• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಕ್ಕಿ ಕೇಳಿದವರಿಗೆ ಸತ್ತು ಹೋಗು ಅಂದದ್ದನ್ನೂ ಸಮರ್ಥಿಸಿಕೊಂಡ ಸಚಿವ ಉಮೇಶ್ ಕತ್ತಿ!

Any Mind by Any Mind
April 28, 2021
in ಕರ್ನಾಟಕ
0
ಅಕ್ಕಿ ಕೇಳಿದವರಿಗೆ ಸತ್ತು ಹೋಗು ಅಂದದ್ದನ್ನೂ ಸಮರ್ಥಿಸಿಕೊಂಡ ಸಚಿವ ಉಮೇಶ್ ಕತ್ತಿ!
Share on WhatsAppShare on FacebookShare on Telegram

ಅಕ್ಕಿ ಕೇಳಿದ ರೈತನ ಬಳಿ ಸತ್ತು ಹೋಗು ಅಂದಿರುವುದನ್ನೂ ಸಚಿವ ಉಮೇಶ್ ಕತ್ತಿ ಸಮರ್ಥನೆ ಮಾಡಿ ತಮ್ಮ ಉದ್ಧಟತನವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

ADVERTISEMENT

ಈ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಯಾರು ಈಶ್ವರ ನನಗೆ ಗೊತ್ತಿಲ್ಲ. ಅಕ್ಕಿ ಕಡಿತ ಮಾಡಿದ್ದಾರೆ ಸಾಯಬೇಕೋ ಅಂತಾ ಕೇಳಿದ, ಸತ್ತು ಹೋಗಪ್ಪಾ ಅಂದೆ. ಅವನು ಸಾಯ್ತೀನಿ ಅಂದ್ರೆ ನಾನೇನು ಉತ್ತರ ಕೊಡಲಿ ಎಂದು ಉಡಾಫೆಯಿಂದ ಪ್ರಶ್ನಿಸಿದ್ದಾರೆ.

ಅಕ್ಕಿ ಕೇಳಿದವರಿಗೆ ಸತ್ತು ಹೋಗು ಎಂದ ಸಚಿವ ಉಮೇಶ್‌ ಕತ್ತಿ | Umesh Katti | controversy statement

ಈ ವೇಳೆ ಮಾಧ್ಯಮದವರು, ನೀನು ಸಾಯಬೇಡ ಅಂತ ಸಮಾಧಾನ ಹೇಳಿ ಧೈರ್ಯ ತುಂಬುವುದ ಜನಪ್ರತಿನಿಧಿಯೊಬ್ಬರ ಕರ್ತವ್ಯ ಅಂದಾಗ, ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ ಎಂದು ಪ್ರತ್ಯುತ್ತರಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಬಂದಿದೆ ಮೇ ತಿಂಗಳಲ್ಲಿ ನೋಡೋಣ ಅಂತ ಹೇಳಿದ್ದೇನೆ. ಆರೂವರೆ ಕೋಟಿ ಜನರಿಗೆ ಉತ್ತರ ಕೊಡುತ್ತಾ ಎಲ್ಲಿ ಹೋಗಲಿ ನಾನು? ಸತ್ತು ಹೋಗ್ಲಾ ಅಂತ ಕೇಳಿದ್ರೆ ನಾನೇನು ಉತ್ತರಿಸಲಿ ಹೇಳಿ? ಲಾಕ್‍ಡೌನ್ ಪರಿಸ್ಥಿತಿಯಲ್ಲಿ ಮೇ ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಪಡಿತರ ವಿತರಣೆ ಮಾಡುತ್ತೆ ಎಂದು ಸಚಿವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಲಾಕ್‌ಡೌನ್‌ ಸಂಧರ್ಭದಲ್ಲೂ ಪಡಿತರ ಕಡಿತದ ಕುರಿತಂತೆ ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಂಘದ ಕಾರ್ಯಕರ್ತ ಈಶ್ವರ್ ಸಚಿವರನ್ನು  ಪ್ರಶ್ನಿಸಿದ್ದರು. ಈ ವೇಳೆ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜತೆಗೆ ಜೋಳ ಕೊಡುತ್ತೇವೆ. ಲಾಕ್​ಡೌನ್ ಸಂದರ್ಭದಲ್ಲಿ 5  ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಲಾಕ್​ಡೌನ್ ಇದೆ, ಅಲ್ಲಿಯವರೆಗೆ ಉಪವಾಸ ಸಾಯೋದಾ ಎಂದು ಈಶ್ವರ್ ಪ್ರಶ್ನಿಸಿದಕ್ಕೆ ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಸವಾಲು ಹಾಕಿದ್ದಾರೆ. ಹಾಗೂ ಇನ್ನಮುಂದೆ ಫೋನ್ ಮಾಡಬೇಡಿ ಎಂದು ಹೇಳಿ ಕಾಲ್ ಕಟ್ ಮಾಡಿದ್ದಾರೆ. ಸದ್ಯ ಆಹಾರ ಸಚಿವರ ಈ ಆಡಿಯೋ ವೈರಲ್ ಆಗಿದೆ. ಸಚಿವರ ಉದ್ಧಟತನಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಜನ ರಾಜಕಾರಣಿಗಳ ಮಖಕ್ಕೆ ಉಗೀತಿದ್ದಾರೆ: Umesh Katti ಹೇಳಿಕೆಗೆ DK Shivakumar  ಪ್ರತಿಕ್ರಿಯೆ Karnataka

ಕತ್ತಿಯನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ – ಡಿಕೆ ಶಿವಕುಮಾರ್‌ ಒತ್ತಾಯ

ಅಕ್ಕಿ ಕೇಳಿದವರಲ್ಲಿ ಸತ್ತು ಹೋಗು ಎಂದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಖಂಡಿಸಿದ್ದಾರೆ. ಅಧಿಕಾರ ಇರುವವರ ಬಳಿ ಜನರು ಕೇಳುತ್ತಾರೆ. ಅದಕ್ಕೆ ಸ್ಪಂದಿಸಬೇಕಿರುವುದು ಅವರ ಕರ್ತವ್ಯ. ಅಕ್ಕಿ ಕೇಳಿರುವುದರಲ್ಲಿ ತಪ್ಪೇನಿದೆ? ಅಕ್ಕಿ ಕೇಳಿದರೂ ಸಾಯಿ ಅಂತ ಹೇಳುವ ವ್ಯಕ್ತಿ ಮಂತ್ರಿ ಸ್ಥಾನದಲ್ಲಿ ಯಾಕೆ ಇರಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಹಾಗೂ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Previous Post

ಅಜ್ಜನಿಗೆ ಆಮ್ಲಜನಕ ಬೇಕಾಗಿದೆ ಎಂದು ಸಹಾಯ ಕೋರಿದ ಯುವಕನ ವಿರುದ್ಧ FIR ದಾಖಲಿಸಿದ ಉತ್ತರ ಪ್ರದೇಶ ಸರ್ಕಾರ

Next Post

1 ಆಂಬ್ಯುಲೆನ್ಸ್‌ನಲ್ಲಿ 22 ಹೆಣ: ಆಂಬ್ಯುಲೆನ್ಸ್‌ ಕೊರತೆಯೇ ಇದಕ್ಕೆ ಕಾರಣ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
1 ಆಂಬ್ಯುಲೆನ್ಸ್‌ನಲ್ಲಿ 22 ಹೆಣ: ಆಂಬ್ಯುಲೆನ್ಸ್‌ ಕೊರತೆಯೇ ಇದಕ್ಕೆ ಕಾರಣ

1 ಆಂಬ್ಯುಲೆನ್ಸ್‌ನಲ್ಲಿ 22 ಹೆಣ: ಆಂಬ್ಯುಲೆನ್ಸ್‌ ಕೊರತೆಯೇ ಇದಕ್ಕೆ ಕಾರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada