• Home
  • About Us
  • ಕರ್ನಾಟಕ
Wednesday, July 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ತುಮರಿ ಶಾಲೆ ವಿವಾದ: ಭೂ ಮಾಫಿಯಾ ಜೊತೆ ಕೈಜೋಡಿಸಿದರೆ ಸಾಗರ ತಹಶೀಲ್ದಾರ್?

Shivakumar by Shivakumar
November 10, 2021
in ಅಭಿಮತ
0
ತುಮರಿ ಶಾಲೆ ವಿವಾದ: ಭೂ ಮಾಫಿಯಾ ಜೊತೆ ಕೈಜೋಡಿಸಿದರೆ ಸಾಗರ ತಹಶೀಲ್ದಾರ್?
Share on WhatsAppShare on FacebookShare on Telegram

ಶತಮಾನದ ಸರ್ಕಾರಿ ಶಾಲೆಯ ಕಟ್ಟಡವೂ ಸೇರಿದಂತೆ ಸಾರ್ವಜನಿಕ ಬಳಕೆಯ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಿರುವ ತುಮರಿಯ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ನೂತನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ಜಾಗದ ಮೇಲೆ ಕಣ್ಣು ಹಾಕಿರುವ ಭೂ ಮಾಫಿಯಾದ ಜೊತೆ ಸಾಗರ ತಹಶೀಲ್ದಾರರು ಕೈಜೋಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ.

ADVERTISEMENT

ತುಮರಿಯ ಸರ್ವೆ ನಂಬರ್ 24ರ ಜಾಗದಲ್ಲಿ ಇರುವ ನೂರು ವರ್ಷದ ಇತಿಹಾಸ ಇರುವ ಸರ್ಕಾರಿ ಮಾಧ್ಯಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಅವುಗಳಿಗೆ ಹೊಂದಿಕೊಂಡಿರುವ ಆಟದ ಮೈದಾನವನ್ನು ಪರಿಗಣಿಸದೆ, ಆ ಸರ್ವೆನಂಬರಿನಲ್ಲಿ ಎಂಟು ಎಕರೆ ಜಮೀನಿನ ಹಕ್ಕು ಬದಲಾವಣೆ ಮಾಡಲಾಗಿದ್ದು, ಸುಮಾರು 70 ವರ್ಷಗಳ ಹಿಂದೆ ಮಂಜೂರಾಗಿ ಅನುಭೋಗದಲ್ಲಿರದೇ ಇದ್ದ ಜಮೀನನ್ನು ಇದೀಗ ಏಳು ದಶಕದ ಬಳಿಕ ಜಾಗದ ವಾಸ್ತವಿಕ ಸ್ಥಿತಿಗತಿ ಪರಿಶೀಲಿಸದೆ ಹಕ್ಕು ಬದಲಾವಣೆ ಮಾಡಲಾಗಿದೆ.

ಈ ಕುರಿತು ಮೊದಲ ಬಾರಿಗೆ ಹತ್ತು ದಿನಗಳ ಹಿಂದೆ ‘ಪ್ರತಿಧ್ವನಿ’ ವಿಶೇಷ ವರದಿ ಮಾಡಿತ್ತು. ಪ್ರತಿಧ್ವನಿಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಪ್ರಜಾವಾಣಿ, ವಿಜಯಕರ್ನಾಟಕ, ವಿವಿಧ ಟಿವಿ ವಾಹಿನಿಗಳು ಸೇರಿದಂತೆ ಬಹುತೇಕ ಮಾಧ್ಯಮಗಳು ತುಮರಿ ಶಾಲೆಯ ಈ ವಿಚಿತ್ರ ಸ್ಥಿತಿಯ ಕುರಿತು ವರದಿ ಮಾಡಿದ್ದವು. ಜೊತೆಗೆ ಸ್ಥಳೀಯರು ಕಂದಾಯ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡಿದ್ದರು.

ಇದೀಗ ಇಡೀ ಪ್ರಕರಣಕ್ಕೆ ಮತ್ತೊಂದು ಆಯಾಮದ ಕುರಿತು ಸಾರ್ವಜನಿಕ ಚರ್ಚೆ ಆರಂಭವಾಗಿದ್ದು, “ತುಮರಿ ಭಾಗದಲ್ಲಿ ಹೊಸ ಸೇತುವೆ ನಿರ್ಮಾಣ ಕಾರ್ಯಾರಂಭದ ಬಳಿಕ ಗರಿಗೆದರಿರುವ ಭೂ ಮಾಫಿಯಾಕ್ಕೂ, ಸಾಗರ ತಹಶೀಲ್ದಾರರ ಹಕ್ಕು ಬದಲಾವಣೆಯ ತರಾತುರಿಗೂ ನೇರ ಸಂಬಂಧವಿದೆ. ತುಮರಿ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಅಂಚಿನಲ್ಲೇ ಇರುವ ಬಯಲು ಜಾಗಕ್ಕೆ ಈಗ ಭಾರೀ ಬೆಲೆ ಬಂದಿದೆ. ಹಾಗಾಗಿ ಅದರ ಮೇಲೆ ಕಣ್ಣುಹಾಕಿರುವ ಭೂ ಮಾಫಿಯಾದ ಕುಳಗಳು ಖಾಸಗೀ ವ್ಯಕ್ತಿಯ ಮೂಲಕ ಈ ಜಾಗವನ್ನು ಕಬ್ಜಾ ಮಾಡಲು ಹೊಂಚು ಹಾಕಿದ್ದಾರೆ. ಹಾಗಾಗಿಯೇ 70 ವರ್ಷಗಳ ಹಿಂದಿನ ಮಂಜೂರಾತಿಯನ್ನೇ ಮಾನದಂಡವಾಗಿಟ್ಟುಕೊಂಡು ಜಾಗದ ವಾಸ್ತವ ಸ್ಥಿತಿಗತಿ ಪರಿಶೀಲಿಸದೆ ದಿಢೀರನೇ ಹಕ್ಕು ಬದಲಾವಣೆ ಮಾಡಲಾಗಿದೆ” ಎಂಬ ಅನುಮಾನ ಗ್ರಾಮಸ್ಥರದ್ದು!

ಅದೂ ಕೂಡ “ಸ್ಥಳೀಯ ಶಾಲಾಭಿವೃದ್ಧಿ ಸಮಿತಿ, ಗ್ರಾಮ ಪಂಚಾಯ್ತಿ ಮತ್ತು ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಶಾಲೆಯ ಜಾಗ ಮತ್ತು ಮೈದಾನದ ಜಾಗವನ್ನು ಶಾಲೆಗೆ ಮಂಜೂರು ಮಾಡಬೇಕು ಮತ್ತು ದಾಖಲೆ ತಿದ್ದುಪಡಿ ಮಾಡಬೇಕು. ಹಾಗೇ ಆ ಜಾಗವನ್ನು ಇತರೆ ಯಾವುದೇ ವ್ಯಕ್ತಿಗಳಿಗೆ ಮಂಜೂರು ಮಾಡಬಾರದು ಎಂದು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರೂ, ಅದನ್ನೆಲ್ಲಾ ಬದಿಗೊತ್ತಿ ಏಕಾಏಕಿಯಾಗಿ ಸಾಗರ ತಹಶೀಲ್ದಾರರು ಏಕಪಕ್ಷೀಯವಾಗಿ ಹಕ್ಕು ಬದಲಾವಣೆ ಮಾಡಿಕೊಟ್ಟಿದ್ದಾರೆ. ಖಾಸಗಿ ವ್ಯಕ್ತಿಗೆ ಹಕ್ಕು ಬದಲಾವಣೆಗೆ ತೋರಿದ ಆಸಕ್ತಿ, ಧಾವಂತವನ್ನು ಸರ್ಕಾರಿ ಶಾಲೆ ಮತ್ತು ಆಟದ ಮೈದಾನದ ರಕ್ಷಣೆಗೆ ತೋರಲಿಲ್ಲ” ಎಂಬುದು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕನಾಥ್ ಜೈನ್ ಅವರ ಆಕ್ರೋಶ.

ಹಾಗೇ, ಶಾಲಾಭಿವೃದ್ಧಿ ಸಮಿತಿ ಮತ್ತು ಪಂಚಾಯ್ತಿಯಿಂದ ಮೂರ್ನಾಲ್ಕು ವರ್ಷಗಳಿಂದಲೇ ಜಾಗದ ಕುರಿತು ಅರ್ಜಿ ಸಲ್ಲಿಸಿದ್ದರೂ, ಆ ಬಗ್ಗೆ ಚಕಾರವೆತ್ತದ ತಹಶೀಲ್ದಾರರು, ಅದೇ ಜಾಗವನ್ನು ಖಾಸಗೀ ವ್ಯಕ್ತಿಗೆ ಹಕ್ಕು ಬದಲಾವಣೆ ಮಾಡಿಕೊಡಲು ಕರೋನಾ ಲಾಕ್ ಡೌನ್ ನಡುವೆಯೇ ಆದೇಶ ಹೊರಡಿಸಿದ್ದಾರೆ. “ಪಂಚಾಯ್ತಿ ಹಿಂದಿನ ಅಧ್ಯಕ್ಷರು ಮತ್ತು ಶಾಲಾ ಸಮಿತಿ ಆಕ್ಷೇಪಣೆ ಸಲ್ಲಿಸಿ, ಶಾಲೆ ಮತ್ತು ಮೈದಾನಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾವುದೇ ಕಾರಣಕ್ಕೂ ಯಾರಿಗೂ ಮಂಜೂರು ಮಾಡಬಾರದು ಎಂದು ಮನವಿ ಮಾಡಿದ್ದರೂ, ಆ ಮನವಿದಾರರ ಗಮನಕ್ಕೇ ತರದೇ ಕರೋನಾ ಲಾಕ್ ಡೌನ್ ನಡುವೆ, ಜನ ಸಂಚಾರ ನಿಷೇಧದ ನಡುವೆ, ತಹಶೀಲ್ದಾರರು ದಾಖಲೆ ತಿದ್ದುಪಡಿ ಮಾಡಿ 2021ರ ಏಪ್ರಿಲ್ 29ರಂದು ಆದೇಶ ಹೊರಡಿಸಿರುವುದು ಭೂ ಮಾಫಿಯಾದ ಕೈವಾಡ ಮತ್ತು ಅದರಲ್ಲಿ ತಹಶೀಲ್ದಾರರು ಕೂಡ ಭಾಗಿಯಾಗಿರುವ ಅನುಮಾನಗಳಿಗೆ ಪುಷ್ಟಿ ನೀಡುತ್ತಿದೆ” ಎಂಬುದು ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಕೃಷ್ಣ ಭಂಡಾರಿ ಅವರ ವಾದ.

ತಮ್ಮೂರಿನ ಶತಮಾನದ ಶಾಲೆ ಉಳಿಯಬೇಕು ಮತ್ತು ಊರಿನ ಏಕೈಕ ಆಟದ ಮೈದಾನವೂ ಶಾಲಾ ಮಕ್ಕಳು ಮತ್ತು ಸಾರ್ವಜನಿಕರ ಪಾಲಿಗೆ ಉಳಿಯಬೇಕು ಎಂಬ ನಿರಂತರ ಪ್ರಯತ್ನ ನಡೆಸುತ್ತಿರುವ ಸ್ಥಳೀಯ ಶಿಕ್ಷಣ ಪ್ರೇಮಿಗಳು ಮತ್ತು ಊರಿನ ಹಿತವನ್ನಷ್ಟೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿರುವ ಪುಟ್ಟ ಊರಿನ ಈ ಸ್ಥಳೀಯರ ಕಾಳಜಿಗೆ ಸಾಗರ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತಗಳ ಜಾಣಕುರುಡು ಪ್ರತಿಕ್ರಿಯೆ ಕೂಡ ಜನರನ್ನು ರೊಚ್ಚಿಗೆಬ್ಬಿಸಿದೆ.

“ಶತಮಾನದ ಸರ್ಕಾರಿ ಶಾಲೆಯ ಜಾಗವನ್ನೇ ಅಕ್ರಮವಾಗಿ ಮಂಜೂರಾತಿ ಮಾಡಿರುವ ಸಾಗರ ತಹಶೀಲ್ದಾರರ ಅಕ್ರಮ ಬಯಲಿಗೆ ಬಂದು ಹತ್ತು ದಿನಗಳು ಕಳೆದರೂ ಈವರೆಗೆ ಸ್ಥಳಕ್ಕೆ ಭೇಟಿ ನೀಡುವ ಕನಿಷ್ಟ ಕಾಳಜಿಯನ್ನೂ ಅಧಿಕಾರಿ ವರ್ಗ ತೋರಿಲ್ಲ. ಸಾಗರ ಉಪ ವಿಭಾಗ ಕಂದಾಯ ಇಲಾಖೆಯ ಮುಖ್ಯಸ್ಥರಾದ ಉಪ ವಿಭಾಗಾಧಿಕಾರಿಗಳಾಗಲೀ, ಶಿಕ್ಷಣ ಇಲಾಖೆಯ ಮುಖ್ಯಸ್ಥರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಲೀ, ಅಥವಾ ಜಿಲ್ಲಾ ಮಟ್ಟದ ಆಯಾ ಇಲಾಖೆಗಳ ಮುಖ್ಯಸ್ಥರಾಗಲೀ ಈವರೆಗೆ ತುಮರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮತ್ತು ಗ್ರಾಮಸ್ಥರೊಂದಿಗೆ ಸಮಸ್ಯೆ ಕುರಿತು ಚರ್ಚಿಸುವ ಆಸಕ್ತಿಯನ್ನೇ ತೋರಿಲ್ಲ. ಸರ್ಕಾರಿ ಆಸ್ತಿಯನ್ನು ಉಳಿಸಿಕೊಳ್ಳಬೇಕಾದ ಅಧಿಕಾರಿಗಳೇ ಇಂತಹ ಜಾಣಕುರುಡುತನ ಪ್ರದರ್ಶಿಸುತ್ತಿರುವುದು ಕೂಡ ನಮಗೆ ಇಡೀ ವ್ಯವಸ್ಥೆ ಭೂ ಮಾಫಿಯಾದ ಕೈವಶವಾಗಿದೆಯೇ ಎಂಬ ಅನುಮಾನಗಳನ್ನು ಹುಟ್ಟಿಸುತ್ತಿದೆ” ಎಂಬುದು ತುಮರಿ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಜಿ ಟಿ ಸತ್ಯನಾರಾಯಣ್ ಅವರ ಅಭಿಪ್ರಾಯ.

Also Read : ಅಧಿಕಾರಿಗಳ ಯಡವಟ್ಟು : ಸಂಭ್ರಮದ ಹೊತ್ತಲ್ಲಿ ಸಂಕಷ್ಟಕ್ಕೆ ಸಿಲುಕಿದ ತುಮರಿ ಶಾಲೆ?

ಒಟ್ಟಾರೆ, ಸರ್ಕಾರಿ ಶಾಲೆಯ ಜಾಗ, ಮೈದಾನಗಳನ್ನು ಒತ್ತುವರಿ ಮಾಡಿ ಕಬ್ಜಾ ಮಾಡಲು ಜನ ಹಾತೊರೆಯುವುದು ಮತ್ತು ಸರ್ಕಾರಿ ವ್ಯವಸ್ಥೆ ಅಂತಹ ಹುನ್ನಾರಗಳನ್ನು ವಿಫಲಗೊಳಿಸಿ ಸರ್ಕಾರಿ ಆಸ್ತಿ ರಕ್ಷಿಸುವುದು ಸಾಮಾನ್ಯ ಸಂಗತಿಯಾಗಿದ್ದರೆ, ಸಾಗರ ತಾಲೂಕು ತಹಶೀಲ್ದಾರರ ವಿಷಯದಲ್ಲಿ ಮಾತ್ರ ಇದು ತದ್ವಿರುದ್ಧ. ಇಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಭೂ ಮಾಫಿಯಾದ ಹುನ್ನಾರಗಳ ವಿರುದ್ಧ ನಾಗರಿಕರೇ ಟೊಂಕ ಕಟ್ಟಿ ನಿಂತಿದ್ದಾರೆ; ಶರಾವತಿ ಹಿನ್ನೀರಿನ ತುಮರಿಯ ಶತಮಾನದ ಸರ್ಕಾರಿ ಶಾಲೆ ಮತ್ತು ಅದರ ಆಟದ ಮೈದಾನದ ರಕ್ಷಣೆಗಾಗಿ!

Previous Post

ದೆಹಲಿಗೆ ದೌಡಾಯಿಸಿದ ಸಿಎಂ ಬೊಮ್ಮಾಯಿ ಹೈಕಮಾಂಡ್ ನಾಯಕರ ಜತೆ ಬಿಟ್ ಕಾಯನ್ ಸ್ಕ್ಯಾಮ್ ಬಗ್ಗೆ ಚರ್ಚೆ ಮಾಡ್ತಾರಾ?

Next Post

ಕಾಂಗ್ರೆಸ್‌ ನಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ : ಬಿಜೆಪಿ ಕೆಂಡಾಮಂಡಲ!

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಕಾಂಗ್ರೆಸ್‌ ನಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ : ಬಿಜೆಪಿ ಕೆಂಡಾಮಂಡಲ!

ಕಾಂಗ್ರೆಸ್‌ ನಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ : ಬಿಜೆಪಿ ಕೆಂಡಾಮಂಡಲ!

Please login to join discussion

Recent News

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ
Top Story

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

by ಪ್ರತಿಧ್ವನಿ
July 22, 2025
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 
Top Story

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

by Chetan
July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ
Top Story

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

by Shivakumar A
July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 
Top Story

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

by Chetan
July 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

July 22, 2025
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada