ಗುರುವಾರ ಸಾಯಂಕಾಲ ಉತ್ತರ ಬಂಗಾಳದಲ್ಲಿ ಗುವಾಹಟಿ-ಬಿಕಾನೇರ್ ರೈಲ್ವೆ ಹಳಿ ತಪ್ಪಿದ ಸುಮಾರು 12 ಬೋಗಿಗಳಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು ಇಲ್ಲಿಯವರೆಗೆ ಸುಮಾರು 9 ಮಂದಿ ಸಾವನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ತೀವ್ರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು ಇನ್ನಷ್ಟೆ ತಿಳಿಯಬೇಕಿದೆ.
ರೈಲ್ವೆ ದುರಂತದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ʻಈ ಕುರಿತು ಈಗಾಗಲೇ ರೈಲ್ವೆ ಮಂತ್ರಿಯೊಂದಿಗೆ ಮಾತನಾಡಿದ್ದೇನೆ ಮತ್ತು ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ನನ್ನ ಸಾಂತ್ವಾನಗಳು ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ ರಾಜ್ಯ ಸರ್ಕಾರ ದಿಂದ ಅಗತ್ಯ ಸೇವೆಗಲನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.