• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವಕರಿಗೆ ಉದ್ಯೋಗ ಸೃಷ್ಟಿಸಲು, ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೃಷ್ಣ ಮಣಿ by ಕೃಷ್ಣ ಮಣಿ
November 3, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ, ಶಾಸಕ ಅಶೋಕ್ ರೈ ಅವರ ಸಾರಥ್ಯದ ರೈ ಎಸ್ಟೇಟ್ಸ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ “ಅಶೋಕ ಜನ-ಮನ” ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು;

“ದಕ್ಷಿಣ ಕನ್ನಡ ಜಿಲ್ಲೆ ಬರಡು ಭೂಮಿಯಂತಾಗುತ್ತಿದೆ. ಕೋಮು ಗಲಭೆ ಸೇರಿದಂತೆ ಇತರ ಸಮಸ್ಯೆಗಳಿಂದಾಗಿ ವಿದ್ಯಾಸಂಸ್ಥೆಗಳಿಗೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಬರುತ್ತಿಲ್ಲ. ಇಲ್ಲಿ ಹುಟ್ಟಿದ ಅನೇಕ ಬ್ಯಾಂಕ್ ಗಳು ಮಾಯವಾಗಿವೆ. ಇಲ್ಲಿನ ಯುವಕರು ಸೌದಿ ಅರೇಬಿಯಾ, ಮುಂಬೈ, ಬೆಂಗಳೂರಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ.

ಆದ ಕಾರಣಕ್ಕೆ ಈ ಭಾಗದ ನಾಯಕರು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಎಂದು ಸಲಹೆ ಕೊಟ್ಟಿದ್ದಾರೆ. ಈ ಭಾಗದಲ್ಲಿ ಅತಿ ಹೆಚ್ಚು ದೇವಸ್ಥಾನಗಳಿವೆ, ಸಮುದ್ರ ತೀರವಿದೆ. ಆದ ಕಾರಣ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ ವಹಿಸಲಾಗುವುದು. ಅತಿ ದೊಡ್ಡ ಬಂದರು ಇದ್ದರೂ ಸಹ ಮಂಗಳೂರಿನಲ್ಲಿ ಉತ್ತಮವಾದ ಫೈವ್ ಸ್ಟಾರ್ ಹೋಟೆಲ್ ಗಳಿಲ್ಲ.

ಪುತ್ತೂರಿನ ಅಭಿವೃದ್ಧಿಗೆ ಅಶೋಕ್ ರವರು ಅನೇಕ ಯೋಜನೆಗಳನ್ನು ಇಟ್ಟುಕೊಂಡು ಮನವಿ ಮಾಡಿದ್ದಾರೆ. ಉಪಚುನಾವಣೆ ಇರುವ ಕಾರಣ ಈಗ ಅದನ್ನು ಬಹಿರಂಗಪಡಿಸಲು ಆಗುವುದಿಲ್ಲ. ಅವರ ಮನವಿಗಳನ್ನು ಹಂತ ಹಂತವಾಗಿ ಪೂರೈಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಎರಡು ಸ್ಥಾನಗಳಷ್ಟೇ ಸಿಕ್ಕಿರಬಹುದು. ಆದರೆ ನಾವು ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುತ್ತೇವೆ.

ಅನೇಕ ರಾಜ್ಯಗಳಲ್ಲಿ ಹಾಗೂ ನಮ್ಮ ರಾಜ್ಯದಲ್ಲಿ ಚುನಾವಣೆಗಳು ನಡೆಯುತ್ತಿವೆ. ನಾನು ಅಶೋಕ್ ರೈ ಅವರ ಬಾಂಧವ್ಯಕ್ಕೆ ಕಟ್ಟು ಬಿದ್ದು ಪುತ್ತೂರಿಗೆ ಬಂದಿದ್ದೇನೆ. ಪುರಂದರ ದಾಸರ ಕೀರ್ತನೆಯಂತೆ ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ, ಪದುಬ ನಾಭನ ಪಾದ ಭಜನೆ ಪರಮ ಸುಖವಯ್ಯ. ಪುತ್ತೂರಿನಲ್ಲಿ ಎಲ್ಲಾ ಸಮಾಜದವರನ್ನು ಪಕ್ಷಾತೀತವಾಗಿ ಭೇಟಿ ಮಾಡುವಂತಹ ಭಾಗ್ಯವನ್ನು ಅಶೋಕ್ ರೈ ಅವರು ನನಗೆ ಒದಗಿಸಿ ಕೊಟ್ಟಿದ್ದಾರೆ.

ಅಶೋಕ್ ರೈ ಅವರು ಮಾಡುತ್ತಿರುವ ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ನಮ್ಮ ಬೆಂಬಲವಿದೆ ಎಂದು ಸೂಚಿಸಲು ಇಡೀ ಸರ್ಕಾರವೇ ಅವರ ಜೊತೆಗಿದೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಅಮ್ಮ ನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ಭಕ್ತಿಯ ನೆನಪು ದೇವರ ಮೂಲ, ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವವು ಮೋಕ್ಷಕ್ಕೆ ಮೂಲ.

ಶಾಸಕ ಅಶೋಕ್ ರೈ ಅವರು ತಂದೆ, ತಾಯಿಗಳ ನೆನಪಿಗೆ ಈ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಅದೃಷ್ಟವಂತ ಎಂದರೆ ಅವಕಾಶಗಳಿಗೆ ಕಾಯುವನಲ್ಲ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವವನು. ಇಂತಹ ಜನಸೇವೆಯನ್ನು ಸೃಷ್ಟಿಸಿಕೊಂಡು ಕಳೆದ 12 ವರ್ಷಗಳಿಂದ ಸತತವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ.

ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ. ಮನುಷ್ಯ ಹುಟ್ಟುವಾಗ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ತಂದೆ ತಾಯಿ, ಗುರು, ದೇವರ ಹಾಗೂ ಸಮಾಜದ ಋಣದಲ್ಲಿ ಹುಟ್ಟುತ್ತಾನೆ. ಈ ಋಣಗಳನ್ನು ಧರ್ಮದಿಂದ ತಿರಿಸಬೇಕು ಎಂದು ಅಶೋಕ್ ರೈ ಅವರು ಸಮಾಜ ಸೇವೆ ಹಾಗೂ ಜನರ ಸೇವೆ ಮೂಲಕ ಕೆಲಸ ಮಾಡುತ್ತಿದ್ದಾರೆ.

ನಿಂಬೆಗಿಂ ಹುಳಿಯಿಲ್ಲ, ದುಂಬಿಗಿಂ ಕರಿಯಿಲ್ಲ, ನಂಬಿಗೆಗಿಂತ ಅಧಿಕ ಗುಣವಿಲ್ಲ, ಶಂಭುವಿಗಿಂತ ಅಧಿಕ ದೇವರಿಲ್ಲ. ಹುಳಿಗಳಲ್ಲೇ ನಿಂಬೆಹುಳಿ ಶ್ರೇಷ್ಠ. ದಿವ್ಯ ಕಪ್ಪು ಶ್ರೇಷ್ಠವಂತೆ ಜೊತೆಗೆ ಶಿವನೇ ಎಲ್ಲಾ ದೇವರಿಗಿಂತ ಶ್ರೇಷ್ಠ ದೇವರಂತೆ. ಅದೇ ರೀತಿ ನಂಬಿಕೆಗಿಂತ ದೇವರಿಲ್ಲ ಎಂದು ಸರ್ವಜ್ಞ ಹೇಳಿದ್ದಾನೆ. ಅಶೋಕ್ ರೈ ಮತ್ತು ಅವರ ಕುಟುಂಬ ಪುತ್ತೂರಿನ ಜನತೆ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ನೀವು ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ.

ಅಶೋಕ್ ರೈ ಅವರದ್ದು ಗುಡುಗು ಸಿಡಿಲಿನಂತಹ ಮಾತು. ಅವರ ಮಾತಿಗೆ ಮಳೆ ಬರುತ್ತದೆ ಎಂದು ಭಾವಿಸಿಕೊಂಡೆ. ಮಾತಿನಲ್ಲಿ ಹೇಗೆ ವೇಗವಿದೆಯೋ, ಅದೇ ರೀತಿ ಕೆಲಸದಲ್ಲಿಯೂ ವೇಗವಿದೆ. ಕ್ಷೇತ್ರದ ಹಿತಕ್ಕಾಗಿ ಅವರನ್ನು ವಿಧಾನಸೌಧಕ್ಕೆ ಕಳಿಸಿ ಕೊಟ್ಟಿರುವುದಕ್ಕೆ ಇಲ್ಲಿನ ಜನತೆಗೆ ಅಭಿನಂದನೆಗಳು.

ಕ್ಷೇತ್ರದ ಅಭಿವೃದ್ಧಿಗೆ ನನ್ನ ಬಳಿ ಜಗಳ

ಪುತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ, ಅಶೋಕ್ ಅವರು ನನ್ನ ಬಳಿ ಬಂದು ಆಗಾಗ್ಗೆ ಜಗಳ ಮಾಡುತ್ತಿರುತ್ತಾರೆ. ಅದಕ್ಕೆ ನಾನು, ಸ್ವಲ್ಪ ನಿಧಾನವಾಗಿ ಹಾಗೂ ತಾಳ್ಮೆಯಿಂದ ಕೆಲಸ ಮಾಡು ಎಂದು ಸಲಹೆ ನೀಡುತ್ತಿರುತ್ತೇನೆ. ಐದು ವರ್ಷಗಳ ಕೆಲಸವನ್ನು ಒಂದೇ ವರ್ಷ ಮಾಡಬೇಡ. ಗುರಿ ಇಟ್ಟುಕೊಂಡು ವರ್ಷಕ್ಕೆ ಇಂತಿಷ್ಟು ಕೆಲಸ ಮಾಡಬೇಕು. ಆಗ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಕಾರಣಕ್ಕಾಗಿ ಕಳೆದ ಎಂಟು ವಿಧಾನಸಭೆ ಚುನಾವಣೆಯನ್ನು ಗೆದ್ದಿದ್ದೇನೆ.

ನಮಗೆ ಜೀವನದಲ್ಲಿ ಯಶಸ್ಸು ಸಿಗಬೇಕಾದರೆ. ಧರ್ಮರಾಯನ ಧರ್ಮತ್ವ, ಕರ್ಣನ ದಾನತ್ವ, ಅರ್ಜುನ ಗುರಿ ಇರಬೇಕು, ವಿಧುರನ ನೀತಿ ಇರಬೇಕು, ಭೀಮನ ಬಲ ಇರಬೇಕು, ಕೃಷ್ಣನ ತಂತ್ರ ಇರಬೇಕು. ಆಗ ಮಾತ್ರ ಯಶಸ್ಸು ಸಾಧ್ಯ. ಈ ಎಲ್ಲಾ ಗುಣಗಳು ಅಶೋಕ್ ರೈ ಅವರ ಬಳಿ ಇದೆ ಎಂದು ಭಾವಿಸಿದ್ದೇನೆ.

ಕಾರ್ಯಕ್ರಮದಲ್ಲಿ ಹಿರಿಯ ನಾಯಕರಿದ್ದರು ಸಹ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮ ಗುರುಗಳಿಂದ ಭಾಷಣ ಕೊಡಿಸಲಾಯಿತು. ಏಕೆಂದರೆ ಧರ್ಮ ನೂರಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಭಕ್ತಿ ಯಾವುದಾದರೂ ಪೂಜೆ ಒಂದೇ, ಕರ್ಮ ಹಲವಾರು ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ಈ ತತ್ವದ ಮೇಲೆ ನಂಬಿಕೆ ಇಟ್ಟವರು ಅಶೋಕ್ ರೈ.

ಗ್ಯಾರಂಟಿಗಳು ಬದಲಾವಣೆ ತಂದಿವೆ

ವಸ್ತ್ರ ದಾನದ ಜೊತೆಗೆ ವಿದ್ಯಾದಾನದಂತಹ ಕೆಲಸವನ್ನು ಅಶೋಕ್ ರೈ ಅವರು ಮಾಡುತ್ತಿದ್ದಾರೆ. ನಮ್ಮ ಸರ್ಕಾರವು ಸಹ ಬದುಕಿನ ಮೇಲೆ ಕೆಲಸ ಮಾಡುತ್ತಿದೆ ಭಾವನೆಗಳ ಮೇಲಲ್ಲ. 1. 20 ಕೋಟಿ ಮಹಿಳೆಯರಿಗೆ ಯಾವುದೇ ಮಧ್ಯವರ್ತಿಗಳ ಹಾಗೂ ಲಂಚದ ಹಾವಳಿ ಇಲ್ಲದೆ, ಅವರ ಖಾತೆಗೆ ನೇರವಾಗಿ ಗೃಹಲಕ್ಷ್ಮೀಯ ಹಣ ಹೋಗುತ್ತಿದೆ. ಐದು ಗ್ಯಾರಂಟಿ ಗಳು ಜನರ ಬದುಕಿನಲ್ಲಿ ಆರ್ಥಿಕ ಶಕ್ತಿಯನ್ನು ತಂದಿದೆ.

2028ರಲ್ಲಿಯೂ ಸಹ ಪುತ್ತೂರಿನ ಪಂಚಲಿಂಗೇಶ್ವರನ ಆಶೀರ್ವಾದದಿಂದ, ರಾಜ್ಯದ ಜನರ ಸೇವೆಗೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಾವು ಮಾತಿನಿಂದ ಗೆಲ್ಲುವುದಿಲ್ಲ ಹೃದಯದಿಂದ ಗೆಲ್ಲುತ್ತೇವೆ” ಎಂದರು.

Tags: BJPCongress PartydcmDK ShivakumarMangaloreMinisterMLAPutturuಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೀಪಾವಳಿ ಹಬ್ಬ ಮುಗೀತು – ವಾಯು ಮಾಲಿನ್ಯದ ಆತಂಕ ಜೋರಾಯ್ತು!

Next Post

‘ಅಣ್ತಮ್ಮನಾ’ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post

'ಅಣ್ತಮ್ಮನಾ'ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada