ನವದೆಹಲಿ : ವಿಯೆಟ್ನಾಂನ ಫು ಕ್ವಾಕ್ ದ್ವೀಪದ (Phu Quoc Island) ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು (Indian Tourists) ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿ 15 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ದುರಂತದ ತಕ್ಷಣವೇ ಅಧಿಕಾರಿಗಳಿಂದ ದೊಡ್ಡ ಪ್ರಮಾಣದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಘಟನೆಯ ಕ್ಷಣ ಕ್ಷಣದ ಮಾಹಿತಿ ಮೇಲೆ ನಾವು ನಿಗಾವಹಿಸಿದ್ದೇವೆ. ಅಲ್ಲದೆ ಸಂತ್ರಸ್ತರು ಹಾಗೂ ಅವರ ಕುಟುಂಬಸ್ಥರಿಗಾಗಿ ವಿಶೇಷ ಸಹಾಯವಾಣಿ ತೆರೆದಿದ್ದೇವೆ ಎಂದು ಭಾರತೀಯ ರಾಯಭಾರ ಕಚೇರಿ ಕಚೇರಿ ತಿಳಿಸಿದೆ.
ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಘಟನೆಯ ನಿಖರ ವಿವರಗಳನ್ನು ಕಲೆಹಾಕಲಾಗುತ್ತಿದೆ. ಮೃತರ ಕುಟುಂಬಗಳಿಗೆ ಮಾಹಿತಿ ಮತ್ತು ನೆರವು ಒದಗಿಸಲು, ಹೋ ಚಿ ಮಿನ್ ಸಿಟಿಯಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು (Control Room) ಸ್ಥಾಪಿಸಲಾಗಿದೆ. ಕೆಲ ಗಂಟೆಗಳ ಹಿಂದೆ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿಖರ ಮಾಹಿತಿ ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.
ದುರಂತ ನಡೆದ ದೋಣಿಯಲ್ಲಿ 32 ಜನರಿದ್ದರು ತಮಿಳುನಾಡು ಹಾಗೂ ತೆಲಂಗಾಣ ಮೂಲದವರು ಎಂಬುವುದು ಪ್ರಾಥಮಿಕ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯಾಗಿದೆ.






