• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹರಿದ್ವಾರ ದ್ವೇಷ ಭಾಷಣ : ಇಬ್ಬರು ಸಾಧುಗಳಿಗೆ ಪೊಲೀಸರಿಂದ ನೋಟಿಸ್ ಜಾರಿ

Any Mind by Any Mind
December 30, 2021
in ಇದೀಗ, ದೇಶ
0
ಹರಿದ್ವಾರ ದ್ವೇಷ ಭಾಷಣ :  ಇಬ್ಬರು ಸಾಧುಗಳಿಗೆ ಪೊಲೀಸರಿಂದ ನೋಟಿಸ್ ಜಾರಿ
Share on WhatsAppShare on FacebookShare on Telegram

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ʻಧರ್ಮ ಸಂಸದ್ʼ ಸಭೆಯಲ್ಲಿ ಕೋಮು ಸೌಹಾರ್ದ ಕದಡುವ ಭಾಷಣ ಮಾಡಿದ ಸಾಧುಗಳ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು, ಈ ಸಂಬಂಧ ಸಾಧುಗಳು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ADVERTISEMENT

ಡಿಸೆಂಬರ್ 17-19ರ ವರೆಗೆ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಮುಸ್ಲಿಮರನ್ನು ಹತ್ಯೆಗೈಯುವಂತೆ ಕರೆ ನೀಡಿ, ದೇಶದಲ್ಲಿ ಕೋಮು ಸೌಹಾರ್ದ ಕದಡುವ ಭಾಷಣ ಮಾಡಿದ್ದರು. ಈ ವಿಚಾರ ತೀವ್ರ ಚರ್ಚೆಗೆ ಒಳಪಟ್ಟು ಶಿಯಾ ವಕ್ಛ್ ಬೋರ್ಡ್ನ ಮಾಜಿ ಅಧ್ಯಕ್ಷ ಜಿತೇಂದ್ರ ನಾರಾಯಣ್ ತ್ಯಾಗಿ (ಹಿಂದೂ ಧರ್ಮಕ್ಕೆ ಮತಾಂತರವಾಗುವ ಮುನ್ನ ವಾಸಿಂ ರಿಜ್ಷಿ), ಸಾದ್ವಿ ಅನ್ನಪೂರ್ಣ ಮತ್ತು ಧರ್ಮದಾಸ ಮಹಾರಾಜ್ ವಿರುದ್ದ ಆಕ್ಷೇಪಗಳು ಕೇಳಿ ಬಂದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾದ್ವಿ ಅನ್ನಪೂರ್ಣ ಮತ್ತು ಧರ್ಮದಾಸ್ ವಿರುದ್ದ ಪೊಲೀಸರು ಭಾರತ ದಂಡ ಸಂಹಿತೆ 41(ಎ) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಜನವರಿ 4ರ ಒಳಗೆ ಹರಿದ್ವಾರದ ಕೊತ್ವಾಲಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪೊಲೀಸ್ ಅಧಿಕಾರಿ ರಾಕೇಂದ್ರ ಕಥೈಟ್ ಈ ಕುರಿತು ಪ್ರತಿಕ್ರಿಯಿಸಿದ್ದು, “ಇಬ್ಬರು ನೋಟಿಸ್ ಸ್ವೀಕರಿಸಿದ್ದು, ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಧರ್ಮದಾಸ ಹರಿದ್ವಾರದ ತಮ್ಮ ನಿವಾಸದಿಂದ ಕಾಲ್ಕಿತ್ತಿದ್ದು, ಅವರಿಗೆ ನೋಟಿಸ್ ತಲುಪಿಲ್ಲ. ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಆದಷ್ಟು ಬೇಗ ಅವರಿಗೂ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ವಿರುದ್ದ ದೂರು ದಾಖಲಾಗುತ್ತಿದ್ದಂತೆ ಪ್ರತಿ ದೂರನ್ನು ದಾಖಲಿಸಿರುವ ಜಿತೇಂದ್ರ ನಾರಾಯಣ್ ತ್ಯಾಗಿ, ʻತಾವು ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮಗೆ ಮುಸ್ಲಿಂ ಮೂಲಭೂತವಾದಿಗಳಿಂದ ಜೀವ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ತಮಗೆ ಅಗತ್ಯ ರಕ್ಷಣೆ ಕೋರಿ ದೂರು ದಾಖಲಿಸಿದ್ದಾರೆ. ದೂರನ್ನು ಪರಿಶೀಲಿಸಲಾಗುತ್ತಿದೆ ಎಂದು ಕಥೈಟ್ ವಿವರಿಸಿದ್ದಾರೆ.

ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಎಲ್ಲಾ ಸಾಧು ಸಂತರು, ಹಿಂದೂ ಸಂಘಟನೆಗಳು ಮುಖಂಡರು ಮೂರು ದಿನಗಳ ಕಾಲ ಅನ್ಯ ಕೋಮಿನ ಜನರನ್ನು ಗುರಿಯಾಗಿಸಿಕೊಂಡು ದ್ವೇಷ ಪೂರಿತ ಭಾಷಣ ಮಾಡಿದ್ದರು. ಸಾದ್ವಿ ಅನ್ನಪೂರ್ಣ ಕಾರ್ಯಕ್ರಮದಲ್ಲಿ ನರಮೇಧ ಮಾಡುವಂತೆ ಕರೆ ನೀಡಿದ್ದರು. ಮುಂದುವರೆದು, ನಮ್ಮ ದೇಶದ ಸಂವಿಧಾನವನ್ನ ತಪ್ಪಾಗಿ ಬರೆಯಲಾಗಿದೆ. ಗಾಂಧೀಜಿಯನ್ನು ಪೂಜಿಸುವ ಬದಲು ನಮ್ಮ ದೇಶ ಗೋಡ್ಸೆಯನ್ನು ಪೂಜಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಧರ್ಮದಾಸ ಮಹಾರಾಜ್ ಕೂಡ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹತ್ಯೆಗೆ ಕರೆ ನೀಡಿದ್ದರು. ಮಾಜಿ ಪ್ರಧಾನಿಗಳ ಹತ್ಯೆಗೆ ನಾವು ಗೋಡ್ಸೆ ಹಾದಿಯನ್ನು ಅನುಸರಿಸಬೇಕಾಗುತ್ತದೆ. ಏಕೆಂದರೆ ಅವರು 2006ರಲ್ಲಿ ಸಂಸತ್ ಅಧಿವೇಶನದಲ್ಲಿ ಮಾತನಾಡುವ ಸಮಯದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ದೇಶದ ಸಂಪನ್ಮೂಲಗಳ ಮೊದಲ ಪ್ರಾಶ್ಯಸ್ತ್ಯದ ಹಕ್ಕುದಾರರು ಎಂದು 15 ವರ್ಷಗಳ ಹಿಂದೆ ನೀಡಿದ ಹೇಳಿಕೆ ಉಲ್ಲೇಖಿಸಿ ಭಾಷಣ ಮಾಡಿದ್ದನ್ನು ಇಲ್ಲಿ ಗಮನಿಸಬಹದು.

ಸಾಧು ಸಂತರು ಇಷ್ಟೆಲ್ಲಾ ಹೇಳಿಕೆ ನೀಡಿದ್ದರೂ ಸಹ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಜರುಗಿಸಿರಲಿಲ್ಲ. ಪ್ರತಿಪಕ್ಷದ ನಾಯಕರು, ಸುಪ್ರೀಂ ಕೋರ್ಟ್ ಹಿರಿಯ ವಕೀಲರು, ಅಲ್ಪಸಂಖ್ಯಾತ ಸಂಘಟನೆಗಳು ಈ ಬಗ್ಗೆ ತೀವ್ರ ಆಕ್ರೋಶ ಹೊರಹಾಕಿದ ನಂತರ ಪ್ರಕರಣ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರಣೆ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress Partyಕೋಮು ಸೌಹಾರ್ದಧರ್ಮ ಸಂಸದ್ನೋಟಿಸ್ಪೊಲೀಸರುಪೊಲೀಸ್ ಅಧಿಕಾರಿಬಿಜೆಪಿಮುಸ್ಲಿಮರುಸಾಧುಗಳುಹರಿದ್ವಾರ
Previous Post

ಸಚಿವ ಸ್ಥಾನ ಬಿಟ್ಟುಕೊಡಲು ಪಕ್ಷದ ಹಿರಿಯರು ಧಾರಾಳವಾಗಿ ತಯಾರಿದ್ದೇವೆ : ಸಚಿವ ಕೆ.ಎಸ್ ಈಶ್ವರಪ್ಪ

Next Post

ಬಿಲ್ ಕಲೆಕ್ಟ್ ವಿಚಾರ : ಲೈನ್ ಮ್ಯಾನ್ ಹಾಗೂ ಜನರ ನಡುವೆ ಮಾರಾಮಾರಿ!

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಬಿಲ್ ಕಲೆಕ್ಟ್ ವಿಚಾರ : ಲೈನ್ ಮ್ಯಾನ್ ಹಾಗೂ ಜನರ ನಡುವೆ ಮಾರಾಮಾರಿ!

ಬಿಲ್ ಕಲೆಕ್ಟ್ ವಿಚಾರ : ಲೈನ್ ಮ್ಯಾನ್ ಹಾಗೂ ಜನರ ನಡುವೆ ಮಾರಾಮಾರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada