• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ ರಿಪೋರ್ಟ್​ ಭವಿಷ್ಯ..

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in ಕರ್ನಾಟಕ, ರಾಜಕೀಯ
0
ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ ರಿಪೋರ್ಟ್​ ಭವಿಷ್ಯ..
Share on WhatsAppShare on FacebookShare on Telegram

ಮುಡಾ 50:50 ಹಗರಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ ಆಗಿದೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಬೀಳಲಿದೆ. ಲೋಕಾಯುಕ್ತ ಬಿ ರಿಪೋರ್ಟ್ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಚಾಲೆಂಜ್ ಮಾಡಿದ್ದರು. ಖುದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ದರು. ಲೋಕಾಯುಕ್ತ ವರದಿಯಲ್ಲಿ ಸುಳ್ಳು ಹೇಳಿದೆ. ದಾಖಲೆಗಳ ಪ್ರಕಾರ ತನಿಖೆ ಮಾಡಿಲ್ಲ ಎಂದು ವಾದ ಮಾಡಿದ್ದರು. ಆರೋಪಿಗಳ ರಕ್ಷಣೆಗೆ ಲೋಕಾಯುಕ್ತ ಮುಂದಾಗಿದೆ. ಮುಡಾದಲ್ಲಿ ಹಗರಣ ಆಗಿದೆ, ಆದ್ರೆ ಸಿದ್ದರಾಮಯ್ಯ ಸೇರಿದಂತೆ ಆರೋಪಿಗಳ ತಪ್ಪಿಲ್ಲ ಅಂತ ಲೋಕಾಯುಕ್ತ ಹೇಳಿದೆ. ಹಗರಣ ಆಗಿದೆ ಅಂದಮೇಲೆ ಆರೋಪಿಗಳ ತಪ್ಪು ಇದೇ ಅಂತ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ. .

ADVERTISEMENT
DK Shivakumar : ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ ಭಾಷಣ #pratidhvani

ಲೋಕಾಯುಕ್ತ ಬಿ ರಿಪೋರ್ಟ್ ನಿರಾಕರಿಸಿ ಅಂತ ವಾದ ಮಂಡನೆ ಆಗಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖುದ್ದು ವಾದ ಮಾಡಿದ್ದರು ಸ್ನೇಹಮಯಿ ಕೃಷ್ಣ. ಎರಡು ಕಡೆಯ ವಾದ ವಿವಾದ ಅಲಿಸಿ ಇಂದಿಗೆ ಆದೇಶ ಕಾಯ್ದಿರಿಸಿದೆ ನ್ಯಾಯಾಲಯ. ಲೋಕಾಯುಕ್ತ ರಿಪೋರ್ಟ್ ತಿರಸ್ಕೃತಗೊಂಡರೇ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಂಕಷ್ಟ ಎದುರಾಗಲಿದೆ. ಒಂದು ವೇಳೆ ಕೋರ್ಟ್​ ಬಿ ರಿಪೋರ್ಟ್​ ಒಪ್ಪಿಕೊಂಡರೆ, ಸ್ನೇಹಮಯಿ ಕೃಷ್ಣ ಹೈಕೋರ್ಟ್​ ಮೆಟ್ಟಿಲೇರುವ ಸಾಧ್ಯತೆಯೂ ಇದೆ. ಆದರೆ ಸ್ನೇಹಮಯಿ ಕೃಷ್ಣ ಮಾತ್ರ ಕೋರ್ಟ್​ನಲ್ಲಿ ಬಿ ರಿಪೋರ್ಟ್​ ತಿರಸ್ಕಾರ ಆಗಲಿದೆ ಅನ್ನೋ ವಿಶ್ವಾಸದಲ್ಲಿದ್ದಾರೆ

ಮುಡಾ 50:50 ಸೈಟ್​ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ವಿಚಾರವಾಗಿ ತೀರ್ಪು ಹೊರ ಬೀಳಲಿದೆ. ಈ ಬಗ್ಗೆ ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ಮಾತನಾಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆದೇಶ ಬರುತ್ತದೆ. ಲೋಕಾಯುಕ್ತ ವರದಿ ತಿರಸ್ಕಾರವಾಗುತ್ತದೆ ಎಂದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಆರೋಪಿಗಳನ್ನು ಬಜಾವ್ ಮಾಡಲು ಸುಳ್ಳು ವರದಿ ನೀಡಿದ್ದಾರೆ. ಸಾಕ್ಷಿಗಳ ಕೊರತೆ ಅಂತ ವರದಿಯಲ್ಲಿ ಹೇಳಿದ್ದಾರೆ. ನಾನು ಸಾಕಷ್ಟು ದಾಖಲೆಗಳನ್ನು ಕೊಟ್ಟಿದ್ದೆ. ಅದರ ಪ್ರಕಾರ ತನಿಖೆ ಮಾಡಿಲ್ಲ. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಾನೇ ಖುದ್ದು ವಾದ ಮಾಡಿದ್ದೇನೆ. ಲೋಕಾಯುಕ್ತದ ತಪ್ಪುಗಳನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲಾ ಆರೋಪಿಗಳ ತಪ್ಪನ್ನು ಕೂಡ ವಾದದಲ್ಲಿ ಮಂಡನೆ ಮಾಡಿದ್ದೇನೆ. ಮುಡಾದಲ್ಲಿ ಅಕ್ರಮ ಸೈಟು ಪಡೆದಿರೋದು ತಪ್ಪು. ಹೀಗಿದ್ದರೂ ಲೋಕಾಯುಕ್ತ ಅಧಿಕಾರಿಗಳು ಒತ್ತಡದ ಮೇಲೆ ಕೋರ್ಟ್​ಗೆ ಸುಳ್ಳು ವರದಿ ಕೊಟ್ಟಿದ್ದಾರೆ. ಅಕ್ರಮದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಅಂದರೆ ಒಂದು ವೇಳೆ ಕೋರ್ಟ್​ ಬಿ ರಿಪೋರ್ಟ್​ ಅನ್ನೇ ಒಪ್ಪಿಕೊಂಡರೂ ಹೈಕೋರ್ಟ್​ ಹಾಗು ಸುಪ್ರೀಂಕೋರ್ಟ್​ನಲ್ಲೂ ಕಾನೂನು ಹೋರಾಟ ನಡೆಸಲು ದೂರುದಾರ ಸ್ನೇಹಮಯಿ ಕೃಷ್ಣ ನಿರ್ಧಾರ ಮಾಡಿದ್ದಾರೆ.

================

Tags: cm siddaramaiah gets clean chit in muda casecm siddaramaiah muda caseed on muda caseed probe in muda caselokayukta gives clean chit to cm siddaramaiah in muda casemoney Laundering caseMuda Casemuda case explainedmuda case in kannadamuda case livemuda case mysoremuda case newsmuda case siddaramaiahmuda case todaymuda case today newsmuda case updatemuda scam casesiddaramaiah casesiddaramaiah muda case
Previous Post

ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ: ಜಿಲ್ಲಾ ಉಸ್ತವಾರಿ ಸಚಿವ ಸಂತೋಷ್‌ ಲಾಡ್‌ರಿಂದ ಲೋಕಾರ್ಪಣೆ

Next Post

ಜಾತಿ ಜನಗಣತಿ ವಿರೋಧಿಸಿ ಕಾಂಗ್ರೆಸ್​ನಲ್ಲೇ ಇಂದು ಡಿಸಿಎಂ ಸಭೆ..

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಜಾತಿ ಜನಗಣತಿ ವಿರೋಧಿಸಿ ಕಾಂಗ್ರೆಸ್​ನಲ್ಲೇ ಇಂದು ಡಿಸಿಎಂ ಸಭೆ..

ಜಾತಿ ಜನಗಣತಿ ವಿರೋಧಿಸಿ ಕಾಂಗ್ರೆಸ್​ನಲ್ಲೇ ಇಂದು ಡಿಸಿಎಂ ಸಭೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada