![](https://pratidhvani.com/wp-content/uploads/2024/06/bhavani-revanna-1-1024x576.webp)
ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಆದರೆ ಇಂದು ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಮಧ್ಯಂತರ ಜಾಮೀನು ಮುಂದುರೆಯುತ್ತಾ, ಇಲ್ಲಾ ರದ್ದಾಗುತ್ತಾ ಅನ್ನೋ ಬಗ್ಗೆ ಭವಿಷ್ಯ ನಿರ್ಧಾರವಾಗಲಿದೆ.
![](https://pratidhvani.com/wp-content/uploads/2024/06/KRN-PS-1024x768.jpeg)
ಭವಾನಿ ರೇವಣ್ಣಗೆ ಮಹಿಳೆಯನ್ನು ಅಪಹರಣ ಮಾಡಿದ ಕೇಸ್ನಲ್ಲಿ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇಂದು ವಾದ-ಪ್ರತಿವಾದ ಆಲಿಸಲಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಅಂತಿಮ ಆದೇಶ ನೀಡಲಿದೆ.
ಒಂದು ವೇಳೆ ಭವಾನಿ ರೇವಣ್ಣಗೆ ಜಾಮೀನು ಸಿಗದೇ ಹೋದಲ್ಲಿ ಅವರನ್ನ ಎಸ್ಐಟಿ ಅಧಿಕಾರಿಗಳು ಬಂಧಿಸಿ ಅಪಹರಣ ಕೇಸ್ ಸಂಬಂಧ ವಿಚಾರಣೆ ನಡೆಸಲಿದ್ದಾರೆ. ಒಂದು ವೇಳೆ ನಿರೀಕ್ಷಣಾ ಜಾಮೀನು ಸಿಕ್ಕಿದರೆ ಬಂಧನದಿಂದ ಪಾರಾಗುವ ಸಾಧ್ಯತೆಯಿದೆ. ಒಟ್ಟಾರೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಪ್ರಜ್ವಲ್ ರೇವಣ್ಣ ಕೇಸ್ ಮರೆ ಮಾಚುವಂತೆ ಮಾಡಿದೆ ಎನ್ನಬಹುದು.
ಕೃಷ್ಣಮಣಿ