• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

ಪ್ರತಿಧ್ವನಿ by ಪ್ರತಿಧ್ವನಿ
September 3, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

“ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ಹೇಳಿದರು.

ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಭೂಸ್ವಾಧೀನ, ಪುನರ್ವಸತಿ, ಪುನರ್ನಿರ್ಮಾಣ, ಭೂಪರಿಹಾರದ ಬಗ್ಗೆ ಪರಿಹಾರ ಕಂಡುಹಿಡಿಯಬೇಕು ಎಂದು ಮೂರ್ನಾಲ್ಕು ಸುತ್ತು ಚರ್ಚೆ ನಡೆಸಿದ್ದೇವೆ. ಈ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರವಧಿಯಲ್ಲಿ ಸಂಪುಟಸಭೆ ಹಾಗೂ ಉಪ ಸಮಿತಿ ಸಭೆಯಲ್ಲಿ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ. 24 ಲಕ್ಷ ರೂ., ಒಣ ಭೂಮಿಗೆ ರೂ. 20 ಲಕ್ಷ ಎಂದು ತೀರ್ಮಾನ ಮಾಡಿದ್ದರು. ಆದರೆ ಇದನ್ನು ಯಾವ ರೈತರೂ ಒಪ್ಪಲಿಲ್ಲ. ಬದಲಿಗೆ ಧರಣಿ ಕುಳಿತು ಹೋರಾಟ ಮಾಡುತ್ತಿದ್ದರು. ಹಿಂದೆ ಈ ಬಗ್ಗೆ ನಾವೇ ಬೆಳಗಾವಿಯಲ್ಲಿಯೂ ಸಭೆ ನಡೆಸಿದ್ದೆವು” ಎಂದರು.

“ಪರಿಹಾರ ಮೊತ್ತದ ವಿಚಾರವಾಗಿ ನ್ಯಾಯಲಯದಲ್ಲಿ ವ್ಯತಿರಿಕ್ತ ತೀರ್ಪು ಬಂದಿದೆ. ಹೆಚ್ಚು ಪರಿಹಾರ ಕೊಡಬೇಕು ಎಂದು ಹೇಳಿದೆ. ಇದನ್ನು ನೀಡಲು ಸಾಧ್ಯವಿಲ್ಲವೆಂದು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರು ಸೇರಿದಂತೆ ಎಲ್ಲಾ ಪಕ್ಷಗಳ ಮುಖಂಡರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಪ್ರಸ್ತುತ ಸಭೆಯ ಬಗ್ಗೆ ಮುಖ್ಯಮಂತ್ರಿಗಳಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದ್ದೇನೆ. ವಿಜಯಪುರ ಭಾಗದ ರೈತರು ನ್ಯಾಯಯುತ ಪರಿಹಾರ ನೀಡಿದರೆ ಒಪ್ಪುತ್ತೇವೆ ಎಂದಿದ್ದಾರೆ” ಎಂದರು.

“ಗುರುವಾರ (ನಾಳೆ) ನಡೆಯುವ ಕ್ಯಾಬಿನೆಟ್ ನಲ್ಲಿಯೂ ಚರ್ಚೆ ನಡೆಸಲಾಗುವುದು. ಕಳೆದ ವಾರ ಎಚ್.ಕೆ. ಪಾಟೀಲರು, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್ ಅವರು ಹಾಗೂ ನಾನು ಸಭೆ ನಡೆಸಿ ಚರ್ಚೆ ನಡೆಸಿದ್ದೆವು” ಎಂದರು.

ಅರಮನೆ ಮೈದಾನದಲ್ಲಿ ಈದ್ ಮಿಲಾದ್ ಧಾರ್ಮಿಕ ಸಮಾರಂಭದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ತಿಳಿದಿಲ್ಲ. ಅನೇಕ ಧಾರ್ಮಿಕ ಸಭೆಗಳು ನಡೆಯುತ್ತವೆ. ದೇಶದ ಹಿತಕ್ಕಾಗಿ, ಧಾರ್ಮಿಕ ಹಿತಕ್ಕಾಗಿ ನಡೆಯುವ ಧಾರ್ಮಿಕ ಕಾರ್ಯಗಳಿಗೆ ನಾವು ತಲೆಹಾಕಲು ಹೋಗುವುದಿಲ್ಲ. ಈ ಹಿಂದೆಯೂ ಅಂತರರಾಷ್ಟ್ರೀಯ ಮಟ್ಟದ ಧರ್ಮ ಪ್ರಚಾರಕರು ಬೆಂಗಳೂರಿಗೆ ಬಂದು ಭಾಷಣ ಮಾಡಿದ ಉದಾಹರಣೆಗಳಿವೆ” ಎಂದರು.

Tags: namratha gowdanamratha gowda agenamratha gowda big bossnamratha gowda birthdaynamratha gowda carnamratha gowda channelnamratha gowda dancenamratha gowda foodvlognamratha gowda homenamratha gowda husbandnamratha gowda moviesnamratha gowda nagininamratha gowda nagini 2namratha gowda new carnamratha gowda sareenamratha gowda shortsnamratha gowda videonamratha gowda vlognamratha gowda vlogsnamratha gowda youtubenamratha gowda yt videosshivani namratha gowda
Previous Post

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

Next Post

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada