• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2ನೇ ಬಾರಿಗೆ 120 ಜನರನ್ನು ಹೊರ ಹಾಕಿದ ಟ್ರಂಪ್​ ಸರ್ಕಾರ

ಕೃಷ್ಣ ಮಣಿ by ಕೃಷ್ಣ ಮಣಿ
February 16, 2025
in ದೇಶ, ರಾಜಕೀಯ, ವಿದೇಶ, ವಿಶೇಷ
0
2ನೇ ಬಾರಿಗೆ 120 ಜನರನ್ನು ಹೊರ ಹಾಕಿದ ಟ್ರಂಪ್​ ಸರ್ಕಾರ
Share on WhatsAppShare on FacebookShare on Telegram

ಅಮೆರಿಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಡೊನಾಲ್ಡ್​ ಟ್ರಂಪ್‌ ಸರ್ಕಾರ ಸಮರ ಸಾರಿದ್ದು, ಮೊದಲ ಹಂತದ 104 ಜನರನ್ನು ಅಮೆರಿಕದಿಂದ ಹೊರ ಹಾಕಿದ್ದ ಟ್ರಂಪ್​, ಇದೀಗ 2ನೇ ಹಂತದಲ್ಲಿ 120 ಜನರನ್ನು ಅಕ್ರಮ ವಲಸಿಗರು ಎಂದು ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ಫೆಬ್ರವರಿ 12 ರಿಂದ 14 ತನಕ ಅಮೆರಿಕ ಪ್ರವಾಸ ಕೈಗೊಂಡಿದ್ದ, ಮಾನವ ಕಳ್ಳ ಸಾಗಣೆ ಎಂದು ದೊಡ್ಡ ಪಿಡುಗು ಎಂದಿದ್ದರು. ಇದೀಗ ನಿನ್ನೆ ರಾತ್ರಿ ಪಂಜಾಬ್​ನ ಅಮೃತಸರ ವಿಮಾನ ನಿಲ್ದಾಣಕ್ಕೆ ಎಲ್ಲರನ್ನು ಕರೆತಂದು ಬಿಡಲಾಗಿದೆ.

ADVERTISEMENT

ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ಬಳಿಕ ಅಕ್ರಮ ವಲಸಿಗರ ವಿರುದ್ಧ ಸಮರ ಸಾರಿದ್ದಾರೆ.. ದೇಶದೆಲ್ಲೆಡೆ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನ ಹುಡುಕಿ ಹುಡುಕಿ ಅವರವರ ದೇಶಕ್ಕೆ ಗಡಿಪಾರು ಮಾಡುವ ಕೆಲಸ ಮಾಡುತ್ತಿದ್ದಾರೆ ಅಮೆರಿಕದ ಅಧಿಕಾರಿಗಳು. ಫೆಬ್ರವರಿ 5ರಂದು 104 ಅಕ್ರಮ ಭಾರತೀಯ ವಲಸಿಗರನ್ನು ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಅಕ್ರಮ ಭಾರತೀಯ ವಲಸಿಗರ 2ನೇ ತಂಡವನ್ನ ಹೊತ್ತ ಅಮೆರಿಕ ಸೇನಾ ವಿಮಾನ ಭಾರತಕ್ಕೆ ಬಂದಿಳಿದಿದೆ.

ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ ಹಾಗು ಯಾವುದೇ ದಾಖಲೆ ಇಲ್ಲದೇ ಅಮೆರಿಕದಲ್ಲಿ ನೆಲೆಸಿದ್ದ 120 ಭಾರತೀಯರು ಸ್ವದೇಶಕ್ಕೆ ವಾಪಸ್‌ ಆಗಿದ್ದಾರೆ.. ಪಂಜಾಬ್‌ನ ಅಮೃತಸರದ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್ ಆಗಿದೆ. ಅದರಲ್ಲಿ ಪಂಜಾಬ್‌ನ 67 ಜನ, ಹರಿಯಾಣದ 33, ಗುಜರಾತಿನ 8, ಉತ್ತರಪ್ರದೇಶದ ಮೂವರು, ಮಹಾರಾಷ್ಟ್ರ, ರಾಜಸ್ಥಾನ, ಗೋವಾದ ತಲಾ ಇಬ್ಬರು ಹಾಗೂ ಹಿಮಾಚಲಪ್ರದೇಶ ಹಾಗೂ ಜಮ್ಮು-ಕಾಶ್ಮೀರದ ತಲಾ ಒಬ್ಬರು ಬಂದಿಳಿದಿದ್ದಾರೆ.. ಇನ್ನಷ್ಟು ಅಕ್ರಮ ಭಾರತೀಯರ ವಲಸಿಗರನ್ನು ಹೊತ್ತ ಇನ್ನೊಂದು ವಿಮಾನ ಭಾನುವಾರ ರಾತ್ರಿ ಭಾರತಕ್ಕೆ ಬಂದಿಳಿಯುವ ಸಾಧ್ಯತೆ ಇದೆ..

2 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಷ್ಟೇ ಭಾರತಕ್ಕೆ ವಾಪಸ್‌ ಆಗಿದ್ದರು.. ಅಮೆರಿಕ ಭೇಟಿ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಜೊತೆ ಭಾರತೀಯ ವಲಸಿಗರ ಕುರಿತು ಚರ್ಚಿಸಿದ್ರು.. ಈ ಬೆನ್ನಲೇ ನಿನ್ನೆ ರಾತ್ರಿ 120 ಅಕ್ರಮ ಭಾರತೀಯ ವಲಸಿಗರನ್ನ ಅಮೆರಿಕ ಗಡಿಪಾರು ಮಾಡಿದೆ. ಮಿಸ್ಟರ್​ ಪ್ರೈಂ ಮಿನಿಸ್ಟರ್​ ಯೂ ಆರ್​ ಗ್ರೇಟ್​ ಎಂದು ಬರೆದಿದ್ದ ವಿಶೇಷ ಗಿಫ್ಟ್​ ನೀಡಿದ್ದ ಟ್ರಂಪ್​ ಭಾರತೀಯರನ್ನು ನಿರ್ದಾಕ್ಷಿಣ್ಯವಾಗಿ ಹೊರ ಹಾಕುತ್ತಿರುವುದನ್ನು ತಡೆಯಲಿಲ್ಲವೇ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ.

ಅಮೆರಿಕದಿಂದ ಗಡಿಪಾರಾಗಿ ಬರುತ್ತಿರುವ ಅಕ್ರಮ ಭಾರತೀಯ ವಲಿಸಿಗರನ್ನ ಪಂಜಾಬ್‌ನ ಅಮೃತಸರ ಏರ್‌ಪೋರ್ಟ್‌ನಲ್ಲಿ ತಂದು ಇಳಿಸುವ ಕೇಂದ್ರದ ನಿರ್ಧಾರಕ್ಕೆ ಪಂಜಾಬ್‌ ಸಿಎಂ ಭಗವಂತ ಮಾನ್‌‌‌ ಸಿಂಗ್​ ಕಿಡಿಕಾರಿದ್ದಾರೆ. ಪಂಜಾಬಿಗಳು ಮಾತ್ರ ಅಕ್ರಮ ವಲಸಿಗರೆಂದು ಬಿಂಬಿಸುವ ಉದ್ದೇಶ ಇದೆ ಎನಿಸುತ್ತದೆ.. ಅದೇ ಕಾರಣಕ್ಕೆ ಅಕ್ರಮ ವಲಸಿಗರನ್ನು ಪಂಜಾಬ್​​ನ ಅಮೃತಸರ ಕರೆತರಲಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.. ಈ ಬಗ್ಗೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹ ಮಾಡಿದ್ದರು.

ಫೆಬ್ರವರಿ 05ರಂದು ಗಡಿಪಾರು ಮಾಡಿದ್ದ ವೇಳೆ ಅಕ್ರಮ ವಲಸಿಗರನ್ನು ಕೈಕಾಲಿಗೆ ಚೈನ್​​ ಹಾಕಿಕೊಂಡು ಕುರಿಗಳಂತೆ ವಿಮಾನದಲ್ಲಿ ಕರೆತಂದು ಭಾರತದಲ್ಲಿ ಇಳಿಸಲಾಗಿತ್ತು.. ಅಮೆರಿಕ ಸರ್ಕಾರದ ಹೀನಾ ನಡೆಯನ್ನ ಭಾರತ ಸರ್ಕಾರ ಖಂಡಿಸಿತ್ತು.. ನಿನ್ನೆ ಭಾರತಕ್ಕೆ ಬಂದಿಳಿದವರನ್ನು ಅಮೆರಿಕ ಅಷ್ಟೊಂದು ಕ್ರೂರವಾಗಿ ನಡೆಸಿಕೊಳ್ಳಲಿಲ್ಲ ಅನ್ನೋದು ನೆಮ್ಮದಿಯ ಸಂಗತಿ. ಫೆಬ್ರವರಿ ತಿಂಗಳಲ್ಲೇ ಹಂತ ಹಂತವಾಗಿ 223 ಅಕ್ರಮ ಭಾರತೀಯ ವಲಸಿಗರನ್ನ ಅಮೆರಿಕ ಗಡಿಪಾರು ಮಾಡಿದೆ.. ಕಾನೂನು ಪ್ರಕಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನ ಭಾರತಕ್ಕೆ ಗಡಿಪಾರು ಮಾಡಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.

Tags: BJPCongress PartyDonald Trumpdonald trump meet pm modidonald trump meets pm modimodi in usmodi meets trumpmodi to meet trumpmodi trumpmodi trump meetmodi trump meetingmodi trump meeting livemodi trump newsmodi us visitPM Modipm modi meets donald trumppm modi trump meetpm modi trump meetingpm modi us visitTrumptrump meeting modi 'trump welcomes moditrump meets moditrump moditrump modi meettrump modi meetingಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಾಲಿ ಧನಂಜಯ ಮತ್ತು ಧನ್ಯತಾ ಮದುವೆ ಯ ನೇರಪ್ರಸಾರ

Next Post

ಕೇಜ್ರಿವಾಲ್​ ಅವರ ‘ಶೀಶ್​ ಮಹಲ್​’ ತನಿಖೆಗೆ ಕೇಂದ್ರದ ಆದೇಶ

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
Next Post
ಕೇಜ್ರಿವಾಲ್​ ಅವರ ‘ಶೀಶ್​ ಮಹಲ್​’ ತನಿಖೆಗೆ ಕೇಂದ್ರದ ಆದೇಶ

ಕೇಜ್ರಿವಾಲ್​ ಅವರ ‘ಶೀಶ್​ ಮಹಲ್​’ ತನಿಖೆಗೆ ಕೇಂದ್ರದ ಆದೇಶ

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada