• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಉಕ್ರೇನ್ ಬಿಕ್ಕಟ್ಟು : ಭಾರತದ ಬೆಂಬಲದ ನಿರೀಕ್ಷೆಯಲ್ಲಿ ಅಮೆರಿಕ

ಫಾತಿಮಾ by ಫಾತಿಮಾ
February 19, 2022
in ವಿದೇಶ
0
Share on WhatsAppShare on FacebookShare on Telegram

ರಷ್ಯಾ ಮತ್ತು ಉಕ್ರೇನ್ ಗಡಿಯಲ್ಲಿ ಯುದ್ಧ ಸಂಬಂಧಿ ವಾತಾವರಣ ಮೂಡುತ್ತಿದ್ದಂತೆ ಶೀತಲ ಸಮರದ ನಂತರ ಇದು ಯುರೋಪಿನಲ್ಲಿನ ಅತಿ ದೊಡ್ಡ ಪಡೆಗಳ ಕೇಂದ್ರೀಕರಣವಾಗಿದೆ ಎಂದು ನ್ಯಾಟೋ ಹೇಳಿದೆ. ಇದರ ಬೆನ್ನಲ್ಲೇ ರಷ್ಯಾ ಉಕ್ರೇನ್ ಗಡಿಯಲ್ಲಿ ತನ್ನ ಸೈನ್ಯ ಜಮಾವಣೆ ಮಾಡುವುದನ್ನು ಮುಂದುವರೆಸಿದೆ ಎಂದು North Atlantic Treaty Organization ಮತ್ತು ಯುನೈಟೆಡ್ ಸ್ಟೇಟ್ಸ್ (U.S.) ಬುಧವಾರ ಹೇಳಿಕೊಂಡಿವೆ.

ADVERTISEMENT

ಉಕ್ರೇನ್ (Ukraine) ಗಡಿಯಿಂದ ರಷ್ಯಾ (Russian) ತನ್ನ ಕೆಲವು ಪಡೆಗಳನ್ನು ಹಿಂತೆಗೆದುಕೊಳ್ಳುತ್ತಿದೆ ಎಂಬ ವರದಿಗಳ ಮಧ್ಯೆ ಅವರ ಮೇಲೆ ಈ ಆರೋಪಗಳು ಬಂದಿದ್ದು ಇದು ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವಿಕೆಯ ಸಂಕೇತದಂತೆ ಕಂಡುಬರುತ್ತದೆ.

ಈ ವರ್ಷದ ಆರಂಭದಿಂದಲೇ ರಷ್ಯಾ ಉಕ್ರೇನ್ ಗಡಿಯುದ್ದಕ್ಕೂ ತನ್ನ 1 ಲಕ್ಷಕ್ಕೂ ಹೆಚ್ಚು ಸೈನಿಕರನ್ನು ಜಮಾವಣೆ ಮಾಡಲು ಪ್ರಾರಂಭಿಸಿತ್ತು. ಸೋವಿಯತ್ ಒಕ್ಕೂಟದಲ್ಲಿ ಒಟ್ಟಿಗೆ ಇದ್ದ ಎರಡು ದೇಶಗಳು ಆನಂತರ ಆತಂರಿಕ ಭಿನ್ನಾಭಿಪ್ರಾಯದಿಂದ ಬೇರೆಯಾಗಿದ್ದವು. ಅಂದಿನಿಂದಲೂ ಎರಡೂ ದೇಶಗಳ ಮಧ್ಯೆ ದ್ವೇಷ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲೇ ಇದೆ. 2014ರಲ್ಲಿ ಉಕ್ರೇನ್ನ ಕ್ರಿಮಿಯನ್ ಪೆನಿನ್ಸುಲಾವನ್ನು ರಷ್ಯಾ ಸ್ವಾಧೀನಪಡಿಸಿಕೊಂಡ ನಂತರ ಮತ್ತು ದೇಶದ ಪೂರ್ವ ಪ್ರದೇಶಗಳಾದ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ನಲ್ಲಿ ಪ್ರತ್ಯೇಕತಾವಾದಿ ದಂಗೆಗಳನ್ನು ರಷ್ಯಾ ಬೆಂಬಲಿಸ ತೊಡಗಿದ ನಂತರ ಎರಡೂ ದೇಶಗಳಲ್ಲಿ ಸಂಘರ್ಷದ ಭೀತಿ ಮತ್ತೆ ತಲೆದೋರಿತು.

ಇದೀಗ ಉಕ್ರೇನ್ ಗಡಿಯಲ್ಲಿ ರಷ್ಯಾ ತನ್ನ ಸೇನಾ ಬಲವನ್ನು ಹೆಚ್ಚಿಸುತ್ತಿದೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಜೆನ್ಸ್ ಸ್ಟೋಲ್ಟೆನ್ಬರ್ಗ್ ಹೇಳಿದ್ದಾರೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ. NATO ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದ್ದು ಪೂರ್ವ ಮತ್ತು ಮಧ್ಯ ಯುರೋಪ್ಗೆ ಸೈನ್ಯವನ್ನು ಕಳುಹಿಸಲು ಪರಿಗಣಿಸುತ್ತಿದೆ ಎಂದು ಅವರು ಹೇಳಿದ್ದಾರೆ. “ರಷ್ಯಾ ಮಿಲಿಟರಿ ಜಮಾವಣೆಯನ್ನು ಮುಂದುವರೆಸಿದಂತೆ ತೋರುತ್ತದೆ. ಅವರು ಗಡಿಯಲ್ಲಿನ ತಮ್ಮ ಪಡೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದಾರೆ ಮತ್ತು ಮತ್ತು ಇನ್ನಷ್ಟು ಸೈನಿಕ ಪಡೆಗಳು ಉಕ್ರೇನ್ ಗಡಿಯತ್ತ ಚಲಿಸುತ್ತಿದೆ” ಎಂದು ಹೇಳಿದ್ದಾರೆ.

ರಷ್ಯಾದ ಭರವಸೆಗಳು ಮತ್ತು ಕಾರ್ಯಗಳ ನಡುವೆ ವ್ಯತ್ಯಾಸವಿದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದ್ದಾರೆ ಎಂದೂ ದಿ ಗಾರ್ಡಿಯನ್ ವರದಿ ಮಾಡಿದೆ. ಗಡಿಯಿಂದ ರಷ್ಯಾ ತನ್ನ ಸೈನಿಕರನ್ನು ಹಿಂತೆಗೆದುಕೊಳ್ಳುವುದನ್ನು ನಂಬಲಾಗದು ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ, ಶ್ವೇತಭವನದ ಹಿರಿಯ ಆಡಳಿತ ಅಧಿಕಾರಿಯೊಬ್ಬರು ಬುಧವಾರ ಉಕ್ರೇನ್ನೊಂದಿಗಿನ ತನ್ನ ಗಡಿಗೆ ರಷ್ಯಾ 7,000 ಸೈನಿಕರನ್ನು ಕಳುಹಿಸಿದೆ ಎಂದು ಹೇಳಿದ್ದಾರೆ. “ಉಕ್ರೇನ್ ಮೇಲಿನ ಆಕ್ರಮಣವನ್ನು ಸಮರ್ಥಿಸಲು ಅವರು ಯಾವುದೇ ಕ್ಷಣದಲ್ಲಿ ಸುಳ್ಳು ನೆಪವನ್ನು ಮುಂದಿಡಬಹುದು” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಬ್ಲಿಂಕೆನ್ ಅವರು ಗುರುವಾರ ಮತ್ತು ಶನಿವಾರದ ನಡುವೆ ಜರ್ಮನಿಯಲ್ಲಿ ನಡೆಯಲಿರುವ ಮ್ಯೂನಿಚ್ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿದ್ದು, ರಷ್ಯಾ ವಿರುದ್ಧ ಅಂತರರಾಷ್ಟ್ರೀಯ ನಾಯಕತ್ವವನ್ನು ಅವರು ಒಗ್ಗೂಡಿಸಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಅಲ್ಲದೆ ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದರೆ ಭಾರತದ (India) ಬೆಂಬಲವನ್ನು ನಿರೀಕ್ಷಿಸುವುದಾಗಿ ಅಮೆರಿಕ ಬುಧವಾರ ಹೇಳಿದೆ ಎಂದೂ ಪಿಟಿಐ ವರದಿ ಮಾಡಿದೆ.

ಫೆಬ್ರವರಿ 11 ರಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿ ನಡೆದ ಕ್ವಾಡ್ ಮಂತ್ರಿ ಸಭೆಯಲ್ಲಿ ಉಕ್ರೇನ್ ಬಿಕ್ಕಟ್ಟಿನ ಶಾಂತಿಯುತ ಪರಿಹಾರಕ್ಕಾಗಿ ನಾಯಕರು ಒಮ್ಮತ ವ್ಯಕ್ತಪಡಿಸಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ನೆಡ್ ಪ್ರೈಸ್ ಗುರುವಾರ ಹೇಳಿದ್ದಾರೆ. ಕ್ವಾಡ್ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ಅನ್ನು ಒಳಗೊಂಡಿರುವ ಅಂತರರಾಷ್ಟ್ರೀಯ ಗುಂಪಾಗಿದ್ದು ಅಂತರರಾಷ್ಟ್ರೀಯ ನಿಯಮಾವಳಿಗಳ ಮೇಲೆ ಕಾರ್ಯನಿರ್ವಹಿಸುತ್ತದೆ.

Tags: DonbassDonetskNewsRusiaRusia UcraniaRussiaUkraineCrisisUcraniaUkraine President Volodymyr ZelenskyUkraineConflictಉಕ್ರೇನ್ಉಕ್ರೇನ್ ಬಿಕ್ಕಟ್ಟುರಷ್ಯಾ
Previous Post

ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪ : ಚಿದಂಬರಂ ದೇವಸ್ಥಾನದ ಅರ್ಚಕರ ವಿರುದ್ದ ಪ್ರಕರಣ ದಾಖಲು!

Next Post

BBMP ಕಸ ಗುತ್ತಿಗೆದಾರರ ಸಮಸ್ಯೆ ಇತ್ಯರ್ಥ : ಶೀಘ್ರವೇ  250 ಕೋಟಿ ಬಿಡುಗಡೆಯ ಭರವಸೆ!

Related Posts

Top Story

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

by ಪ್ರತಿಧ್ವನಿ
October 16, 2025
0

ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ (Philipines) ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ...

Read moreDetails

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

October 1, 2025
Next Post
ಗುತ್ತಿಗೆ ಹಣ ಪಾವತಿ ಮಾಡದ ಬಿಬಿಎಂಪಿ : ಶುಕ್ರವಾರದಿಂದ ಕಸ ಎತ್ತದಿರಲು ಗುತ್ತಿಗೆದಾರರ ನಿರ್ಧಾರ!

BBMP ಕಸ ಗುತ್ತಿಗೆದಾರರ ಸಮಸ್ಯೆ ಇತ್ಯರ್ಥ : ಶೀಘ್ರವೇ  250 ಕೋಟಿ ಬಿಡುಗಡೆಯ ಭರವಸೆ!

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada