• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಇಂದು ಜಿಎಸ್‌ಟಿ ಕೌನ್ಸಿಲ್ ಸಭೆ; ರಾಜ್ಯಗಳಿಗೆ ಸಿಗುತ್ತಾ ಬಾಕಿ ಹಣ?

ಯದುನಂದನ by ಯದುನಂದನ
May 28, 2021
in ದೇಶ
0
ಇಂದು ಜಿಎಸ್‌ಟಿ ಕೌನ್ಸಿಲ್ ಸಭೆ; ರಾಜ್ಯಗಳಿಗೆ ಸಿಗುತ್ತಾ ಬಾಕಿ ಹಣ?
Share on WhatsAppShare on FacebookShare on Telegram

ದೇಶದಲ್ಲಿ ಎರಡನೇ ಅಲೆಯ ಕರೋನಾ ಶುರುವಾದ ಬಳಿಕ ಮೊದಲ ಬಾರಿಗೆ ಹಾಗೂ ಎಂಟು ತಿಂಗಳ ಬಳಿಕ ಇಂದು ಮತ್ತೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಸಭೆ ನಡೆಯಲಿದೆ. ಕರೋನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜಿಎಸ್‌ಟಿ ಸಂಗ್ರಹ ಕಡಿಮೆ ಆಗಿರುವ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅವುಗಳ ಪಾಲಿನ ಮೊತ್ತವನ್ನು ಬಿಡುಗಡೆ ಮಾಡಿದಿರುವ ಹಾಗೂ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದ ಔಷಧಿಗಳ ಮೇಲೆ ಜಿಎಸ್‌ಟಿ ಹಾಕಬಾರದೆಂಬ ಒತ್ತಾಯ ಕೇಳಿಬರುತ್ತಿರುವ ಕಾರಣಗಳಿಗೆ ಈ ಬಾರಿಯ ಜಿಎಸ್‌ಟಿ ಕೌನ್ಸಿಲ್ ಸಭೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ.

ADVERTISEMENT

ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಪಾವತಿಸಬೇಕಾದ ಜಿಎಸ್‌ಟಿ ಪರಿಹಾರದ ಕೊರತೆಯನ್ನು 2.69 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ, ಅದರಲ್ಲಿ 1.58 ಲಕ್ಷ ಕೋಟಿ ರೂ. ಈ ವರ್ಷ ಸಾಲ ಪಡೆಯಬೇಕಾಗುತ್ತದೆ. ಜಿಎಸ್‌ಟಿ ಅನುಷ್ಠಾನದಿಂದ ಉಂಟಾಗುವ ಆದಾಯದ ಕೊರತೆಯನ್ನು ಸರಿದೂಗಿಸಲು ರಾಜ್ಯಗಳಿಗೆ ಐಷಾರಾಮಿ, ಡಿಮೆರಿಟ್ ಮತ್ತು ಪಾಪ ಸರಕುಗಳ ಮೇಲಿನ ಸೆಸ್ ಮೂಲಕ 1.11 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಲು ನಿರೀಕ್ಷಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಜಿಎಸ್‌ಟಿ ಕೌನ್ಸಿಲ್ ಸಭೆಗೆ ಮುಂಚಿತವಾಗಿ ರಾಜ್ಯಗಳೊಂದಿಗೆ ಹಂಚಿಕೊಂಡ ಕಾರ್ಯಸೂಚಿಯ ಟಿಪ್ಪಣಿಯ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಆದಾಯವು ಚೇತರಿಕೆ ಕಾಣಬಹುದಾದರೂ, ಪರಿಹಾರದ ಅಗತ್ಯತೆ ಮತ್ತು ಸೆಸ್ ಮೂಲಕ ಸಂಗ್ರಹಿಸಿದ ಮೊತ್ತದ ನಡುವೆ ಇನ್ನೂ ಅಂತರವಿರುತ್ತದೆ. 2021-22ರ ಬಜೆಟ್ ಜಿಎಸ್‌ಟಿ ಆದಾಯದಲ್ಲಿ ಶೇಕಡಾ 17ರಷ್ಟು ಬೆಳವಣಿಗೆಯನ್ನು ಪಡೆದುಕೊಂಡಿದೆ. ಅಂದರೆ ಮಾಸಿಕವಾಗಿ ಜಿಎಸ್‌ಟಿ ಆದಾಯ 1.1 ಲಕ್ಷ ಕೋಟಿ ರೂ. ಆಗಲಿದೆ. ಇದೇ ಲೆಕ್ಕಾಚಾರದ ಆಧಾರದ ಮೇಲೆ ಫೆಬ್ರವರಿ 2021ರಿಂದ ಜನವರಿ 2022ರ ಅವಧಿಯಲ್ಲಿ ಸಂರಕ್ಷಿತ ಆದಾಯ ಮತ್ತು ಪರಿಹಾರ ಬಿಡುಗಡೆಯ ನಂತರ ನಿಜವಾದ ಆದಾಯದ ನಡುವಿನ ಅಂತರವು ಸುಮಾರು 1.6 ಲಕ್ಷ ಕೋಟಿ ರೂ.ಗೆ ಏರಲಿದೆ ಎಂಬ ಅಂದಾಜನ್ನೂ ಹೊಂದಿದೆ. 

ಕಳೆದ 2020-21ರ ಆರ್ಥಿಕ ವರ್ಷದಲ್ಲಿ ಜಿಎಸ್‌ಟಿ ಆದಾಯದ ಕೊರತೆಯನ್ನು ಸರಿದೂಗಿಸಲು ಕೇಂದ್ರವು ರಾಜ್ಯಗಳ ಪರವಾಗಿ ಸಾಲ ಪಡೆದು 1.10 ಲಕ್ಷ ಕೋಟಿ ರೂ.ಗಳ ಪೈಕಿ 68,700 ಕೋಟಿ ರೂ.ಗಳನ್ನು ಸೆಸ್ ವಿಧಿಸುವ ಮೂಲಕ ಸಂಗ್ರಹಿಸಲಾಗಿದೆ. ಇದು ದೇಶದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರದ ಲೆಕ್ಕಾಚಾರಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಸರಕು ಮತ್ತು ಸೇವಾ ತೆರಿಗೆ  ಕೌನ್ಸಿಲ್ ಸಭೆ ಕರೆದಿದ್ದಾರೆ.

ಬಾಕಿ ಹಣದ ನಿರೀಕ್ಷೆಯಲ್ಲಿ ರಾಜ್ಯಗಳು

ಕರೋನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜಿಎಸ್‌ಟಿ ಸಂಗ್ರಹ ಕಡಿಮೆ ಆಗಿದೆ ಎಂಬ ನೆಪ ಹೇಳಿಕೊಂಡು ಕೇಂದ್ರ ಸರ್ಕಾರ ಮತ್ತೊಮ್ಮೆ ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರದ ಬಾಬತ್ತನ್ನು ಕೊಡಲು ಹಿಂದೇಟು ಹಾಕಬಹುದು.‌ ಆದರೆ ಇದೇ ಕರೋನಾ ಮತ್ತು ಲಾಕ್ಡೌನ್ ಕಾರಣಗಳಿಂದ ರಾಜ್ಯಗಳ ಬೊಕ್ಕಸಗಳೂ ಬರಿದಾಗಿದ್ದು ರಾಜ್ಯಗಳು ತಮ್ಮ ಪಾಲಿನ‌ ಹಣಕ್ಕೆ ಒಕ್ಕೊರಲಿನಿಂದ ಆಗ್ರಹಿಸುವ ಸಾಧ್ಯತೆ ಇದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಿಂದಲೂ ಇಂಥ ಒತ್ತಾಯ ಕೇಳಿಬರುವ ಸಾಧ್ಯತೆ ಇದೆ. ಕಷ್ಟದಲ್ಲಿರುವ ರಾಜ್ಯಗಳಿಗೆ ಬಾಕಿ ಹಣ ನೀಡುವ ಮೂಲಕ ಕೇಂದ್ರ ಸರ್ಕಾರ ಸಹಾಯ ಮಾಡುವುದೇ? ರಾಜ್ಯಗಳಿಗೆ ಹಣ ಸಿಗಲಿದೆಯಾ ಬಾಕಿ ಹಣ? ಎಂಬ ಪ್ರಶ್ನೆಗಳಿಗೆ ಇಂದಿನ ಸಭೆಯಲ್ಲಿ ಉತ್ತರ ದೊರಕಲಿದೆ.

2017ರ ಜುಲೈ 1ರಂದು ಜಾರಿಯಾದ ಜಿಎಸ್‌ಟಿ ಕಾನೂನಿನ ಪ್ರಕಾರ ಮೊದಲ ಐದು ವರ್ಷಗಳಲ್ಲಿ ಯಾವುದೇ ರೀತಿಯ ಆದಾಯ ನಷ್ಟವಾದರೂ ರಾಜ್ಯಗಳಿಗೆ ಎರಡು ತಿಂಗಳ ಪರಿಹಾರವನ್ನು ನೀಡಲೇಬೇಕು. ಹೀಗೆ ರಾಜ್ಯಗಳ ಬೇಡಿಕೆಗೆ ಕಾನೂನಿನ ಬಲವೂ ಇರುವುದರಿಂದ ರಾಜ್ಯ ಸರ್ಕಾರಗಳಿಗೆ ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಪರಿಹಾರದ ಬಾಬತ್ತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲಿದೆ ಎಂದು ಕೂಡ ಹೇಳಲಾಗುತ್ತಿದೆ‌. ಅಂತಿಮವಾಗಿ ಕೇಂದ್ರ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕು. 

ಇದಲ್ಲದೆ ಕೊವಿಡ್ ಸಂಬಂಧಿಸಿದ ಔಷಧಿಗಳಿಗೆ ಜಿಎಸ್‌ಟಿ ವಿನಾಯಿತಿ ಕೊಡುವಂತೆ ಬಿಜೆಪಿಯೇತರ ರಾಜ್ಯಗಳು ಸಭೆಯಲ್ಲಿ ಒತ್ತಾಯ ಮಾಡುವ ಸಾಧ್ಯತೆ ಇದೆ. ಜೊತೆಗೆ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಸೇರಿಸುವ ಬಗ್ಗೆಯೂ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ. ಆದರೆ ಕೇಂದ್ರ ಸರ್ಕಾರ ಈ ಎಡರೂ ವಿಷಯಗಳನ್ನು ಪರಿಗಣಿಸುವ ಸಾಧ್ಯತೆಗಳಿಲ್ಲ.

Previous Post

KPSC ನೇಮಕಾತಿ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ವಿಚಾರಣೆ ಕೈಬಿಟ್ಟ ಯಡಿಯೂರಪ್ಪ ಸರ್ಕಾರ: ಕೆ‌ಆರ್‌ಎಸ್ ಪಕ್ಷ ಕಿಡಿ

Next Post

ಜಿಂದಾಲ್ಗೆ ಭೂಮಿ ಮಾರಾಟ: ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ –ಹೆಚ್ ಡಿ ಕುಮಾರಸ್ವಾಮಿ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಜಿಂದಾಲ್ಗೆ ಭೂಮಿ ಮಾರಾಟ: ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ –ಹೆಚ್ ಡಿ ಕುಮಾರಸ್ವಾಮಿ

ಜಿಂದಾಲ್ಗೆ ಭೂಮಿ ಮಾರಾಟ: ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ –ಹೆಚ್ ಡಿ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada