ ಮಾಜಿ ಶಾಸಕರೊಬ್ಬರು ಮತದಾರರ ಸಮೀಕ್ಷೆಗಾಗಿ 2018ರ ರಾಜ್ಯ ಚುನಾವಣೆಗೆ ಮುನ್ನ ಚಿಲುಮೆಗೆ 18 ಲಕ್ಷ ರೂಪಾಯಿ ಪಾವತಿಸಿದ್ದಾರೆ ಎಂದು ನಮ್ಮ ತನಿಖೆಯ ವೇಳೆ ಬಹಿರಂಗಗೊಂಡಿತ್ತು.

Voter Data Theft : ರಾಜ್ಯದಲ್ಲಿ ಎಲೆಕ್ಷನ್ ಗೂ ಮೊದಲೇ ನಡೀತು ವೋಟರ್‌ ಐಡಿ ಹಗರಣ | Anupam Iyengar | Pratidhvani
Tags: BJPಚಿಲುಮೆಬಿಜೆಪಿಮತದಾರರ ಪಟ್ಟಿ ಪರಿಷ್ಕರಣೆ
Previous Post

ಪ್ರತಿಧ್ವನಿ ಇಂಪ್ಯಾಕ್ಟ್; ಬಿಬಿಎಂಪಿ ವಿಶೇಷ ಆಯುಕ್ತ, ಜಿಲ್ಲಾಧಿಕಾರಿ ಅಮಾನತು

Next Post

ಸಂವಿಧಾನದ ಆಚರಣೆಯೂ ಸಾಂವಿಧಾನಿಕ ನಡೆಯೂ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಸಂವಿಧಾನದ ಆಚರಣೆಯೂ ಸಾಂವಿಧಾನಿಕ ನಡೆಯೂ

ಸಂವಿಧಾನದ ಆಚರಣೆಯೂ ಸಾಂವಿಧಾನಿಕ ನಡೆಯೂ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada