• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಳಸಾಹೇಬ್‌ ವಾಸಿಸುತ್ತಿದ್ದ ಕುಟುಂಬದ ಮನೆಗೆ ಸ್ಥಳಾಂತರಗೊಂಡ ಉದ್ಧವ್‌ ಠಾಕ್ರೆ: ಬಂಡಾಯ ನಾಯಕರಿಗೆ ಪರೋಕ್ಷ ಸಂದೇಶ?

ಫೈಝ್ by ಫೈಝ್
June 23, 2022
in ದೇಶ, ರಾಜಕೀಯ
0
ಬಾಳಸಾಹೇಬ್‌ ವಾಸಿಸುತ್ತಿದ್ದ ಕುಟುಂಬದ ಮನೆಗೆ ಸ್ಥಳಾಂತರಗೊಂಡ ಉದ್ಧವ್‌ ಠಾಕ್ರೆ: ಬಂಡಾಯ ನಾಯಕರಿಗೆ ಪರೋಕ್ಷ ಸಂದೇಶ?
Share on WhatsAppShare on FacebookShare on Telegram

ಮಹಾರಾಷ್ಟ್ರ ಸರ್ಕಾರ ಅಸ್ಥಿರತೆಯನ್ನು ಎದುರಿಸುತ್ತಿದೆ; ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆಯದ್ದು ನಿಜವಾದ ಹಿಂದುತ್ವ ಅಲ್ಲವೆಂದಿರುವ ಹಿರಿಯ ಸಂಪುಟ ಸದಸ್ಯ ಏಕನಾಥ ಶಿಂಧೆ, ತಮ್ಮ ಬಣ ನಿವಾದ ಹಿಂದುತ್ವ ಹೊಂದಿದೆಯೆಂದೂ, ಬಾಳಾ ಠಾಕ್ರೆ ಅವರ ಹಿಂದುತ್ವದ ಹಾದಿಯಲ್ಲಿದೆಯೆಂದು ಹೇಳಿ ಉದ್ಧವ್‌ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದು ಸರ್ಕಾರದಿಂದ ಬೆಂಬಲ ಹಿಂಪಡೆದು ಸರ್ಕಾರ ಬೀಳಿಸುವ ಅವರ ಯೋಜನೆಯ ಭಾಗವಾಗಿ ಹೊರ ಹೊಮ್ಮಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಉದ್ಧವ್‌ ಠಾಕ್ರೆ ಅವರು ಶಿವಸೇನೆ ಸಂಸ್ಥಾಪಕ, ತಮ್ಮ ತಂದೆ ಬಾಳಠಾಕ್ರೆ ಹಾಗೂ ಶೀವಸೇನೆಯನ್ನು ಎದುರಿಟ್ಟೇ ದಾಳ ಹೂಡಿದ್ದಾರೆ. ಅಲ್ಲದೆ, ಶಿವಸೇನೆಗೆ ಅವಿನಾಭಾವ ಬಂಧವಿರುವ ಬಾಳಾಠಾಕ್ರೆ ವಾಸಿಸಿದ್ದ ತಮ್ಮ ಕುಟುಂಬದ ಮನೆಗೆ ಏಕಾಏಕಿ ಸ್ಥಳಾಂತರಗೊಂಡು ಶಿವಸೇನೆಯ ನಿಷ್ಟೆಯನ್ನು ಭಾವನಾತ್ಮಕವಾಗಿ ಸೆಳೆಯಲು ಪ್ರಯತ್ನಿಸಿದ್ದಾರೆ.

ಹೌದು, ಬುಧವಾರ ರಾತ್ರಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಅಧಿಕೃತ ನಿವಾಸವನ್ನು ತೊರೆದಿದ್ದಾರೆ. ತಮಗೆ ಕೋವಿಡ್‌ ಪಾಸಿಟಿವ್‌ ಕಂಡು ಬಂದಿದ್ದರೂ, ರಾಜಕೀಯದ ಬಿಕ್ಕಟ್ಟಿನ ನಡುವೆ ತಮ್ಮ ಕುಟುಂಬದ ಮನೆಗೆ ಸ್ಥಳಾಂತರವಾದ ಉದ್ಧವ್‌ ಠಾಕ್ರೆ ಅವರ ನಡೆಯಲ್ಲಿ ಪರೋಕ್ಷ ಸಂದೇಶವಿದೆಯೆಂದು ವಿಶ್ಲೇಷಿಸಲಾಗಿದೆ. ಉದ್ಧವ್‌ ಠಾಕ್ರೆ ತಂದೆ ಬಾಳಾ ಸಾಹೇಬ್‌ ಠಾಕ್ರೆ ವಾಸಿಸಿದ್ದ ಅವರ ಕುಟುಂಬದ ಮನೆಗೂ ಶಿವಸೇನೆ ಪಕ್ಷಕ್ಕೂ ಇರುವ ಅವಿನಾಭಾವ ಸಂಬಂಧದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಲ್ಲಿಗೆ ಸ್ಥಳಾಂತರಗೊಂಡಿದ್ದಾರೆ.

ಅದಕ್ಕೂ ಮುನ್ನ, ತಮ್ಮ ಸರ್ಕಾರಕ್ಕೆ ಎದುರಾಗಿರುವ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿ ಬಗ್ಗೆ ಮೊದಲ ಸಾರ್ವಜನಿಕ ಪ್ರತಿಕ್ರಿಯೆ ನೀಡಿದ್ದ ಠಾಕ್ರೆ, “ನನ್ನ ಸ್ವಂತ ಜನರಿಗೆ ನಾನು ಮುಖ್ಯಮಂತ್ರಿಯಾಗಲು ಇಷ್ಟವಿಲ್ಲದಿದ್ದರೆ, ನನ್ನ ಬಳಿಗೆ ಬಂದು ನೇರವಾಗಿ ಹೇಳಬೇಕು., ನಾನು ರಾಜಿನಾಮೆ ನೀಡಲು ಸಿದ್ಧ, ನಾನು ಬಾಳಾಸಾಹೇಬರ ಮಗ, ನಾನು ಹುದ್ದೆಯ ಹಿಂದೆ ಬಿದ್ದಿಲ್ಲ,” ಎಂದು ಹೇಳಿದ್ದರು.

“ನಾನು ಹುದ್ದೆಯಿಂದ ಕೆಳಗಿಳಿಯಲು ಸಿದ್ಧನಿದ್ದೇನೆ, ಆದರೆ, ಮುಂದಿನ ಮುಖ್ಯಮಂತ್ರಿ ಶಿವಸೇನೆಯವರೇ ಆಗಿರುತ್ತಾರೆ ಎಂದು ನನಗೆ ಭರವಸೆ ಕೊಡುತ್ತೀರ?” ಎಂದು ಅವರು ಪ್ರಶ್ನಿಸಿದ್ದರು. ಆ ಮೂಲಕ ಬಂಡಾಯ ನಾಯಕರು ಬಿಜೆಪಿಯವರೊಂದಿಗೆ ಸೇರಿ ಸರ್ಕಾರ ರಚಿಸಿದರೆ ಶಿವಸೇನೆಯ ಮುಖ್ಯಮಂತ್ರಿಯಾಗಲ್ಲ ಎಂಬ ಪರೋಕ್ಷ ಸಂದೇಶವನ್ನು ಶಿವಸೇನೆ ಕಾರ್ಯಕರ್ತರಿಗೆ ರವಾನಿಸಿದ್ದರು. ಆ ಮೂಲಕ ಶಿವಸೇನೆ ಕಾರ್ಯಕರ್ತರ ನಿಷ್ಟೆ ತಮ್ಮ ಬಣದ ಪಾಲಿಗೆ ನಿಲ್ಲುವಂತೆ ಬಾಣ ಹೂಡಿದ್ದಾರೆ.

ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಇದು ನೇರ ಸವಾಲಾಗಿದೆ. ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಲು ಪ್ರಯತ್ನ ಪಡುತ್ತಿರುವ ಶಿವಸೇನೆಯ ಬಂಡಾಯ ಶಾಸಕರಿಗೆ ಮುಖ್ಯಮಂತ್ರಿಯ ಈ ಪ್ರಶ್ನೆ ಸವಾಲಾಗಿ ಪರಿಣಮಿಸಲಿದೆ. ಉದ್ಧವ್‌ ಠಾಕ್ರೆ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲು ಬಿಜೆಪಿಯ ನಿರಾಕರಿಸಿದ್ದೇ ಶಿವಸೇನೆ-ಬಿಜೆಪಿ ಮೈತ್ರಿಯ ಅಂತ್ಯಕ್ಕೆ ಕಾರಣವಾಗಿತ್ತು. ಈಗ ಮತ್ತೆ ಬಿಜೆಪಿ ಸಿಎಂ ಸ್ಥಾನವನ್ನು ಶಿವಸೇನೆಗೆ ಬಿಟ್ಟು ಕೊಡುವುದು ಅಸಾಧ್ಯವೆಂದು ಹೇಳಲಾಗುತ್ತಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ರಾಜಕೀಯ ಮೇಲಾಟದ ಕೇಂದ್ರವಾದ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್‌ ಆಫ್ ಎಕನಾಮಿಕ್ಸ್

Next Post

ಎಲೆಕ್ಟ್ರಿಕ್‌ ಕಾರು ಅಗ್ನಿ ದುರಂತ; ತನಿಖೆಗೆ ಆದೇಶಿಸಿದ ಸರ್ಕಾರ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

July 3, 2025
Next Post
ಎಲೆಕ್ಟ್ರಿಕ್‌ ಕಾರು ಅಗ್ನಿ ದುರಂತ; ತನಿಖೆಗೆ ಆದೇಶಿಸಿದ ಸರ್ಕಾರ

ಎಲೆಕ್ಟ್ರಿಕ್‌ ಕಾರು ಅಗ್ನಿ ದುರಂತ; ತನಿಖೆಗೆ ಆದೇಶಿಸಿದ ಸರ್ಕಾರ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada