ತಿರುಪತಿ ತಿರುಮಲ ದೇವಸ್ಥಾನದ (Tirupati tirumala temple) ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನಾಂಶ ಪತ್ತೆಯಾಗಿ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆಯಾದ ನಂತರ, ತಿರುಪತಿ ದೇವಾಲಯದ ಆಡಳಿತ ಮಂಡಳಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಮತ್ತೊಂದು ದಿಟ್ಟ ಕ್ರಮಕ್ಕೆ ಮುಂದಾಗಿದೆ.

ಇದೀಗ ನೂತನವಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ, ಇಲ್ಲಿ ಉದ್ಯೋಗದಲ್ಲಿರುವ ಹಿಂದೂಯೇತರರು (Non hindus) ತಾವೇ ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ (Andrapradesha)ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆ ಆರಿಸಿಕೊಳ್ಳಬೇಕು ಎಂದು ತಿರುಪತಿ ಬೋರ್ಡ್ ತಿಳಿಸಿದೆ.
ಆದ್ರೆ ಈ ರೀತಿಯ ಹಿಂದೂಯೇತರ ಉದ್ಯೋಗಿಗಳ ನಿಖರ ಸಂಖ್ಯೆ ಎಷ್ಟಿದೆ ಎಂಬುದನ್ನು ಬಹಿರಂಗಪಡಿಸಲು ತಿರುಮಲ ತಿರುಪತಿ ದೇವಸ್ಥಾನಂ ಬೋರ್ಡ್ ನಿರಾಕರಿಸಿದೆ. ಒಟ್ಟಾರೆ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ನಿರ್ಧಾರದಿಂದ ಹೊಡೆತ ಬೀಳಿವ ಸಾಧ್ಯತೆಗಳಿದೆ.