ರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವಿನ ಜಟಾಪಟಿ ನಂತರ ಗುರುವಾರ ಸಂಜೆ ಜೆಡಿಎಸ್ ತನ್ನ ಪಕ್ಷದ ಶಾಸಕಾಂಗ ಸಭೆ ನಿಗದಿಮಾಡಿದೆ.
ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಪಕ್ಷದ ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಜೆಡಿಎಸ್ ನಾಯಕರು ಈ ವೇಳೆ ಮುಂಬರುವ ಚುನಾವಣೆಗಳಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಪಕ್ಷದ ಸೇರ್ಪಡೆ ಬಗ್ಗೆ ಚರ್ಚೆ ನಡೆಯಲಿದೆ. ಇನ್ನೂ ಕೆಲವು ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಬುಧವಾರ ರಾಜ್ಯ ವಿಧಾನಸಭೆ ಕಲಾಪದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಟಾಪಟಿ ಬಗ್ಗೆ ಜೆಡಿಎಸ್ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದರು. ಬಿಜೆಪಿ ಶಾಸಕರ ಅಶಿಸ್ತಿನ ವರ್ತನೆಗೆ ಆಡಳಿತ ಪಕ್ಷ ಕಾಂಗ್ರೆಸ್ ಕಾರಣ ಎಂದು ದೂರಿದರು.