ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ, ಇದೀಗ ಮತ್ತೊಂದು ನಿರ್ಣಾಯಕ ಹಂತ ತಲುಪಿದೆ. ಹೌದು, ಈ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ, ಇದೀಗ ಅತ್ಯಂತ ನಿರ್ಣಾಯಕ ಹಂತಕ್ಕೆ ತಲುಪಿದೆ. ಪ್ರಕರಣದ ತ್ವರಿತಗತಿ ವಿಚಾರಣೆಗೆ ಸಂಬಂಧಿಸಿದಂತೆ ಸಿಸಿಎಚ್ 59ರ ಸೆಷನ್ಸ್ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ, ವಾರದಲ್ಲಿ ಕನಿಷ್ಠ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ.
ಸುಪ್ರೀಂ ಕೋರ್ಟ್ನ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಪ್ರಕರಣವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ನ್ಯಾಯಾಲಯ ಅಯಾ ವಕೀಲರಿಗೆ ಖಡಕ್ ಆಗಿ ಸೂಚಿಸಿದೆ. ವಿಚಾರಣೆ ವೇಳೆ ಸರ್ಕಾರದ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರು, ಸುಪ್ರೀಂ ಕೋರ್ಟ್ ಸೂಚನೆಯಂತೆ ಒಂದು ವರ್ಷದೊಳಗೆ ಪ್ರಕರಣದ 60 ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿಸಬೇಕಿದೆ. ಹೀಗಾಗಿ ಪ್ರತಿದಿನವೂ
ವಿಚಾರಣೆ ನಡೆಸಬೇಕು ಮತ್ತು ಯಾವುದೇ ಕಾರಣಕ್ಕೂ ಪ್ರಕ್ರಿಯೆಯನ್ನು ಅನಗತ್ಯವಾಗಿ ಮುಂದೂಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶರು, ವಾರದಲ್ಲಿ ನಾಲ್ಕು ದಿನಗಳ ಕಾಲ ಕಡ್ಡಾಯವಾಗಿ ವಿಚಾರಣೆ ನಡೆಸಲು ಆದೇಶಿಸಿದರು. ಅಗತ್ಯವಾದಲ್ಲಿ ಐದನೇ ದಿನವೂ ವಿಚಾರಣೆಗೆ ಸಿದ್ಧರಿರಬೇಕು ಎಂದು ವಕೀಲರಿಗೆ ತಿಳಿಸಿದರು.






