• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʼವಿಶ್ವಗುರುʼ ಮೋದಿಯ ಬಂಡವಾಳ ಬಯಲಿಗೆಳೆದ ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳು

ಫೈಝ್ by ಫೈಝ್
March 1, 2022
in ದೇಶ, ವಿದೇಶ
0
ʼವಿಶ್ವಗುರುʼ ಮೋದಿಯ ಬಂಡವಾಳ ಬಯಲಿಗೆಳೆದ ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳು
Share on WhatsAppShare on FacebookShare on Telegram

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ಭಾರತದ ಮಾಧ್ಯಮಗಳೂ, ಮೋದಿ ಸಂಪುಟದ ಸಚಿವರೂ ಪ್ರಚಾರ ಮಾಡುತ್ತಿರುವ ನಡುವೆಯೇ, ನಿಜಕ್ಕೂ ಉಕ್ರೇನಿನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಮಾಡಿರುವ ವಿಡಿಯೋಗಳು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಬೇಜವಾಬ್ದಾರಿಯನ್ನೂ, ಅವಕಾಶವಾದಿತನವನ್ನೂ ಬಯಲಿಗೆಳೆದಿದೆ.

ADVERTISEMENT

ಭಾರತದಲ್ಲಿ ಮುಖ್ಯವಾಹಿನಿಯ ಮಾಧ್ಯಮಗಳು ನರೇಂದ್ರ ಮೋದಿ ಪರವಾಗಿ ನಡೆಸುತ್ತಿರುವ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಉಕ್ರೇನಿನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ವಾಸ್ತವ ಇದೆ ಎನ್ನುವುದು ಸಾಬೀತಾಗಿದೆ.

ಅಷ್ಟಕ್ಕೂ, ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸರ್ಕಾರ ತೆರವುಗೊಳಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಯುದ್ಧಗ್ರಸ್ತ ಉಕ್ರೇನಿನಿಂದ ಪಕ್ಕದ ದೇಶಗಳಿಗೆ ಗಡಿದಾಟಿದ ವಿದ್ಯಾರ್ಥಿಗಳನ್ನು ಮತ್ತು ನಾಗರಿಕರನ್ನು ಮಾತ್ರ ಕೇಂದ್ರ ಸರ್ಕಾರ ಮರಳಿ ತಾಯ್ನಾಡಿಗೆ ತಲುಪಿಸಿದೆಯೇ ಹೊರತು ಉಕ್ರೇನ್‌ ದೇಶದೊಳಗೆ ಸಿಲುಕಿರುವ ಹಾಗೂ ಗಡಿ ದಾಟಲು ವಿಫಲವಾದ ವಿದ್ಯಾರ್ಥಿಗಳ ರಕ್ಷಣೆಗೆ ಯಾವ ಕ್ರಮವನ್ನು ಕೈಗೊಂಡಿದೆ ಎನ್ನುವುದು ಪ್ರಶ್ನೆಯಾಗಿಯೇ ಉಳಿದಿದೆ.

https://twitter.com/varungandhi80/status/1498157231157948421

ಪೋಲೆಂಡ್‌, ಹಂಗೇರಿ, ರೊಮಾನಿಯಾ ಮೊದಲಾದ ಉಕ್ರೇನ್‌ ನೆರೆ ದೇಶಗಳಿಗೆ ತಲುಪಿದವರನ್ನು ಮಾತ್ರ ಇದುವರೆಗೂ ಭಾರತಕ್ಕೆ ತರಲಾಗುತ್ತಿದೆ. ಉಕ್ರೇನಿನಲ್ಲಿ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಭಾರತದ ರಾಯಭಾರ ಕಛೇರಿಯಿಂದಲೂ ಸರಿಯಾದ ಸ್ಪಂದನೆ ದೊರಕುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಅದೂ ಅಲ್ಲದೆ, ರಷ್ಯಾ-ಉಕ್ರೇನ್‌ ಸಂಘರ್ಷದ ಕುರಿತಂತೆ ಭಾರತದ ನಿಲುವು ಉಕ್ರೇನಿಗರ ಕೋಪಕ್ಕೆ ಕಾರಣವಾಗಿದ್ದು, ಭಾರತದ ಮೇಲಿನ ಕೋಪವನ್ನು ಭಾರತೀಯ ವಿದ್ಯಾರ್ಥಿಗಳ ಮೇಲೆ ತೀರಿಸುತ್ತಿದ್ದಾರೆ.

ಪೋಲೆಂಡ್‌ ಗಡಿದಾಟಲು ಹೊರಟ ವಿದ್ಯಾರ್ಥಿಗಳನ್ನು ಉಕ್ರೇನ್‌ ತೊರೆಯದಂತೆ ಅಲ್ಲಿನ ಸೈನಿಕರು ದೌರ್ಜನ್ಯ, ದಾಳಿ ನಡೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಭಾನುವಾರ ಪೋಲೆಂಡ್‌ ಗಡಿಯತ್ತ ತೆರಳುತ್ತಿದ್ದಾಗ ಉಕ್ರೇನ್‌ ಭದ್ರತಾ ಪಡೆಗಳು ದೇಶ ತೊರೆಯದಂತೆ ತಡೆದು, ಥಳಿಸಿರುವ ಘಟನೆಗಳು ವರದಿಯಾಗಿವೆ. ಉಕ್ರೇನ್-ಪೋಲೆಂಡ್ ಗಡಿಯಲ್ಲಿರುವ ಶೆಹಿನಿಯಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಲಯಾಳಿ ವಿದ್ಯಾರ್ಥಿಗಳನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ತಡೆದು, ಥಳಿಸಿದ್ದಾರೆ. ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿರುವ ವಿಡಿಯೊ ತುಣುಕನ್ನು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.

ಆದರೂ ಭಾರತದ ಮಾಧ್ಯಮಗಳು ಯುದ್ಧವನ್ನು ರೋಮಾಂಚಕಾರಿ ಎಂದು ಬಿಂಬಿಸುತ್ತಾ, ನರೇಂದ್ರ ಮೋದಿ ಯುದ್ಧ ನಿಲ್ಲಿಸಲು ಶಕ್ತರಾಗಿದ್ದಾರೆ ಎಂಬ ಭ್ರಮಾತ್ಮಕ ಲೋಕವನ್ನು ಇಲ್ಲಿ ಸೃಷ್ಟಿಸುತ್ತಿವೆ. ಉಕ್ರೇನ್‌ ನೆರೆ ರಾಷ್ಟ್ರಗಳಿಂದ ವಿದ್ಯಾರ್ಥಿಗಳನ್ನು ಕರೆ ತಂದಿರುವುದನ್ನು ಮಹಾ ಸಾಧನೆ ಎಂಬಂತೆ ಬಿಂಬಿಸಿ ಇಂತಹ ದುರಿತ ಕಾಲದಲ್ಲೂ ಮೋದಿ ಪರ ಪ್ರಚಾರ ನಡೆಸಲಾಗುತ್ತಿದೆ.

See this is how Indian students are being treated at the Ukraine Poland border. They are firing air shots. Is this how you deal with the students who are already traumatized by the war hit country ?@IndiainUkraine @IndiainPoland @narendramodi @MEAIndia #UkraineRussiaWar pic.twitter.com/pD2L1Ng93t

— Harsh Raj (@harshraj260) February 27, 2022

ಆದರೆ, ಕೇಂದ್ರ ಸಚಿವರ, ಬಿಜೆಪಿ ಹಾಗೂ ಮಾಧ್ಯಮಗಳ ಪರದೆಯನ್ನು ಇದೀಗ ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಬಯಲಿಗೆಳೆಯುತ್ತಿದ್ದಾರೆ. ಉಕ್ರೇನಿನ ರಾಜಧಾನಿ ಕೈವ್‌ ನಗರದಲ್ಲಿ ಸಿಲುಕಿಕೊಂಡಿರುವುದಾಗಿ ಹೇಳುವ ವಿದ್ಯಾರ್ಥಿನಿಯೊಬ್ಬಳು, ಸರ್ಕಾರ ತಮ್ಮ ತೆರವು ಕಾರ್ಯಾಚರಣೆಗೆ ಬಂದಿಲ್ಲ, ರಾಯಭಾರ ಕಛೇರಿ ಸಿಬ್ಬಂದಿಗಳೂ ತಮಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಆರೋಪಿಸಿ ವೀಡಿಯೋವನ್ನು ಹಂಚಿಕೊಂಡಿದ್ದಾಳೆ.

ವಿಡಿಯೋದಲ್ಲಿ ಭಾರತದ ಮಾಧ್ಯಮಗಳ ಸುದ್ದಿಗಳನ್ನು ನಂಬಬೇಡಿ ಎಂದು ಭಾರತೀಯರಿಗೆ ಕರೆ ನೀಡಿರುವ ವಿದ್ಯಾರ್ಥಿನಿ, ಪ್ರತಿಭಟನೆ ಮಾಡಿಯಾದರೂ ಭಾರತದಲ್ಲಿ ಸರ್ಕಾರಕ್ಕೆ ಒತ್ತಾಯಿಸಿ ನಮ್ಮನ್ನು ಕರೆಯಿಸಿಕೊಳ್ಳಿ ಎಂದು ಅಳಲು ತೋಡುವ ವಿಡಿಯೋ ಭಾರತ ಸರ್ಕಾರದ, ಫೇಕ್‌ ವಿಶ್ವಗುರುವಿನ ನಿಜಬಣ್ಣವನ್ನು ಬಯಲು ಮಾಡಿದೆ.

“ಭಾರತದ ಸರ್ಕಾರ ತಮ್ಮನ್ನು ಮರಳಿ ಕರೆ ತರಲು ʼಏನೂ ಮಾಡುತ್ತಿಲ್ಲʼ, ನಾವು ರಾಯಭಾರ ಕಛೇರಿ ಸಿಬ್ಬಂದಿಗಳಿಗೆ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿಲ್ಲ. ರೊಮಾನಿಯಾ ಗಡಿಯಲ್ಲಿ (ಭಾರತೀಯ) ಹುಡುಗಿಯರ ಮೇಲೆ ಉಕ್ರೇನ್‌ ಸೈನಿಕರು ಹಲ್ಲೆ ನಡೆಸುವ ವಿಡಿಯೋಗಳನ್ನು ಅವರಿಗೆ ಕಳಿಸಿದರೂ ಯಾವ ಪ್ರತಿಕ್ರಿಯೆಗಳನ್ನು ಅವರು ಕೊಡುತ್ತಿಲ್ಲ. ನಮ್ಮ ಕರೆಯನ್ನು ನಿರಾಕರಿಸುತ್ತಿದ್ದಾರೆ ನಾವು ಉಕ್ರೇನ್‌ ಗಡಿಗಿಂತ 800 ಕಿಮೀ ದೂರದಲ್ಲಿದ್ದೇವೆ, ಅಧಿಕೃತ (ಸರ್ಕಾರಿ) ಸಹಾಯವಿಲ್ಲದಿದ್ದರೆ ಗಡಿ ದಾಟಲು ಸಾಧ್ಯವಿಲ್ಲ. ಆದರೂ ಸರ್ಕಾರ ಏನೂ ಮಾಡುತ್ತಿಲ್ಲ. ನನ್ನ ವಿಡಿಯೋ ನೋಡುತ್ತಿರುವ ಭಾರತೀಯರಲ್ಲಿ ಒಂದು ವಿನಂತಿ, ದಯವಿಟ್ಟು ನೀವು ಭಾರತದ ಮಾಧ್ಯಮಗಳನ್ನು ನಂಬಬೇಡಿ. ನಾವು 20‌ ರಿಂದ 30 ಸಾವಿರದಷ್ಟು ಮೆಡಿಕಲ್‌ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದೇವೆ. ಪ್ರತಿಭಟನೆ ಮಾಡಿ ಸರ್ಕಾರದ ಮೇಲೆ ಒತ್ತಡ ತನ್ನಿ, ನಮ್ಮನ್ನು ಸುರಕ್ಷಿತವಾಗಿ ಕರೆ ತರುವಂತೆ ಒತ್ತಾಯಿಸಿ” ಎಂದು ಅವಲತ್ತುಕೊಂಡಿದ್ದಾಳೆ.

ಈಕೆಯ ಈ ವಿಡಿಯೋ ವ್ಯಾಪಕ ವೈರಲ್‌ ಆಗಿದ್ದು, ಬಿಜೆಪಿ ಸಂಸದ ವರುಣ್‌ ಗಾಂಧಿ ಈ ವಿಡಿಯೋವನ್ನು ಟ್ವೀಟ್‌ ಮಾಡಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags: BJPCongress PartyRussiaRussiaUkraineCrisisUkraineukraine presidentUkraine President Volodymyr ZelenskyUkraineConflictನರೇಂದ್ರ ಮೋದಿಬಿಜೆಪಿ
Previous Post

ಮಾರುಕಟ್ಟೆಗೆ ಯುದ್ಧಬೇಕಿದೆ, ಮನುಕುಲದ ಉಳಿವಿಗೆ ಶಾಂತಿ ಬೇಕಿದೆ!

Next Post

UP Elections 2022 | ಒಬಿಸಿ ಮತಗಳು ದೂರ UPಯಲ್ಲಿ ಬಿಜೆಪಿಗೆ ಕಠಿಣ ಸ್ಪರ್ಧೆ ಒಡಿದ್ದ ಜಾತಿ ಸಮೀಕರಣ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
Next Post
UP Elections 2022 | ಒಬಿಸಿ ಮತಗಳು ದೂರ UPಯಲ್ಲಿ ಬಿಜೆಪಿಗೆ ಕಠಿಣ ಸ್ಪರ್ಧೆ ಒಡಿದ್ದ ಜಾತಿ ಸಮೀಕರಣ

UP Elections 2022 | ಒಬಿಸಿ ಮತಗಳು ದೂರ UPಯಲ್ಲಿ ಬಿಜೆಪಿಗೆ ಕಠಿಣ ಸ್ಪರ್ಧೆ ಒಡಿದ್ದ ಜಾತಿ ಸಮೀಕರಣ

Please login to join discussion

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada