• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕನ್ನಡ ಕಡೆಗಣಸಿದ ಎರಡು ಆರೋಗ್ಯ ಸಂಸ್ಥೆಗಳಿಗೆ ಕರವೇ ಎಚ್ಚರಿಕೆ : ತಪ್ಪನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು

Any Mind by Any Mind
August 23, 2022
in ಇದೀಗ
0
ಕನ್ನಡ ಕಡೆಗಣಸಿದ ಎರಡು ಆರೋಗ್ಯ ಸಂಸ್ಥೆಗಳಿಗೆ ಕರವೇ ಎಚ್ಚರಿಕೆ : ತಪ್ಪನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು
Share on WhatsAppShare on FacebookShare on Telegram

ಕರ್ನಾಟಕದಲ್ಲಿ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಸಂಸ್ಥೆಗಳಲ್ಲಿ ನಡೆಯುವ ಸಾರ್ವಜನಿಕ‌ ಸಮಾರಂಭಗಳಲ್ಲಿ ಕನ್ನಡವನ್ನು ಕಡೆಗಣಿಸಿದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಮುಂದೆ‌ ಈ ರೀತಿಯ ಘಟನೆಗಳು ನಡೆದರೆ ಆಗುವ ಅನಾಹುತಗಳಿಗೆ ಆಯಾ ಸಂಸ್ಥೆಗಳೇ ಹೊಣೆಯಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ‌ ಎಚ್ಚರಿಕೆ ನೀಡಿದೆ.

ADVERTISEMENT

ರಾಜ್ಯದ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಹಾಗೂ ರಾಜೀವ್ ಗಾಂಧಿ ಎದೆರೋಗ ಸಂಸ್ಥೆ ಹಾಗು ರಾಷ್ಟ್ರೀಯ ನರವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ 10-10-2021ರಂದು ನಡೆದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಇಂದು (13-10-2021) ಉಭಯ ಸಂಸ್ಥೆಗಳ ಮುಖ್ಯಸ್ಥರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಹಾಗು ರಾಜೀವ್ ಗಾಂಧಿ‌ ಆಸ್ಪತ್ರೆಯ ನಿರ್ದೇಶಕ‌‌ ಡಾ.ನಾಗರಾಜ್ ಅವರಿಗೆ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಬರೆದಿರುವ ಖಂಡನಾ ಪತ್ರವನ್ನು ನೀಡಲಾಯಿತು. ಆಗಿರುವ ಪ್ರಮಾದವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕನ್ನಡ ಕಡೆಗಣನೆ ಆಗಿರುವುದನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು ಇನ್ನುಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದರು.

ನಿಮ್ಹಾನ್ಸ್ ಸಂಸ್ಥೆಗೆ ನೂರು ಎಕರೆ ಜಾಗ ನೀಡಿ, ಅಡಿಗಲ್ಲು ಹಾಕಿ ಸ್ಥಾಪಿಸಿದ್ದು ರಾಜರ್ಷಿ‌ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1936ರಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನು ಸ್ಥಾಪಿಸಿದಾಗ ಹಿಂದಿ ಎಂಬ ಭಾಷೆಯ ಪರಿಚಯವೇ ಕನ್ನಡಿಗರಿಗೆ ಇರಲಿಲ್ಲ. ಇಂಥ‌ ಸಂಸ್ಥೆಯಲ್ಲಿ ಹಿಂದಿ ನುಡಿಗೆ ಹೆಚ್ಚುಗಾರಿಕೆ ನೀಡಿ,‌ ಕನ್ನಡಕ್ಕೆ ಅಪಮಾನ ಎಸಗಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನಿರ್ದೇಶಕರಿಗೆ ಮನವರಿಗೆ ಮಾಡಿಕೊಡಲಾಯಿತು.

ಅದೇ ರೀತಿ‌ ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ರಾಜೀವ್ ಗಾಂಧಿ‌ ಎದೆರೋಗಗಳ ಆಸ್ಪತ್ರೆಯ ಜಾಗದಲ್ಲಿ ಖಾಸಗಿ ಸಂಸ್ಥೆಗಳು ಸ್ಥಾಪಿಸುತ್ತಿರುವ ಕೋವಿಡ್ ಫೀಲ್ಡ್ ಆಸ್ಪತ್ರೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ‌ ಕನ್ನಡ ಬಳಸದೆ ಸರ್ಕಾರದ ಆಡಳಿತ ಭಾಷಾ‌ನೀತಿಯನ್ನು ಉಲ್ಲಂಘಿಸಲಾಗಿದೆ. ಇನ್ನುಮುಂದೆ ಇದೇ ರೀತಿ ನಡೆದರೆ ಖಾಸಗಿ ಸಂಸ್ಥೆಗಳ ವಿರುದ್ಧವೂ ಪ್ರತಿಭಟನೆ ನಡೆಸಬೇಕಾದೀತು ಎಂದು ಎಚ್ಚರಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗದಲ್ಲಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ‌ ಬಿ.ಎಚ್.ಸತೀಶ್ ಗೌಡ,‌ ಸಾಮಾಜಿಕ ಜಾಲತಾಣ ಮುಖ್ಯಸ್ಥ ದಿನೇಶ್ ಕುಮಾರ್ ಎಸ್.ಸಿ, ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ,  ಸಾಮಾಜಿಕ ಜಾಲತಾಣ ಬೆಂಗಳೂರು ನಗರ ಅಧ್ಯಕ್ಷ ನಿತೀಶ್ ಮನುಗೌಡ, ವಿಜಯನಗರ ಕ್ಷೇತ್ರ ಘಟಕದ ಅಧ್ಯಕ್ಷ ಬಾಲು, ಯುವ ಘಟಕದ ಬೆಂಗಳೂರು ನಗರ ಅಧ್ಯಕ್ಷ ಕಾರ್ತಿಕ್ ಸೇರಿದಂತೆ‌ ಹಲವರು ಪಾಲ್ಗೊಂಡಿದ್ದರು.

Tags: BJPCongress PartyCovid 19ಕನ್ನಡ ಕಡೆಗಣನೆಕೋವಿಡ್-19ಡಾ.ಪ್ರತಿಮಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿರಾಜೀವ್ ಗಾಂಧಿ‌ ಆಸ್ಪತ್ರೆ
Previous Post

ಸಲೀಂ ಅವರ ಹೇಳಿಕೆ ತಿರುಚುವುದು ಬೇಡ, ಡಿ.ಕೆ.ಶಿವಕುಮಾರ್‌ ಭ್ರಷ್ಟರಲ್ಲ: ವಿ.ಎಸ್.ಉಗ್ರಪ್ಪ

Next Post

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸ್ತೀರಿ: ಸಚಿವ ಈಶ್ವರಪ್ಪ ಎಚ್ಚರಿಕೆ!

Related Posts

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*
Uncategorized

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

by ಪ್ರತಿಧ್ವನಿ
December 2, 2025
0

*Former Congress MLA from Chikkapet assembly constituency in Bengaluru, R.V. Devaraj passed away in Mysore**ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ...

Read moreDetails
ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

November 29, 2025

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

November 28, 2025

ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉದಯ್‌ ಸ್ಟಾಲಿನ್‌…

November 27, 2025
ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

November 25, 2025
Next Post
ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸ್ತೀರಿ: ಸಚಿವ ಈಶ್ವರಪ್ಪ ಎಚ್ಚರಿಕೆ!

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸ್ತೀರಿ: ಸಚಿವ ಈಶ್ವರಪ್ಪ ಎಚ್ಚರಿಕೆ!

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada