ರಾಜ್ಯದಲ್ಲಿ ಐದು ತಿಂಗಳ ಬಳಿಕ ಮತ್ತೆ ವಾರಾಂತ್ಯದ ಕರ್ಫ್ಯೂ ಜಾರಿಯಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ಮತ್ತದರ ರೂಪಾಂತರಿ ಓಮಿಕ್ರಾನ್ ನಿಯಂತ್ರಣಕ್ಕಾಗಿ ಇಂದು (ಶುಕ್ರವಾರ) ರಾತ್ರಿ 10 ಗಂಟೆಯಿಂದೆ ಜನವರಿ 10 (ಸೋನವಾರ) ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಇರಲಿದೆ.
ನೈಟ್ ಕರ್ಫ್ಯೂ ನಲ್ಲಿ ಏನಿರತ್ತೆ ಏನಿರಲ್ಲ ಅನ್ನೊ ಅನುಮಾನ, ಗೊಂದಲಗಳು ಜನಸಾಮಾನ್ಯರಲ್ಲಿ ಮೂಡಿದ್ದು ಇದಕ್ಕೆ ಇಂದು (ಶುಕ್ರವಾರ) ಸರ್ಕಾರ ಸ್ಪಷ್ಟ ಮಾಹಿತಿ ನೀಡಿದೆ, ನೈಟ್ ಕರ್ಫ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್, ಫುಡ್ ಡೆಲಿವರಿ ಉದ್ಯೋಗಗಳು, ಟೆಲಿಕಾಂ ಸೇವೆ, ಸಾರಿಗೆ ಇಲಾಖೆ ಉದ್ಯೋಗಿಗಳಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ತುರ್ತು ಆರೋಗ್ಯ ಸೇವೆ, ಔಷಧಿ ಮಳಿಗೆಗಳಿಗೆ ಅವಕಾಶ, ತುರ್ತು ಸಂದರ್ಭದಲ್ಲಿ ಜನರು ತೆರಳಲು ಅವಕಾಶ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು ತೆರೆದಿರಲು ಅನುಮತಿ. ತುರ್ತು ಸೇವೆ ಕಚೇರಿಗಳು ತೆರೆದಿರಲು ಅವಕಾಶ
ಖಾಸಗಿ ಕಂಪನಿಗಳ ಉದ್ಯೋಗಿಗಳು, ಕೈಗಾರಿಕೆ, ಫುಡ್ ಹೋಂ ಡೆಲಿವರಿ ಉದ್ಯೋಗಿಗಳು,ಇ- ಕಾಮರ್ಸ್, ಟೆಲಿಕಾಂ ಸೇವಾ ಕಂಪನಿ, ಸಾರಿಗೆ ಇಲಾಖೆ ಉದ್ಯೋಗಿಗಳು ಕಂಪನಿ ಐಡಿಯೊಂದಿಗೆ ಓಡಾಟ ನಡೆಸಬಹುದು.

ಸರಕು ಸಾಗಣೆ ವಾಹನಗಳು ಸಂಚಾರಕ್ಕೆ ಅವಕಾಶ
ದಿನಸಿ, ಆಹಾರ ವ್ಯಾಪಾರ, ಬೀದಿ ವ್ಯಾಪಾರ ಚಟುವಟಿಕೆಗಳು, ಆಹಾರ, ತರಕಾರಿ, ಹಣ್ಣು, ಮಾಂಸ, ಮೀನು, ಡೈರಿ, ಹಾಲಿನ ಬೂತ್ ತೆರೆಯಲು ಅನುಮತಿ
ಹೋಟೆಲ್, ರೆಸ್ಟೋರೆಂಟ್ಗಳ ಪಾರ್ಸೆಲ್ ಸೇವೆ ಮಾತ್ರ
ಮದುವೆಗಳಿಗೆ ತೆರೆದ ಪ್ರದೇಶದಲ್ಲಿ 200, ಸಭಾಂಗಣದಲ್ಲಿ 100 ಮಂದಿಗೆ ಮಾತ್ರ ಅವಕಾಶ ಮಿಕ್ಕ ಎಲ್ಲ ಕಾರ್ಯಕ್ರಮಗಳು ಬಂದ್
ತುರ್ತು ಸೇವಾ ವಲಯ ಹೊರತುಪಡಿಸಿ ಎಲ್ಲ ವಾಣಿಜ್ಯ ಚಟುವಟಿಕೆ, ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಪಾರ್ಕ್, ಎಲ್ಲ ಮಾದರಿ ಕಚೇರಿಗಳು ಬಂದ್.
ಬಾರ್ಗಳು ಬಂದ್ ಮಾಡುವುದಾಗಿ ನಿನ್ನೆ ಅಬಕಾರಿ ಇಲಾಖೆ ತಿಳಿಸಿದೆ.
ರೈಲು, ವಿಮಾನ, ಕೆಎಸ್ಆರ್ಟಿಸಿ, ಖಾಸಗಿ ಬಸ್ ಎಂದಿನಂತೆ ಸಂಚಾರ ಇರುತ್ತದೆ.
ಬಿಎಂಟಿಸಿ ಸಾರ್ವಜನಿಕ ಸೇವೆ ಇರುವುದಿಲ್ಲ.