Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

ಪ್ರತಿಧ್ವನಿ

ಪ್ರತಿಧ್ವನಿ

March 26, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಶಿವಮೊಗ್ಗ:ಮಾ.26: ಶಿವಮೊಗ್ಗ ಜಿಲ್ಲೆ‌ ಭದ್ರಾವತಿಯ ಹೆಮ್ಮೆಯ ಕಾರ್ಖಾನೆ ವಿಶ್ವೇಶ್ವರಯ್ಯ ಐರನ್ ಸ್ಟೀಲ್ ಲಿಮಿಟೆಡ್. ಜನವರಿಯಲ್ಲಿ ಸ್ಟೀಲ್ ಆಥಾರಿಟಿ ಆಫ್ ಇಂಡಿಯಾ ಸಲಹೆಯಂತೆ ಬೋರ್ಡ್ ಆಫ್ ಡೈರೆಕ್ಟರ್ ಮೀಟಿಂಗ್ ಈ ಐತಿಹಾಸಿಕ ಕಾರ್ಖಾನೆ ಮುಚ್ಚಲು ನಿರ್ಣಯ ತೆಗೆದುಕೊಂಡಿತ್ತು. ಉತ್ಪಾದನಾ ಹಂತದಲ್ಲೇ ನಷ್ಟದ ಹೆಸರಲ್ಲಿ ಬಂಡವಾಳ ಹೂಡಿಕೆ ಮಾಡದೇ ಮುಚ್ಚಲು ಹೊರಟ ಸರ್ಕಾರಗಳ ವಿರುದ್ಧ ಕಾರ್ಮಿಕರು ಸಿಡಿದೆದ್ದರು. ನೂರಾರು ಗುತ್ತಿಗೆ ಕಾರ್ಮಿಕರು ಭದ್ರಾವತಿ ಭವ್ಯ ಪರಂಪರೆ ಸಾರುತ್ತಿರುವ ಕಾರ್ಖಾನೆ ಮುಚ್ಚುವ ನಿರ್ಣಯದ ವಿರುದ್ಧ ಸಮರ ಸಾರಿದ್ದು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದಾರೆ. ಭದ್ರವತಿ ಜನರಷ್ಟೇ ಅಲ್ಲದೇ ರಾಜ್ಯದೆಲ್ಲೆಡೆ ಈ ಹೋರಾಟಕ್ಕೆ ಬೆಂಬಲ ದೊರೆತಿದೆ. ನಾನಾ ಮಠದ ಸ್ವಾಮೀಜಿಗಳೂ ಸಹ ಪ್ರತಿಭಟನಾ ನಿರತ ಕಾರ್ಮಿಕರಿಗೆ ಬೆಂಬಲ ನೀಡಿದ್ದಾರೆ.

ಕಾರ್ಖಾನೆ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರ ಚಳವಳಿಗೆ ಅರವತ್ತೇಳು ದಿನ ತುಂಬಿರೋದ್ರಿಂದ ಇಂದು ರಕ್ತ ಪತ್ರ ಚಳವಳಿ ನಡೆಸಿದರು. ಒಂದು ರೂಪಾಯಿ ಪೋಸ್ಟಲ್ ಕಾರ್ಡ್ ನಲ್ಲಿ ಕಾರ್ಮಿಕರು ಮತ್ತು ಮಹಿಳೆಯರು ಸಿರಿಂಜ್ ಲ್ಲಿ ರಕ್ತ ತೆಗೆದು ಲೋಟದಲ್ಲಿ ಸಂಗ್ರಹಿಸಿ ನಂತರ ಕಾರ್ಡ್ ನಲ್ಲಿ Save VISL ಎಂದು ಬರೆದು ಹೆಬ್ಬೆಟ್ಟು ಒತ್ತಿ ಪ್ರಧಾನಿ ಮೋದಿ ವಿಳಾಸಕ್ಕೆ ಕಳುಹಿಸಿದ್ದಾರೆ. ಈ ಪತ್ರಗಳನ್ನ ಟ್ವಿಟ್ಟರ್ ಫೇಸ್ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳನ್ನು ಕೂಡ ಪೋಸ್ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಹೊಸದುರ್ಗ ಕನಕಪೀಠದ ಮಠಾಧೀಶ್ವರ ಈಶ್ವರಾನಂದ ಪುರಿ ಸ್ವಾಮಿಗಳು ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿ ಪ್ರತಿಭಟನಾ ನಿರತ ಕಾರ್ಮಿಕರು ರಕ್ತದಲ್ಲಿ ಪತ್ರ ಬರೆದು ಬಾಕ್ಸ್ ಗೆ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗುತ್ತಿಗೆ ನೌಕರ ಸಂಘದ ಪದಾಧಿಕಾರಿ ರಾಕೇಶ್ ರೆಡ್ಡಿ, ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇಂದು ನಮ್ಮ ಕಾರ್ಖಾನೆ ಉಳಿಸಲು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ಮೋದಿಗೆ ಕಳಿಸುತ್ತಿದ್ದೇವೆ. ಈ ಕಾರ್ಖಾನೆ ರಾಜಕೀಯ ವ್ಯಕ್ತಿಗಳು ಅಥವಾ ಯಾವುದೋ ಪುಡಾರಿಗಳು ಕಟ್ಟಿರುವಂತಹದಲ್ಲ. ಜನರ ಸಮಸ್ಯೆಗಳನ್ನು ನಿವಾರಣೆ ಆಗಲಿ ಅಭಿವೃದ್ಧಿ ಪಥದತ್ತ ಸಾಗಲಿ ಎಂದು. ಅಂದು ನಾಲ್ವಾಡಿ ಕೃಷ್ಣರಾಜ ಒಡೆಯರ್ ಕಟ್ಟಿಸಿರುವಂತಹ ಕಾರ್ಖಾನೆ. ಅಲ್ಲಿಂದ ಇಲ್ಲಿವರೆಗೆ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದೆ. ನೋವಿನ ಸಂಗತಿ ಏನೆಂದರೆ ಕಾರ್ಖಾನೆ ನಷ್ಟದ ಹೆಸರಿನಲ್ಲಿ ಮುಚ್ಚಲು ಹೊರಟಿದ್ದಾರೆ. ಕಾರ್ಖಾನೆಗೆ ಒಂದು ರೂಪಾಯಿ ಬಂಡವಾಳ ಹಾಕದೆ ಮುಚ್ಚಲು ಹೇಗೆ ಮನಸ್ಸು ಬರುತ್ತದೆ..? ದಯಮಾಡಿ ಪ್ರಧಾನಿ ನರೇಂದ್ರ ಮೋದಿ ಕಾರ್ಖಾನೆಗೆ ಬಂಡವಾಳ ಹಾಕಿ ಉಳಿಸಿಕೊಡಬೇಕು ಎಂದು ನಾವು ಬೇಡಿಕೊಳ್ಳುತ್ತಿದ್ದೇವೆ ಎಂದರು.

ಕಾರ್ಖಾನೆ ನೌಕರ ಅಮೃತ್ ಮಾತನಾಡಿ, ಮುಂದಿನ ಪೀಳಿಗೆಗಾದರೂ ಈ ಕಾರ್ಖಾನೆ ಉಳಿಯಲೇಬೇಕು‌. ಈಗಾಗಲೇ ರಾಜ್ಯದ ಮಠಮಾನ್ಯಗಳನ್ನು ಭೇಟಿಯಾಗಿದ್ದೇವೆ. ಕೇಂದ್ರ-ರಾಜ್ಯ ಸಚಿವ ರನ್ನು ಭೇಟಿಯಾಗಿದ್ದೇವೆ. ಎಲ್ಲರೂ ಬೆಂಬಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತರಲಾಗಿದೆ. ಗೃಹ ಸಚಿವ ಅಮಿತ್ ಶಾಗೂ ಈ ಸಮಸ್ಯೆ ಗೊತ್ತಿದೆ. ಇಂದಿನ ದಿನಗಳಲ್ಲಿ ಇದನ್ನ ಉಳಿಸಿಕೊಳ್ಳಲು ಕೆಲ ಬೆಳವಣಿಗೆಗಳು ಆಗುತ್ತಿವೆ. ಸದ್ಯ ಉತ್ಪಾದನೆ ಆಗುತ್ತಿದೆ. ಮುಂದಿನ ತಿಂಗಳೂ ಸಹ ಉತ್ಪಾದನೆಯಾದರೆ ಉತ್ತಮ ಬೆಳವಣಿಗೆ ಎಂದರು.

ಇನ್ನೊಬ್ಬ ನೌಕರ ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚಲು ಪ್ರಯತ್ನಪಟ್ಟಿದೆ. ಕನಕ ಗುರು ಪೀಠದ ಈಶ್ವರಾನಂದ ಸ್ವಾಮೀಜಿಗಳ ಸಮ್ಮುಖದಲ್ಲಿ ಇಂದು ರಕ್ತ ಚಳವಳಿ ಆರಂಭಿಸಿದ್ದೇವೆ. ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಕೂಡ ಚುನಾವಣಾ ಸಂದರ್ಭ ರಾಜ್ಯಕ್ಕೆ ಬರುತ್ತಿದ್ದಾರೆ. ಎಲ್ಲರಿಗೂ ಈ ಬಗ್ಗೆ ಪ್ರೀತಿ ಇದೆ. ಆದರೆ ಉಳಿಸಿಕೊಡಲು ಪ್ರಯತ್ನಪಡಬೇಕು. ನಮ್ಮ ರಾಜ್ಯದ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾರ್ಖಾನೆ ಮುಚ್ಚುತ್ತಿದೆ. ಇದರ ಉಳಿಸಲು ಹೋರಾಟ ನಾವು ನಿರಂತರವಾಗಿ ಮಾಡುತ್ತೇವೆ. ಗೌರವಾಯುತ ಪ್ರಧಾನ ನರೇಂದ್ರ ಮೋದಿಯವರೇ ಈ ಕಾರ್ಖಾನೆಯನ್ನು ಉಳಿಸಿಕೊಡಬೇಕು. ಅವರಿಂದ ಮಾತ್ರ ಸಾಧ್ಯ ಇದೆ ಎಂದು ಸುರೇಶ್ ಹೇಳಿದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ವಿಧಾನಸಭೆ ನೂತನ ಸ್ಪೀಕರ್​ ಆಗಿ ಅವಿರೋಧ ಆಯ್ಕೆಯಾದ ಯು.ಟಿ ಖಾದರ್​
ರಾಜಕೀಯ

ವಿಧಾನಸಭೆ ನೂತನ ಸ್ಪೀಕರ್​ ಆಗಿ ಅವಿರೋಧ ಆಯ್ಕೆಯಾದ ಯು.ಟಿ ಖಾದರ್​

by ಮಂಜುನಾಥ ಬಿ
May 24, 2023
GH Nayak : ಮರೆಯಾದ ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್.ನಾಯಕ, ಅವರ ಸಾಹಿತ್ಯ ಸೇವೆ ಹೇಗಿತ್ತು ಗೊತ್ತಾ?
Top Story

GH Nayak : ಮರೆಯಾದ ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್.ನಾಯಕ, ಅವರ ಸಾಹಿತ್ಯ ಸೇವೆ ಹೇಗಿತ್ತು ಗೊತ್ತಾ?

by ಪ್ರತಿಧ್ವನಿ
May 26, 2023
Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?
Top Story

Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?

by ಪ್ರತಿಧ್ವನಿ
May 27, 2023
Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?
Top Story

Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?

by ಪ್ರತಿಧ್ವನಿ
May 28, 2023
ರಾಜಕೀಯ

ಕಾಂಗ್ರೆಸ್​ನದ್ದು ರಿವರ್ಸ್​ ಗಿಯರ್​​ ಸರ್ಕಾರ : ಮಾಜಿ ಸಿಎಂ ಬೊಮ್ಮಾಯಿ

by Prathidhvani
May 25, 2023
Next Post
ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಭಾಗ-2: ಭಾರತದ ಬಹುತ್ವವನ್ನು ಗೌರವಿಸದ ಕೈಗಳಲ್ಲಿ ದೇಶದ ಆಡಳಿತ

ಭಾಗ-2: ಭಾರತದ ಬಹುತ್ವವನ್ನು ಗೌರವಿಸದ ಕೈಗಳಲ್ಲಿ ದೇಶದ ಆಡಳಿತ

ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ದಂಪತಿ ಸಾವು..!

ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ದಂಪತಿ ಸಾವು..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist