• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಜಿ. ಮಾದೇಗೌಡರ ನೆನಪಿನಲ್ಲಿ ಮಂಡ್ಯದ ಜನತೆ ಅಲ್ಲಿಯ ರಾಜಕೀಯವನ್ನು ಶುದ್ಧಗೊಳಿಸಬೇಕು

ಪ್ರತಿಧ್ವನಿ by ಪ್ರತಿಧ್ವನಿ
July 18, 2021
in ಅಭಿಮತ
0
ಜಿ. ಮಾದೇಗೌಡರ ನೆನಪಿನಲ್ಲಿ ಮಂಡ್ಯದ ಜನತೆ ಅಲ್ಲಿಯ ರಾಜಕೀಯವನ್ನು ಶುದ್ಧಗೊಳಿಸಬೇಕು
Share on WhatsAppShare on FacebookShare on Telegram

-ರವಿ ಕೃಷ್ಣಾ ರೆಡ್ಡಿ

ADVERTISEMENT

ಹಿರಿಯ ಮತ್ತು ಪ್ರಾಮಾಣಿಕ ರಾಜಕಾರಣಿ, ಮಾಜಿ ಶಾಸಕ/ಸಚಿವ/ಸಂಸದ ಜಿ. ಮಾದೇಗೌಡರು 94 ವರ್ಷಗಳ ಸಾರ್ಥಕ ಜೀವನ ನಡೆಸಿ ನೆನ್ನೆ ರಾತ್ರಿ ನಿಧನರಾದರು.

ರಾಜ್ಯದ ಪ್ರಮುಖ ರಾಜಕಾರಣಿಯೊಬ್ಬರ ಕುಟುಂಬದ ಭೂಅಕ್ರಮಗಳ ಬಗ್ಗೆ ಎಸ್.ಆರ್.ಹಿರೇಮಠರು ಹೋರಾಟ ಆರಂಭಿಸಿದ ಕಾರಣಕ್ಕೆ ಕಳೆದ ನಾಲ್ಕೈದು ವರ್ಷಗಳಲ್ಲಿ ಮಾದೇಗೌಡರನ್ನು ಮೂರ್ನಾಲ್ಕು ಸಲ ಭೇಟಿ ಆಗುವ ಸಂದರ್ಭ ಬಂದಿತ್ತು. ಕಳೆದ ಮೂರ್ನಾಲ್ಕು ವರ್ಷಗಳಿಂದ ಅವರಿಗೆ ಮರೆವು ಹೆಚ್ಚಾಗಿತ್ತು. ಆದರೆ ಹಳೆಯ ವಿಚಾರಗಳು ನೆನಪಿದ್ದವು. ಕಳೆದ ಸಲ ಭೇಟಿ ಆದಾಗ ಅವರು ತಾವು ಶಾಸಕ ಆದ ಸಂದರ್ಭವನ್ನು ನೆನಪಿಸಿಕೊಳ್ಳುತ್ತಾ, ಆಗ, 1962ರಲ್ಲಿ, ಚುನಾವಣೆ ಪ್ರಚಾರಕ್ಕೆ ಎಂದು ಸುಮಾರು 15-16 ಸಾವಿರ ರೂಪಾಯಿ ದೇಣಿಗೆ ಸಂಗ್ರಹ ಆಗಿತ್ತಂತೆ. ಅದರಲ್ಲಿ ಸುಮಾರು 12 ಸಾವಿರ ಮಾತ್ರ ಖರ್ಚಾಗಿ, ಇನ್ನೂ ನಾಲ್ಕು ಸಾವಿರ ರೂಪಾಯಿ ಉಳಿದಿತ್ತಂತೆ. ಆ ಚುನಾವಣೆಯಲ್ಲಿ ಅವರು ಗೆದ್ದು ಶಾಸಕರಾದರು. ಆಗ ಆ ಉಳಿದ ದೇಣಿಗೆ ಹಣವನ್ನು ಏನು ಮಾಡಬೇಕು ಎನ್ನುವ ವಿಷಯ ಬಂದಾಗ, ಜೊತೆಗಿದ್ದವರೆಲ್ಲರೂ ‘ನಿಮಗೆ ಮಂಡ್ಯದಲ್ಲಿ ಮನೆ ಇಲ್ಲ, ಆ ಉಳಿದ ಹಣದಲ್ಲಿ ನಿವೇಶನ ಕೊಂಡುಕೊಂಡು ಮನೆ ಕಟ್ಟಿಕೊಳ್ಳಿ’ ಎಂದು ಒತ್ತಾಯಿಸಿದರಂತೆ. ಅದೇ ಜಾಗದ ಮನೆಯಲ್ಲಿಯೇ ನಾವು ಅವರನ್ನು ಹಲವು ಸಲ ಭೇಟಿ ಆಗಿದ್ದದ್ದು.

ರವಿ ಕೃಷ್ಣಾ ರೆಡ್ಡಿ

ಅಂತಹ ಮುಗ್ಧ ದಿನಗಳ ರಾಜಕಾರಣಿ ಮಾದೇಗೌಡರು. ಕಾವೇರಿ ನದಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ಬಡಿದಾಡಿದರು. ಮದ್ದೂರು ತಾಲ್ಲೂಕಿನ ಕಾಳಮುದ್ದನದೊಡ್ಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಆದ್ಯತೆ ಕೊಟ್ಟರು. ಮಂಡ್ಯದಲ್ಲಿ ಗಾಂಧಿಭವನ ನಿರ್ಮಿಸಿ, ರಾಜಕಾರಣದಲ್ಲಿ ಆದರ್ಶ ಮತ್ತು ಮೌಲ್ಯಗಳು ಇರಬೇಕು ಎಂದು ಪ್ರತಿಪಾದಿಸಿದರು. ಮೈಷುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ಆಗಬಾರದು ಎಂದು ಒತ್ತಾಯಿಸಿದ್ದರು. ಕಳೆದ ಎರಡು ದಶಕಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದು ರಾಜಕೀಯ ಮುತ್ಸದ್ದಿಯಾಗಿ ಗೌರವ ಮತ್ತು ಘನತೆಯನ್ನು ಹೆಚ್ಚಿಸಿಕೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟು ಕಳೆದ 15-20 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹುಶಃ ಹದಿನೈದು ದಿನಗಳಿಂದ ಕೆ.ಎಂ.ದೊಡ್ಡಿಯ ಅವರದೇ ಹೆಸರಿನ ಆಸ್ಪತ್ರೆಯಲ್ಲಿ ಐಸಿಯು’ನಲ್ಲಿ ಇದ್ದರು. ಇದೇ ಮಂಗಳವಾರ ನಾನು ಮಂಡ್ಯಕ್ಕೆ ಹೋಗಿದ್ದಾಗ, ಕೆ.ಎಂ.ದೊಡ್ಡಿಯ ಆಸ್ಪತ್ರೆಗೂ ಭೇಟಿ ಕೊಟ್ಟು ಅವರನ್ನು ನೋಡಿಕೊಂಡು ಬಂದಿದ್ದೆ. KRS ಪಕ್ಷದ ಕಾರ್ಯಕ್ರಮವೊಂದರ ನಿಮಿತ್ತ ನೆನ್ನೆ ಸಂಜೆ ಏಳರ ಸಮಯದಲ್ಲಿ ಅದೇ ಆಸ್ಪತ್ರೆಯ ಮುಂದೆ ಸುಮಾರು ಒಂದು ಗಂಟೆ ಇದ್ದೆ. ನಾವು ಬಹುಶಃ ಅಲ್ಲಿಂದ ಹೊರಟ ಒಂದೂವರೆ ಗಂಟೆಗೆ ಅವರು ನಮ್ಮನ್ನು ಅಗಲಿದ್ದಾರೆ. ಕಾಕತಾಳೀಯ.

ಇಂದು ಅವರ ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕೆಂದು ಅವರ ಊರಿಗೆ ಕೊಂಡೊಯ್ಯುವಾಗ ಸಾರ್ವಜನಿಕರು ಗೌರವ ಸಲ್ಲಿಸಲೆಂದು ಆ ವಾಹನವನ್ನು ಸ್ವಲ್ಪ ಹೊತ್ತು ಮದ್ದೂರಿನಲ್ಲಿ ನಿಲ್ಲಿಸಿದ್ದರು. ಅಲ್ಲಿ ಹಾಜರಿದ್ದ ನಾನು ಮತ್ತು ನಮ್ಮ ಪಕ್ಷದ ಸದಸ್ಯರು ಹಿರಿಯರಾದ ಮಾದೇಗೌಡರಿಗೆ ಅಲ್ಲಿಯೇ ಅಂತಿಮನಮನ ಸಲ್ಲಿಸಿದೆವು.

ಮಂಡ್ಯದ ರಾಜಕಾರಣಿಗಳು ಒಂದು ಕಾಲದಲ್ಲಿ ಪ್ರಾಮಾಣಿಕರೂ, ಯೋಗ್ಯರೂ, ದಕ್ಷರೂ ಆಗಿದ್ದರು. ಇತ್ತೀಚಿನ ದಶಕಗಳಲ್ಲಿ ಎಲ್ಲಾ ಕಡೆಯಂತೆ ಇಲ್ಲಿಯೂ ಅದಕ್ಕೆ ಬರ. ಮಾದೇಗೌಡರ ಮತ್ತು ಸುಮಾರು ಎರಡು ತಿಂಗಳ ಹಿಂದೆ ತೀರಿಹೋದ ಮತ್ತೊಬ್ಬ ಸಜ್ಜನ ರಾಜಕಾರಣಿ ಕೆ.ಆರ್.ಪೇಟೆ ಕೃಷ್ಣರಂತಹವರ ನೆನಪಿನಲ್ಲಿ ಮಂಡ್ಯದ ಜನತೆ ಅಲ್ಲಿಯ ರಾಜಕೀಯವನ್ನು ಶುದ್ಧಗೊಳಿಸಲು ಮುಂದಾಗಬೇಕು. ಅದೇ ಅವರಿಗೆ ಸಲ್ಲಿಸಬಹುದಾದ ಪ್ರಾಮಾಣಿಕ ಶ್ರದ್ಧಾಂಜಲಿ.

ಓಂ ಶಾಂತಿ.

ಲೇಖಕರು- ರವಿ ಕೃಷ್ಣಾ ರೆಡ್ಡಿ, ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷರು

Previous Post

ಮಾನ್ಸೂನ್ ಅಧಿವೇಶನ: ಸರ್ಕಾರ ಮಂಡಿಸಲಿರುವ ಮಸೂದೆಗಳು ಮತ್ತು ವಿರೋಧ ಪಕ್ಷಗಳ ಕಾರ್ಯತಂತ್ರಗಳು

Next Post

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ

Related Posts

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ
ಅಭಿಮತ

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ

by ಪ್ರತಿಧ್ವನಿ
November 7, 2025
0

  https://youtu.be/iZY7Q0JnGnY ಬೆಂಗಳೂರು: ಹೈಕೋರ್ಟ್ ನಲ್ಲಿಂದು ಮತ್ತೆ ಚಿತ್ತಾಪುರ ಪಥಸಂಚಲನ ಕುರಿತ ಅರ್ಜಿ ವಿಚಾರಣೆ ನಡೆದಿದೆ. ೮ ವೇಳೆ ಅರ್ಜಿದಾರರಿಗೆ ಅನುಮತಿ ಮಂಜೂರು ಮಾಡಲು ಸರ್ಕಾರಕ್ಕೆ ನವೆಂಬರ್...

Read moreDetails

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

January 12, 2025

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024
Next Post
ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada