• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೂ ಪರಿಹಾರ ವ್ಯಾಜ್ಯಗಳು ಇತ್ಯರ್ಥವಾಗದೇ ಯುಕೆಪಿ (3) ಪೂರ್ಣ ಅಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಭೂ ಪರಿಹಾರ ವ್ಯಾಜ್ಯಗಳು ಇತ್ಯರ್ಥವಾಗದೇ ಯುಕೆಪಿ (3) ಪೂರ್ಣ ಅಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು, ಆ.26:

ADVERTISEMENT

“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯ ಭೂ ಸಂತ್ರಸ್ತರಲ್ಲಿ ಸುಮಾರು 28,972 ಜನರು ಸೂಚಿತ ಪರಿಹಾರ ಧನವನ್ನು ಒಪ್ಪಿಕೊಳ್ಳದೆ ನ್ಯಾಯಲಯಗಳ ಮೊರೆ ಹೋಗಿದ್ದಾರೆ. ಇವುಗಳ ಇತ್ಯರ್ಥವಾಗದೆ ಯೋಜನೆ ಜಾರಿ ಅಸಾಧ್ಯ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

Rahul Gandhi: ಬಿಜೆಪಿ 40 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರದಲ್ಲಿ ವೋಟ್ ಚೋರಿಯಿಂದ ಮಾತ್ರ ಇದು ಸಾಧ್ಯ..!

“ಈ ವಿಚಾರವಾಗಿ ಸರ್ವ ಪಕ್ಷಗಳ ಹಾಗೂ ವಿಜಯಪುರ, ಬಾಗಲಕೋಟೆ ಭಾಗದ ಜನಪ್ರತಿನಿಧಿಗಳ, ರೈತ ಮುಖಂಡರ ಸಭೆ ನಡೆಸಲಾಗುವುದು. ರೈತರಿಗೂ ನಷ್ಟವಾಗದಂತಹ ಪರಿಹಾರ ಮೊತ್ತಕ್ಕೆ ಸರ್ವ ಸಮ್ಮತ ಒಪ್ಪಿಗೆ ದೊರೆತರೆ ಮಾತ್ರ ಮುಂದುವರೆಯಬಹುದು. ಯಾವುದೇ ಮಾತಿಗೂ ಒಪ್ಪದಿದ್ದರೆ ನಮ್ಮ ಕೈಯಲ್ಲಿ ಏನೂ ಉಳಿದಿಲ್ಲ. ಏಕೆಂದರೆ ಪರಿಹಾರ ನೀಡಲೇ ನಮಗೆ 2 ಲಕ್ಷ‌ ಕೋಟಿ ಹಣ ಬೇಕಾಗುತ್ತದೆ. ನಮ್ಮ ಬಳಿ ಬಾಕಿ ಬಿಲ್ ಗಳನ್ನು ನೀಡುವುದಕ್ಕೇ ಹಣವಿಲ್ಲ” ಎಂದರು.

ನ್ಯಾಯಲಯ ಸೂಚಿಸಿರುವ ಪರಿಹಾರ ಮೊತ್ತದ ಉದಾಹರಣೆ ನೀಡಿದ ಡಿಸಿಎಂ ಅವರು ಒಂದಷ್ಟು ಪ್ರಕರಣಗಳ ವಿವರಣೆ ನೀಡಿದರು. “ಬಾಗಲಕೋಟೆಯಲ್ಲಿ ಒಂದು ಎಕರೆ ಭೂಮಿಗೆ ಬಡ್ಡಿ ಮೊತ್ತ ‌ಸೇರಿ 23 ಕೋಟಿ ಪರಿಹಾರ ಸೂಚಿಸಲಾಗಿದೆ. ಕಸಬಾ ಬಿಜಾಪುರದಲ್ಲಿ ಕಾಲುವೆ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಂಡ ಒಂದು ಎಕರೆ ಭೂಮಿಗೆ 11.92 ಕೋಟಿ ಪರಿಹಾರ ನೀಡಿ ಎಂದು ಹೇಳಲಾಗಿದೆ. ಜುಂಜರಕುಪ್ಪ ಆರ್ ಸಿಗೆ 10.22 ಕೋಟಿ ಪರಿಹಾರ, ವೀರಾಪುರದಲ್ಲಿನ ಸಬ್ ಮರ್ಜ್ ಜಮೀನಿಗೆ 15.49 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಾಲಯಗಳು ಆದೇಶಿಸಿವೆ” ಎಂದರು.

“ಕಾಲುವೆಗಳ ನಿರ್ಮಾಣದ ಜಮೀನಿಗೆ ನಮ್ಮ ಅಧಿಕಾರಿಗಳು 10 ರಿಂದ 8 ಲಕ್ಷ ಪರಿಹಾರ ಸೂಚಿಸಿದ್ದಾರೆ.‌ ಇಂತಹ ‌ಕಡೆ ನ್ಯಾಯಾಲಯದವರು 74 ಲಕ್ಷ‌ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ. ಸಬ್ ಮರ್ಜ್ ಭೂಮಿಗಳಿಗೆ ಅಧಿಕಾರಿಗಳು ಎಕರೆಗೆ 16.50 ಲಕ್ಷ ಪರಿಹಾರ ಸೂಚಿಸಿದ್ದರೆ ನ್ಯಾಯಾಲಯ 1.20 ಕೋಟಿ ಪರಿಹಾರಕ್ಕೆ ನ್ಯಾಯಾಲಯ ತೀರ್ಪು ನೀಡಿದೆ. ಮುಳುಗಡೆ ಸ್ಥಳಾಂತರ ಪ್ರದೇಶಗಳಿಗೆ 15.50 ಲಕ್ಷ ಪರಿಹಾರ ಸೂಚಿಸಿದ್ದರೆ ನ್ಯಾಯಾಲಯವು 5 ಕೋಟಿ ಸೂಚಿಸಿದೆ” ಎಂದರು.

“ವಕೀಲರು ಹಾಗೂ ಭೂ ಮಾಲೀಕರು ಸೇರಿಕೊಂಡು ದುಪ್ಪಟ್ಟಿಗಿಂತ ಹೆಚ್ಚು ಪರಿಹಾರಕ್ಕೆ ಪ್ರಕರಣಗಳನ್ನು ಹೂಡಿದ್ದಾರೆ. 19,957 ಪ್ರಕರಣಗಳು ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿಯುಳಿದಿವೆ. 9,015 ಪ್ರಕರಣಗಳು ಬೇರೆ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ. ಈ ಯೋಜನೆಯಡಿ ಸುಮಾರು ಇಪ್ಪತ್ತು ಗ್ರಾಮಗಳು ಮುಳುಗಡೆಯಾಗಲಿವೆ” ಎಂದು ಹೇಳಿದರು.

“ನಾನು ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ನಂತರ 14,817 ಪ್ರಕರಣಗಳಿಗೆ ಕೆಬಿಜಿಎನ್ ಎಲ್ ಅನ್ನು ಜವಾಬ್ದಾರಿ ತೆಗೆದುಕೊಳ್ಳಲಾಗಿದೆ. 5,086 ಪ್ರಕರಣಗಳನ್ನು ಪ್ರತಿವಾದಿಗಳು ತೆಗೆದುಕೊಂಡಿಲ್ಲ. 837 ಪ್ರಕರಣಗಳು ಇತ್ಯರ್ಥಗೊಂಡಿವೆ. 13,913 ಪ್ರಕರಣಗಳು ಬಾಕಿಯಿವೆ. ವಿವಿಧ ನ್ಯಾಯಾಲಯದಲ್ಲಿರುವ 749 ಪ್ರಕರಣದಲ್ಲಿ 46 ಪ್ರಕರಣಗಳು ಕೆಬಿಜಿಎನ್ ಎಲ್ ಪ್ರಕಾರ ಆದೇಶ ಬಂದಿದೆ. 949 ಪ್ರಕರಣಗಳನ್ನು ವಿಲೇವಾರಿ ಮಾಡಲು ಬಾಕಿ ಉಳಿದಿದೆ. ಧಾರವಾಡದಲ್ಲಿ 19, ಕಲಬುರ್ಗಿ ನ್ಯಾಯಾಲಯದಲ್ಲಿ ಸುಮಾರು 90 ಪ್ರಕರಣಗಳಿಗೆ ತಡೆಯಾಜ್ಞೆ ಸಿಕ್ಕಿದೆ” ಎಂದು ತಿಳಿಸಿದರು.

“ಆರ್‌.ಸಿ ಗ್ರಾಮಗಳಿಗೆ ಎಂದು 1,33,867 ಎಕರೆ ಜಮೀನು ಅಗತ್ಯವಿದೆ. 29,568 ಎಕರೆ ಜಮೀನಿಗೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಹಂತಗಳಲ್ಲಿ 44,947 ಎಕರೆ ಭೂಮಿಯಿದೆ. 59,354 ಎಕರೆ ಜಮೀನು ಸ್ವಾಧೀನಕ್ಕೆ ಕೆಲಸ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕಾಗಿದೆ” ಎಂದರು.

Rahul Gandhi: ಮೋದಿ ವಿರುದ್ಧ ಗುಡುಗಿದ ರಾಹುಲ್ ಗಾಂಧಿ..! #pmmodi #rahulgandhi #election

“ಈ ವರ್ಷ 100 ಟಿಎಂಸಿಯಷ್ಟು ಕೃಷ್ಣಾ ನದಿ ನೀರು ಸಮುದ್ರ ಸೇರಿದೆ. ಕಳೆದ ವರ್ಷ 800 ಟಿಎಂಸಿ ನೀರು ಸಮುದ್ರ ಸೇರಿತ್ತು” ಎಂದರು.

Tags: BJPCongress PartyDCM DK ShivakumarDK Shivakumardk shivakumar accidentdk shivakumar campdk shivakumar convoydk shivakumar kodi muttdk shivakumar latestdk shivakumar latest newsdk shivakumar mandyadk shivakumar newsdk shivakumar on probedk shivakumar on rcbdk shivakumar reactiondk shivakumar speechdk shivakumar statementdk shivakumar today newsdk shivakumar todays newsdk shivakumar unhurtdk shivakumar visit delhiyatnal on dk shivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮತ ಅಧಿಕಾರ ಯಾತ್ರೆ ಯಲ್ಲಿ ಪ್ರಿಯಾಂಕಾ ಗಾಂಧಿ. ರಾಹುಲ್ ಗಾಂಧಿ

Next Post

ಬಿಜೆಪಿ ಅವರ ಆಂತರಿಕ ರಾಜಕಾರಣದಿಂದ ‘ಷಡ್ಯಂತ್ರ’: ಡಿಸಿಎಂ ಡಿ.ಕೆ‌.ಶಿವಕುಮಾರ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಬಿಜೆಪಿ ಅವರ ಆಂತರಿಕ ರಾಜಕಾರಣದಿಂದ ‘ಷಡ್ಯಂತ್ರ’: ಡಿಸಿಎಂ ಡಿ.ಕೆ‌.ಶಿವಕುಮಾರ್

ಬಿಜೆಪಿ ಅವರ ಆಂತರಿಕ ರಾಜಕಾರಣದಿಂದ 'ಷಡ್ಯಂತ್ರ': ಡಿಸಿಎಂ ಡಿ.ಕೆ‌.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada