ಬರುವ ತಿಂಗಳು ಚುನಾವಣೆ ನಡೆಯಲಿರುವ ಗೋವಾದಲ್ಲಿ ಬಿಜೆಪಿಗೆ ಇಂದು ದೊಡ್ಡ ಆಘಾತ ಎದುರಾಗಿದೆ. ಹೌದು ಗೋವಾದ ಮಾಜಿ ಸಿಎಂ ಲಕ್ಷೀಕಾಂತ್ ಪರಸೇಕರ್ ಮತ್ತು ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಇಬ್ಬರು ಬಿಜೆಪಿ ತೊರೆದಿದ್ದಾರೆ.
ಇತ್ತೀಚಿಗಷ್ಟೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ ಹೊಸಬರಿಗೆ ಮಣೆ ಹಾಕಿ ಹಳಬರಿಗೆ ಕೊಕ್ ನೀಡಿತ್ತು. ಈ ನಿಟ್ಟಿನಲ್ಲಿ ಆಕಾಂಕ್ಷಿಗಳಾಗಿದ್ದ ಪರಸೇಕರ್ ಹಾಗೂ ಉತ್ಪಲ್ಗೆ ಟಿಕೆಟ್ ನಿರಾಕರಿಸಲಾಗಿತ್ತು. ಆದ್ದರಿಂದ ಇಬ್ಬರು ಪಕ್ಷ ತೊರೆದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ.