• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

FACT CHECK: ಮಹಕುಂಭಮೇಳಕ್ಕೆ ಹೋಗುತ್ತಿದ್ದ ವೃದ್ಧ ಭಕ್ತನಿಂದ ಟಿಟಿಇ ಹಣ ಪಡೆದಿದ್ದಾರೆಂದು 2019ರ ವೀಡಿಯೊ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
February 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕುಂಭಮೇಳಕ್ಕೆ ಪ್ರಯಾಣಿಸುತ್ತಿದ್ದ ವೃದ್ಧ ಪ್ರಯಾಣಿಕರಿಂದ ಟಿಟಿಇ ಬಲವಂತವಾಗಿ ಹಣ ಪಡೆಯುತ್ತಿದ್ದಾರೆ ಎಂದು ತೋರಿಸುವ ವೈರಲ್ ವೀಡಿಯೊ ನಕಲಿ ಎಂದು ನಾವು ಖಚಿತವಾಗಿ ಹೇಳುತ್ತೇವೆ.

ADVERTISEMENT

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕೆಂದು ಪ್ರಯಾಗ್‌ರಾಜ್ ತಲುಪುವಲ್ಲಿ ಯಾವುದೇ ತೊಂದರೆ ಅನುಭವಿಸದಂತೆ ರೈಲ್ವೆ ಇಲಾಖೆ ಹಲವಾರು ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಇದರ ಮಧ್ಯೆ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೃದ್ದ ಪ್ರಯಾಣಿಕರೊಬ್ಬರಿಂದ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಬಲವಂತವಾಗಿ ಹಣ ಪಡೆಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಅನೇಕರು ಹಂಚಿಕೊಳ್ಳುತ್ತಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಪ್ರಯಾಣಿಸುತ್ತಿರುವಾಗ ಈ ಘಟನೆ ನಡೆದಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, “ಒಂದು ಒಂದು ರೂಪಾಯಿ ಜೋಡಿಸಿ ಮಹಾಕುಂಬ್ ಮೇಳಕ್ಕೆ ಹೋದ ಇವರ ಹತ್ತಿರ ದುಡ್ಡು ತಕೊಂಡ ಟಿ ಟಿ” ಎಂದು ಬರೆದುಕೊಂಡಿದ್ದಾರೆ.

ಇದೇರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ನೋಡಬಹುದು.

FACT CHECK: ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಇದು 2019 ರ ವೀಡಿಯೊ ಆಗಿದ್ದು, ಉತ್ತರ ಪ್ರದೇಶದ ಚಂದೌಲಿಯಿಂದ ಬಂದಿದ್ದಾಗಿದೆ.

ನಿಜಾಂಶವನ್ನು ತಿಳಿಯಲು ನಾವು ಈ ವೈರಲ್ ವೀಡಿಯೊದ ಸ್ಟ್ರೀನ್ ಶಾಟ್ ತೆಗೆದುಕೊಂಡು ಗೂಗಲ್ ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ. ಆಗ ಈ ವೀಡಿಯೊ ಹಲವು ವರ್ಷಗಳಿಂದ ಇಂಟರ್ನೆಟ್‌ನಲ್ಲಿದೆ ಎಂಬುದು ತಿಳಿದುಬಂತು. ಹೀಗಾಗಿ ಮಹಾ ಕುಂಭಕ್ಕೂ ಈ ವಿಡಿಯೊಕ್ಕು ಯಾವುದೇ ಸಂಬಂಧವಿಲ್ಲ ಎಂಬುದು ಖಚಿತವಾಯಿತು.

ಇದೇ ಸಂದರ್ಭ ಜುಲೈ 23, 2019 ರಂದು ಎಕ್ಸ್ ಪೋಸ್ಟ್ ಒಂದನ್ನು ಕಂಡಿದ್ದೇವೆ. ಬಳಕೆದಾರರೊಬ್ಬರು ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡು, “ಸರ್ ಈ ಭ್ರಷ್ಟ ರೈಲ್ವೆ ಟಿಸಿ ಹಿರಿಯ ನಾಗರಿಕರಿಂದ (ರೈತರು) ಹಣ ಪಡೆಯುತ್ತಿದ್ದಾರೆ” ಎಂದು ಬರೆದು ರೈಲ್ವೆ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಟ್ಯಾಗ್ ಮಾಡಿದ್ದಾರೆ.

ಇದಕ್ಕೆ ರೈಲ್ವೆ ಸೇವಾದ ಅಧಿಕೃತ ಖಾತೆ ರಿಪ್ಲೇ ಕೊಟ್ಟಿದ್ದು, ಈ ಘಟನೆಯನ್ನು ಪರಿಶೀಲಿಸಿ ಎಂದು ಡಿವಿಷನಲ್ ರೈಲ್ವೆ ಮ್ಯಾನೇಜರ್‌ಗೆ ಹೇಳಿದೆ. ಇದಕ್ಕೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರೈಲ್ವೆ ವಿಭಾಗ ಉತ್ತರ ಕೊಟ್ಟಿದ್ದು, “ವೀಡಿಯೊ ಕ್ಲಿಪ್‌ಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಉದ್ಯೋಗಿಯಿಂದ ವಿವರಣೆಯನ್ನು ಕೇಳಲಾಗಿದೆ. ಈ ಘಟನೆ 3-4 ತಿಂಗಳ ಹಿಂದೆ ನಡೆದಿದೆ. ಟಿಕೆಟ್ ತಯಾರಿಸಲು ಪ್ರಯಾಣಿಕರಿಂದ ಹಣ ಪಡೆಯುತ್ತಿದೆ ಮತ್ತು ಟಿಕೆಟ್ ಮಾಡಿದ್ದೇನೆ ಎಂದು ಉದ್ಯೋಗಿ ಹೇಳಿದ್ದರು. ಸಂಬಂಧಪಟ್ಟ ಉದ್ಯೋಗಿಯನ್ನು ವಿವರವಾದ ತನಿಖೆಗಾಗಿ ಅಮಾನತುಗೊಳಿಸಲಾಗಿದೆ” ಎಂದು ಅಬರು ಹೇಳಿದ್ದಾರೆ.

ಈ ಮಾಹಿತಿಯ ಆಧಾರದ ಮೇಲೆ ನಾವು ಗೂಗಲ್‌ನಲ್ಲಿ ‘Rail TT Farmer Take Money Suspended ಎಂಬ ಕೀವರ್ಡ್ ಬಳಸಿ ಹುಡುಕಿದ್ದೇವೆ. ಆಗ ಇದೇ ವೈರಲ್ ವೀಡಿಯೊದ ಸ್ಕಿನ್ ಶಾಟ್‌ನೊಂದಿಗೆ Patrika.com ಜುಲೈ 25, 2019 ರಂದು “ಚಲಿಸುವ ರೈಲಿನಲ್ಲಿ ವೃದ್ಧನಿಂದ ಹಣ ಕಸಿದುಕೊಂಡಿದ್ದಕ್ಕಾಗಿ ಟಿಟಿಇ ಅಮಾನತುಗೊಂಡಿದ್ದಾರೆ, ವೀಡಿಯೊ ವೈರಲ್ ಆಗಿದೆ” ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಪ್ರಕಟಿಸಿದೆ.

ಇದರಲ್ಲಿರುವ ಮಾಹಿತಿಯ ಪ್ರಕಾರ, “ವಿನಯ್ ಸಿಂಗ್ ಎಂಬ ಟಿಟಿಇ ವೃದ್ಧನಿಂದ ಬಲವಂತವಾಗಿ ಹಣವನ್ನು ಕಸಿದುಕೊಂಡಿದ್ದಾರೆ. ರೈಲ್ವೆ ಸಚಿವಾಲಯದ ಟ್ವಿಟರ್ ಹ್ಯಾಂಡಲ್‌ಗೆ ಟ್ಯಾಗ್ ಮಾಡಿ ಜನರು ಈ ವೀಡಿಯೊವನ್ನು ಟ್ವಿಟ್ ಮಾಡಿದ್ದಾರೆ. ಇದಾದ ನಂತರ ಈ ವೀಡಿಯೊ ಸಾಕಷ್ಟು ಟ್ರೋಲ್ ಆಗುತ್ತಿದೆ. ಆರೋಪಿ ಟಿಟಿಇ ವಿನಯ್ ಸಿಂಗ್ ಅವರು ಮೊಘಲ್‌ರಾಯ್ ರೈಲ್ವೆ ವಿಭಾಗದ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೀಡಿಯೊ ವೈರಲ್ ಆದ ನಂತರ, ಮೊಘಲ್‌ರಾಯ್ ರೈಲ್ವೆ ವ್ಯವಸ್ಥಾಪಕ ಪಂಕಜ್ ಸಕ್ಕೇನಾ ಅವರು ಆರೋಪಿ ಟಿಟಿಇಯನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೆ, ಈ ವಿಷಯದ ತನಿಖೆಗಾಗಿ ಒಂದು ತಂಡವನ್ನು ರಚಿಸಲಾಗಿದೆ. ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಬರೆಯಲಾಗಿದೆ.

ಜುಲೈ 25, 2019 ರಂದು ಅಮರ್ ಉಜಾಲಾ ಕೂಡ ವೈರಲ್ ವೀಡಿಯೊದ ಸ್ಕಿನ್ ಶಾಟ್‌ನೊಂದಿಗೆ ಸುದ್ದಿ ಪ್ರಕಟಿಸಿದ್ದು, ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಪೂರ್ವ ಮಧ್ಯ ರೈಲ್ವೆ ಮೊಘಲ್‌ರಾಯ್ ವಿಭಾಗದಲ್ಲಿ ಟಿಟಿಇ ರೈಲಿನಲ್ಲಿ ವೃದ್ಧನಿಂದ ಹಣವನ್ನು ಕಸಿದುಕೊಂಡರು, ವೀಡಿಯೊ ವೈರಲ್ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ಬರೆದುಕೊಂಡಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಕುಂಭಮೇಳಕ್ಕೆ ಪ್ರಯಾಣಿಸುತ್ತಿದ್ದ ವೃದ್ಧ ಪ್ರಯಾಣಿಕರಿಂದ ಟಿಟಿಇ ಬಲವಂತವಾಗಿ ಹಣ ಪಡೆಯುತ್ತಿದ್ದಾರೆ ಎಂದು ತೋರಿಸುವ ವೈರಲ್ ವೀಡಿಯೊ ನಕಲಿ ಎಂದು ನಾವು ಖಚಿತವಾಗಿ ಹೇಳುತ್ತೇವೆ.

ಈ Fact Check  ಅನ್ನು ನ್ಯೂಸ್‌ ಮೀಟರ್‌ ರವರು ಪ್ರಕಟಿಸಿದ್ದಾರೆ ಮತ್ತು ಶಕ್ತಿ ಕಲೆಕ್ಟೀವ್ ನ ಭಾಗವಾಗಿ ನ್ಯೂಸ್‌ ಮೀಟರ್‌ ರವರಿಂದ ಮರುಪ್ರಕಟಿಸಲಾಗಿದೆ.

Tags: Fact checkKarnatakaNews MeterPratidhvaniRailway DepartmentTTVedioviral
Previous Post

‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.15ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

Next Post

ದೆಹಲಿಯಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಚಿನ್ನದ ಬೆಲೆ..! – 10 ಗ್ರಾಂ ಚಿನ್ನದ ಬೆಲೆಯಲ್ಲಿ 2,430 ರೂಪಾಯಿ ಏರಿಕೆ !

Related Posts

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ...

Read moreDetails
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

January 24, 2026
Next Post
ದೆಹಲಿಯಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಚಿನ್ನದ ಬೆಲೆ..! – 10 ಗ್ರಾಂ ಚಿನ್ನದ ಬೆಲೆಯಲ್ಲಿ 2,430 ರೂಪಾಯಿ ಏರಿಕೆ !

ದೆಹಲಿಯಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಚಿನ್ನದ ಬೆಲೆ..! - 10 ಗ್ರಾಂ ಚಿನ್ನದ ಬೆಲೆಯಲ್ಲಿ 2,430 ರೂಪಾಯಿ ಏರಿಕೆ !

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada