• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಿಬಿಐ ನಿರ್ದೇಶಕ ಹುದ್ದೆಯ ಆಯ್ಕೆ ಪ್ರಕ್ರಿಯೆಗೆ CJI ರಮಣ ವಿರೋಧ : ಆಯ್ಕೆ ಪಟ್ಟಿಯನ್ನು ಕೈ ಬಿಟ್ಟ ಕೇಂದ್ರ.!

Any Mind by Any Mind
May 25, 2021
in ದೇಶ
0
ಸಿಬಿಐ ನಿರ್ದೇಶಕ ಹುದ್ದೆಯ ಆಯ್ಕೆ ಪ್ರಕ್ರಿಯೆಗೆ CJI ರಮಣ ವಿರೋಧ : ಆಯ್ಕೆ ಪಟ್ಟಿಯನ್ನು ಕೈ ಬಿಟ್ಟ ಕೇಂದ್ರ.!
Share on WhatsAppShare on FacebookShare on Telegram

ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಾತಿ ವಿಚಾರದ ಸಭೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮುಂದಿಟ್ಟ ನಿಯಮವು ಇಬ್ಬರು ಅಧಿಕಾರಿಗಳನ್ನು ಆಯ್ಕೆ ಪಟ್ಟಿಯಿಂದ ಹೊರಕ್ಕಿರಿಸುವಂತೆ ಮಾಡಿದೆ.

ADVERTISEMENT

ಸಿಜೆಐ ರಮಣ ಮತ್ತು ಮೋದಿ ಅವರಲ್ಲದೆ, ಲೋಕಸಭೆಯ ಕಾಂಗ್ರೆಸ್ ಮುಖಂಡ ಮತ್ತು ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಸೋಮವಾರ ಪ್ರಧಾನ ಮಂತ್ರಿಯ ನಿವಾಸದಲ್ಲಿ 90 ನಿಮಿಷಗಳ ಕಾಲ ಈ ಕುರಿತು ಚರ್ಚೆ ನಡೆಸಿದ್ದು ಈ ಸಭೆಯಲ್ಲಿ ಮೂವರ ಹೆಸರುಗಳು ಪೈನಲ್ ಮಾಡಲಾಗಿದೆ. ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲದ (ಎಸ್ಎಸ್‌ಬಿ) ಪ್ರಧಾನ ನಿರ್ದೇಶಕ ಕೆಆರ್ ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿಎಸ್‌ಕೆ ಕೌಮುದಿ ಹೆಸರು ಚರ್ಚೆಗೆ ಬಂದಿದ್ದವು. ಇವರಲ್ಲಿ ಅತಿ ಹಿರಿಯರಾದ ಸೊಬೋಧ್ ಕುಮಾರ್ ಜೈಸ್ವಾಲ್ ಹೆಸರು ಮುಂಚೂಣಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಈ ಸಭೆಯ ನಡುವೆ ಸುಪ್ರೀಂಕೋರ್ಟ್ ಆದೇಶವೊಂದನ್ನು ಉಲ್ಲೇಖಿಸಿ ಮಾತನಾಡಿದ ಸಿಜೆಐ ರಮಣ, ಆರು ತಿಂಗಳಿಗಿಂತ ಕಡಿಮೆ ಸೇವಾವಧಿ ಹೊಂದಿರುವ ಅಧಿಕಾರಿಗಳನ್ನು ಪೊಲೀಸ್ ಮುಖ್ಯಸ್ಥರ ಹುದ್ದೆಗೆ ಪರಿಗಣಿಸಬಾರದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸಿಬಿಐ ನಿರ್ದೇಶಕರದ ನೇಮಕಾತಿ ಸಂದರ್ಭದಲ್ಲಿ ಹಿಂದೆಂದೂ ಪಾಲನೆಯಾಗದ ‘ಆರು ತಿಂಗಳ ನಿಯಮ’ದ ಬಗ್ಗೆ ಸಿಜೆಐ ರಮಣ ಪ್ರಸ್ತಾಪಿಸಿದ್ದು ಆಯ್ಕೆ ಸಮಿತಿ ಈ ಕಾನೂನನ್ನು ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಇದಕ್ಕೆ ವಿರೋಧ ಪಕ್ಷದ ಕಾಂಗ್ರೆಸ್ ನಾಯಕರಾಗಿ ಸಮಿತಿಯಲ್ಲಿರುವ ಅಧೀರ್ ರಂಜನ್ ಚೌಧರಿ ಅವರು ಈ ನಿಯಮವನ್ನು ಬೆಂಬಲಿಸಿದ್ದು, ಮೂರು ಸದಸ್ಯರ ಸಮಿತಿಯಲ್ಲಿ ಬಹುಮತದ ಬೆಂಬಲ ಸಿಕ್ಕಿದೆ.

ಹಾಗಾಗಿ ಸರ್ಕಾರ ಶಾರ್ಟ್ ಲಿಸ್ಟ್ ಮಾಡಿ ಅಂತಿಮ ಪಟ್ಟಿಯಲ್ಲಿದ್ದ ಪ್ರಮುಖ ಹೆಸರುಗಳಾದ, ಆಗಸ್ಟ್ 31ರಂದು ನಿವೃತ್ತರಾಗಲಿರುವ ಗಡಿ ಭದ್ರತಾ ಪಡೆಯ ಮುಖ್ಯಸ್ಥ ರಾಕೇಶ್ ಆಸ್ಥಾನಾ, ಮೇ 31ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮುಖ್ಯಸ್ಥ ವೈಸಿ ಮೋದಿ ಅವರು ಈ ನಿಯಮಗಳಿಗೆ ಒಳಪಡದ ಕಾರಣ ಅನರ್ಹಗೊಳಿಸಲಿದೆ.

ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅಸಮಾಧಾನ

ಸಿಬಿಐನಂತಹ ಉನ್ನತ ಸಂಸ್ಥೆಯ ಮುಖ್ಯಸ್ಥರ ಹುದ್ದೆಯ ನೇಮಕಾತಿಗೆ ಸರ್ಕಾರ ತೀರಾ ಸಾಮಾನ್ಯ ಪ್ರಕ್ರಿಯೆ ನಡೆಸುತ್ತಿದೆ ಎಂದು ಅಧೀರ್ ರಝಮನ್ ಚೌಧರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನನಗೆ 109 ಹೆಸರುಗಳು ಲಭಿಸಿವೆ. ಈ ಪೈಕಿ ಸಮಿತಿ ಸಭೆಗೆ ಮುನ್ನ ಅಂದರೆ ನಿನ್ನೆ 16 ಹೆಸರುಗಳನ್ನು ಪಟ್ಟಿಯಲ್ಲಿರಿಸಲಾಗಿದೆ ಎಂದಿದ್ದಾರೆ.

ಮೇ 11 ರಂದು ನನಗೆ 109 ಹೆಸರುಗಳನ್ನು ನೀಡಲಾಯಿತು ಮತ್ತು ಇಂದು ಮಧ್ಯಾಹ್ನ 1 ರ ಹೊತ್ತಿಗೆ 10 ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದ್ದು, ಸಂಜೆ 4 ರ ಹೊತ್ತಿಗೆ ಆರು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಈ ಪ್ರಾಸಂಗಿಕ ವಿಧಾನವು ಹೆಚ್ಚು ಆಕ್ಷೇಪಾರ್ಹವಾಗಿದೆ ಮತ್ತು ಕಾರ್ಯವಿಧಾನವನ್ನು ಅನುಸರಿಸಿದ ರೀತಿ, ಸಮಿತಿಯ ಆದೇಶಕ್ಕೆ ವಿರುದ್ಧವಾಗಿತ್ತು ಎಂದು ಚೌಧರಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

ಫೆಬ್ರವರಿ ತಿಂಗಳಿನಿಂದಲೂ ಸಿಬಿಐ ಮುಖ್ಯಸ್ಥರ ಹುದ್ದೆ ಖಾಲಿಯಿದ್ದು, ಇದಕ್ಕಾಗಿ ಇದೇ ಮೊದಲ ಬಾರಿ ನೇಮಕಾತಿ ಸಮಿತಿ ಸಭೆ ನಡೆದಿದೆ. 1984-87ನೇ ಅವಧಿಯ ನಾಲ್ಕು ಅತಿ ಹಿರಿಯ ಬ್ಯಾಚ್‌ಗಳ ಐಪಿಎಸ್ ಅಧಿಕಾರಿಗಳನ್ನು ಇದಕ್ಕೆ ಪರಿಗಣಿಸಲಾಗುತ್ತಿದೆ.

Previous Post

ಅಲೋಪಥಿ Vs ಆಯುರ್ವೇದ: IMAಗೆ 25 ಪ್ರಶ್ನೆಗಳನ್ನು ಕೇಳಿದ ಬಾಬಾ ರಾಮ್ ದೇವ್

Next Post

ಸಾಮಾಜಿಕ ಜಾಲತಾಣಗಳು ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

August 4, 2026
Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

August 4, 2026
Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

August 1, 2026
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

August 1, 2026
Next Post
ಸಾಮಾಜಿಕ ಜಾಲತಾಣಗಳು  ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!

ಸಾಮಾಜಿಕ ಜಾಲತಾಣಗಳು ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada