ಬೆಂಗಳೂರು: ರಾಜಧಾನಿಯಲ್ಲಿಸೋಮವಾರ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಮುಖ್ಯ ರಸ್ತೆಗಳಲ್ಲಿ ಮಳೆ ನೀರು ತುಂಬಿ ಸಂಚಾರ ದಟ್ಟಣೆ ಉಂಟಾಯಿತು.
![](https://pratidhvani.com/wp-content/uploads/2023/10/94978038.webp)
ನಗರದ ತಗ್ಗು ಪ್ರದೇಶಗಳಲ್ಲಿ ನೀರು ಹರಿದು ಸಮಸ್ಯೆ ಸೃಷ್ಟಿಸಿದೆ. ರಾಜಕಾಲುವೆಗಳಲ್ಲಿ ನೀರು ತುಂಬಿ ರಸ್ತೆಗೆ ಬಂದು ಕೆರೆಯಂತಾಗಿದ್ದರಿಂದ ಜನರು ಭಾರೀ ಸಮಸ್ಯೆ ಎದುರಿಸುವಂತಾಗಿತ್ತು.
ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದಲ್ಲಿ ಮಳೆಯ ನೀರಿಗೆ ರಸ್ತೆ ಸಂಪೂರ್ಣ ಮುಳುಗಿ ಬಿಟ್ಟಿತ್ತು. ಸುಮಾರು 50 ಮೀಟರ್ ಉದ್ದ ರಸ್ತೆಯಲ್ಲಿ ರಾಜಕಾಲುವೆ ನೀರು ತುಂಬಿ ಹರಿದು ಅವಾಂತರ ಸೃಷ್ಟಿಸಿತ್ತು. 15ಕ್ಕೂ ಅಧಿಕ ವಾಹನದಲ್ಲಿದ್ದ 50ಕ್ಕೂ ಹೆಚ್ಚು ಮಂದಿ ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣವೇ ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಿದ್ದಾರೆ.