ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ವಿರೋಧಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲು ಪ್ರತಿಭಟನೆ ಮಾಡಿಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗ್ರಹ ಮಾಡಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ವಿರುದ್ದ ಪ್ರತಿಭಟನೆ ಮಾಡಲು ಜಿಲ್ಲಾ ಅಧ್ಯಕ್ಷರುಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಆಗಸ್ಟ್ 19ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮಾಡಬೇಕು. ಪ್ರತಿಭಟನೆಯಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಕಡ್ಡಾಯವಾಗಿ ಭಾಗಿಯಾಗುವಂತೆ ಕಾಂಗ್ರೆಸ್ ಅಧ್ಯಕ್ಷರು ಕಟ್ಟಪ್ಪಣೆ ವಿಧಿಸಿದ್ದಾರೆ. ಪ್ರತಿಭಟನೆ ನಡೆಸುವ ಸ್ಥಳದಿಂದ ಕನಿಷ್ಟ ಅರ್ಧ ಕಿಲೋ ಮೀಟರ್ ದೂರದಿಂದ ಪಾದಯಾತ್ರೆ ಮಾಡಿಕೊಂಡು ಹೋಗುವಂತೆ ಸಲಹೆ ನೀಡಲಾಗಿದೆ.
ಜಿಲ್ಲಾ ಕೇದ್ರದಲ್ಲಿ ನಡೆಯುವ ಪ್ರತಿಭಡನೆಯಲ್ಲಿ ಡಿಸಿ ಕಚೇರಿಗೆ ಅರ್ಧ ಕಿಲೋಮೀಟರ್ ಅಂತರದಿಂದ ಪಾದಯಾತ್ರೆ ಆರಂಭಿಸಿ ಡಿಸಿಗೆ ಜ್ಞಾಪನಾ ಪತ್ರವನ್ನು ನೀಡಬೇಕು. ರಾಷ್ಟ್ರಪತಿಗಳಿಗೂ ಇ ಮೇಲ್ ಮೂಲಕ ವಿರೋಧ ಪತ್ರ ಕಳಿಸುವಂತೆಯೂ ಡಿ.ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ. ಇನ್ನು ಪ್ರತಿಭಟನೆಯ ದೃಶ್ಯವನ್ನು ಫೋಟೋ ಹಾಗು ವಿಡಿಯೋ ಮೂಲಕ ರಾಜ್ಯ ಕಚೇರಿಗೆ ಕಳುಹಿಸಬೇಕು ಎಂದು ಸೂಚಿಸಿದ್ದಾರೆ.
ಕೃಷ್ಣಮಣಿ