ಶಿಥಿಲಾವಸ್ಥೆಯ ಕಾಂಪೌಂಡ್ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಗರದ ದೀಪಾಂಜಲಿ ನಗರದ ಜಂಕ್ಷನ್ ಬಳಿ ನಡೆದಿರುವುದು ಬೆಳಕಿಗೆ ಬಂದಿದೆ.
ರಾಜಮಣಿ (35), ಬಾಲು (30) ಮೃತ ದುರ್ದೈವಿಗಳು. ಮೃತರು ವಾಲ್ಮೀಕಿ ನಗರ ನಿವಾಸಿಗಳು ಎಂದು ತಿಳಿದು ಬಂದಿದೆ.
ನಗರದಲ್ಲಿ ಕಳೆದ ಎರಡು ವಾರಗಳಿಂದ ಮಳೆಯಾಗುತ್ತಿದೆ. ಮಳೆಗೆ ನೆನೆದು ನಿಂತಿದ್ದ ಶಿಥಿಲಾವಸ್ಥೆಯ ಕಾಂಪೌಂಡ್ ಹಠಾತ್ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.