• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸಚಿವ ಸಂಪುಟವನ್ನು ಮೀರಿಸಿದ ಟಿಟಿಡಿ ಆಡಳಿತ ಮಂಡಳಿ

ಲಾಯ್ಡ್ by ಲಾಯ್ಡ್
September 17, 2021
in ದೇಶ
0
ಕೇಂದ್ರ ಸಚಿವ ಸಂಪುಟವನ್ನು ಮೀರಿಸಿದ ಟಿಟಿಡಿ ಆಡಳಿತ ಮಂಡಳಿ
Share on WhatsAppShare on FacebookShare on Telegram

ತಿರುಪತಿ ತಿರುಮಲ ದೇವಸ್ಥಾನಂ ಆಡಳಿತ ಮಂಡಳಿಯು ಕೇಂದ್ರ ಸಚಿವ ಸಂಪುಟವನ್ನು ಮೀರಿಸಿದೆ. ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ಟಿಟಿಡಿಯ ಆಡಳಿತ ಮಂಡಳಿಗೆ ಬರೋಬ್ಬರಿ 81 ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಇರುವ ಸಚಿವರ ಸಂಖ್ಯೆ ಪ್ರಧಾನಿ ಮೋದಿ ಸೇರಿ 78. 

ADVERTISEMENT

81 ಜನರ ಆಡಳಿತ ಮಂಡಳಿಯಲ್ಲಿ 29 ಜನ ಸದಸ್ಯರು ಹಾಗೂ 52 ಜನ ವಿಶೇಷ ಆಹ್ವಾನಿತರು ಇರಲಿದ್ದಾರೆ. ಪ್ರಪಂಚದ ಅತ್ಯಂತ ಶ್ರೀಮಂತ ದೇವಸ್ಥಾನದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಟಿಟಿಡಿಗೆ ಇಷ್ಟು ದೊಡ್ಡ ಮಟ್ಟದ ಆಡಳಿತ ಮಂಡಳಿಯನ್ನು ರಚಿಸಲಾಗಿದೆ. ಕಳೆದ ಆಡಳಿತ ಮಂಡಳಿಯಲ್ಲಿ 40 ಸದಸ್ಯರಿದ್ದರು. 

ಇಂಡಿಯಾ ಸಿಮೆಂಟ್ಸ್ ಚೇರ್ಮನ್ ಎನ್ ಶ್ರೀನಿವಾಸನ್, ಮೈ ಹೋಮ್ ಗ್ರೂಪ್ ಚೇರ್ಮನ್ ಜೆ ರಾಮೇಶ್ವರ್ ರಾವ್, ಹಿಟೆರೋ ಗ್ರೂಪ್ ಚೇರ್ಮನ್ ಬಿ ಪಾರ್ಥಸಾರಥಿ ರೆಡ್ಡಿ ಅವರು ಹೊಸ ಟಿಟಿಡಿ ಟ್ರಸ್ಟ್ ಮಂಡಳಿಗೆ ಮರು ಆಯ್ಕೆಯಾಗಿದ್ದಾರೆ. ಆಂಧ್ರದ ನೆರೆ ರಾಜ್ಯವಾದ ತೆಲಂಗಾಣದಿಂದ ಟಿಟಿಡಿಗೆ ಏಳು ಜನ ಸದಸ್ಯರನ್ನು ನೇಮಿಸಲಾಗಿದೆ. ಕಳೆದ ಬಾರಿ ಒಂಬತ್ತು ಸ್ಥಾನಗಳನ್ನು ನೀಡಲಾಗಿತ್ತು. 

ಆಡಳಿತ ಮಂಡಳಿಯಲ್ಲಿ ಸ್ಥಾನ ಪಡೆಯಲು ಪ್ರಭಾವಿ ನಾಯಕರು ಹಾಗೂ ಉದ್ಯಮಿಗಳು ಇನ್ನಿಲ್ಲದಂತೆ ಲಾಬಿ ನಡೆಸಿದ್ದರು. ಇವರ ಒತ್ತಡಕ್ಕೆ ಮಣಿದು ಸರ್ಕಾರ ಆದಷ್ಟು ಜನರನ್ನು ಆಡಳಿತ ಮಂಡಳಿಗೆ ಸೇರಿಸುವ ನಿರ್ಧಾರ ತಾಳಿದೆ. 

ಈ ಕುರಿತಾಗಿ ಸರ್ಕಾರ ಮೂರು ಆದೇಶಗಳನ್ನು ಹೊರಡಿಸಿತ್ತು. ಮೊದಲ ಆದೇಶದಲ್ಲಿ 29 ಜನ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು. ನಂತರ ತಿರುಪತಿ ಶಾಸಕ ಭುಮನ ಕರುಣಾಕರ ರೆಡ್ಡಿ ಹಾಗೂ ಬ್ರಾಹ್ಮಣ ಕೋಆಪರೇಷನ್ ಚೇರ್ಮನ್ ಆಗಿರುವ ಸುಧಾಕರ ಅವರನ್ನು ವಿಶೇಷ ಆಹ್ವಾನಿತರಾಗಿ ನೇಮಿಸಲಾಗಿತ್ತು. ಮೂರನೇ ಆದೇಶದಲ್ಲಿ ಇನ್ನೂ ಐವತ್ತು ಜನರನ್ನು ವಿಶೇಷ ಆಹ್ವಾನಿತರಾಗಿ ನೇಮಿಸುವ ಆದೇಶವನ್ನು ಸರ್ಕಾರ ಹೊರಡಿಸಿತ್ತು. ಆದರೆ, ಇವರಿಗೆ ಮತದಾನದ ಹಕ್ಕನ್ನು ನೀಡಲಾಗಿಲ್ಲ. 

ಆಡಳಿತ ಮಂಡಳಿಯಲ್ಲಿ ಆಂಧ್ರಪ್ರದೇಶದ 10, ತೆಲಂಗಾಣದ 7, ತಮಿಳುನಾಡು, ಕರ್ನಾಟಕ ಹಾಗೂ ಮಹಾರಾಷ್ಟ್ರದಿಮದ ತಲಾ ಇಬ್ಬರು, ಗುಜರಾತ್, ಪಶ್ಚಿಮ ಬಂಗಾಳ ಹಾಗು ಪುದುಚೆರಿಯಿಂದ ತಲಾ ಒಬ್ಬರು ಸದಸ್ಯರನ್ನು ನೇಮಿಸಲಾಗಿದೆ. 

ಈ ಆಡಳಿತ ಮಂಡಳಿಯು ಈವರೆಗಿನ ಅತೀ ದೊಡ್ಡ ಮಂಡಳಿ ಆಗಿರುವುದರಿಂದ, ಸಭೆ ನಡೆಯುವ ಸಂದರ್ಭದಲ್ಲಿ ಇವರಿಗೆ ವಸತಿ, ವಾಹನ ಹಾಗೂ ಸಭಾಭವನದ ವ್ಯವಸ್ಥೆಗೆ ಮತ್ತಷ್ಟು ಹೊರೆ ಬೀಳಲಿದೆ. 

Tags: cabinet expansionCommittee for Public AccountabilityTTDನರೇಂದ್ರ ಮೋದಿ
Previous Post

ಗುಜರಾತ್‌ ಸಚಿವ ಸಂಪುಟ; ಹಳಬರಿಗೆ ಕೊಕ್‌ ಹೊಸಬರಿಗೆ ಮಣೆ

Next Post

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada