ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಪತ್ನಿ ಭಾಗ್ಯ (38), ಭಾಗ್ಯ ಅಕ್ಕನ ಮಗಳು ಹೇಮಾವತಿ (22) ಮತ್ತು ಮಗಳು ನವ್ಯಾ (19) ಹತ್ಯೆಗೈದು ಹೋಂ ಗಾರ್ಡ್ ಆಗಿರುವ ಪತಿ ಗಂಗರಾಜು ಪರಾರಿಯಾಗಿದ್ದ. ಪೀಣ್ಯ ಠಾಣೆ ಪೊಲೀಸರು ಸದ್ಯ ಆರೋಪಿ ಗಂಗರಾಜು ನನ್ನು ಬಂಧಿಸಿದ್ದಾರೆ.

ಘಟನೆ ಸಂಬಂಧ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಪ್ರತಿಕ್ರಿಯಿಸಿದ್ದು, ಇವತ್ತು ಸಂಜೆ 5 ಗಂಟೆಗೆ 112 ಮುಖಾಂತರ ಮಾಹಿತಿ ಬಂತು. ಸ್ಥಳಕ್ಕೆ ಹೊಯ್ಸಳ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮೂರು ಹೆಂಗಸರ ಕೊಲೆ ನಡೆದಿರುವುದು ಪತ್ತೆಯಾಗಿದೆ. ಮಹಿಳೆ ಭಾಗ್ಯ, ಆಕೆಯ ಮಗಳು ನವ್ಯ, ಸಂಬಂಧಿ ಹೇಮಾವತಿ ಎಂಬುವವರ ಕೊಲೆಯಾಗಿದೆ.

ಗಂಗರಾಜು ಎಂಬಾತನಿಂದ ಕೊಲೆ ನಡೆದಿದೆ. ಹೆಬ್ಬುಗೋಡಿಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡುತಿದ್ದಾನೆ. ಕೊಲೆ ಮಾಡಿದ ಬಳಿಕ ವೆಪನ್ ಸಮೇತ ಆತನೇ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಇವರು ನೆಲಮಂಗಲದವರು. ಕಳೆದ ಆರು ವರ್ಷದಿಂದ ಬಾಡಿಗೆ ಮನೆಯಲ್ಲಿ ಇಲ್ಲಿ ವಾಸವಾಗಿದ್ದರು. ಯಾಕೆ ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ವಿಚಾರಣೆ ಮಾಡಲಾಗುತ್ತೆ. ನಂತರದಲ್ಲಿ ತಿಳಿಯಲಿದೆ ಎಂದು ಹೇಳಿದ್ದಾರೆ.




