• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!
Share on WhatsAppShare on FacebookShare on Telegram

ಬೀದರ್:ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿ, ಇತರೆ ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.

ADVERTISEMENT

ಈ ಕುರಿತು ವರದಿಗಾರರೊಂದಿಗೆ ದೂರವಾಣಿಯೊಂದಿಗೆ ಮಾತನಾಡಿರುವ ಬಾಲಕಿ, ಬಡತನದಿಂದಾಗಿ ತಾಯಿ ತನ್ನ ಮೂವರು ಅಕ್ಕಂದಿರಿಗೆ ಕೆಲವು ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದಾರೆ.ತನ್ನ ಅಕ್ಕಂದಿರುವ ಅನುಭವಿಸುತ್ತಿರುವ ಆರೋಗ್ಯದ ಸಮಸ್ಯೆಗಳನ್ನು ನೋಡಿದಾಗ, ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಬಾಲ್ಯ ವಿವಾಹವು ಕೆಟ್ಟದು ಎಂಬುದು ಅರಿವಾಯಿತು ಎಂದು ಹೇಳಿದ್ದಾಳೆ.

ತನ್ನ ಅಕ್ಕಂದಿರುವ ಅನುಭವಿಸುತ್ತಿರುವ ಆರೋಗ್ಯದ ಸಮಸ್ಯೆಗಳನ್ನು ನೋಡಿದಾಗ, ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಬಾಲ್ಯ ವಿವಾಹವು ಕೆಟ್ಟದು ಎಂಬುದು ಅರಿವಾಯಿತು ಎಂದು ಹೇಳಿದ್ದಾಳೆ.

ಆಕೆಯ ತಂದೆ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಕೃಷಿ ಕೂಲಿ ಕಾರ್ಮಿಕರಾಗಿರುವ ತಾಯಿ ನಾಲ್ಕು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಕುಟುಂಬಕ್ಕೆ ಏಕೈಕ ಆಧಾರವಾಗಿದ್ದಾರೆ. ಸರ್ಕಾರದ ಸವಲತ್ತುಗಳ ಕಾರಣದಿಂದ ಆಕೆಯ ತಾಯಿ ಬಾಲಕಿಯನ್ನು ಓದಲು ಬಿಟ್ಟಿದ್ದಾರೆ. ಆದರೆ ಬಡತನದ ಕಾರಣದಿಂದ ತನ್ನ ತಾಯಿಯ ಒಂಬತ್ತು ಸಹೋದರರ ಪೈಕಿ 25 ವರ್ಷ ವಯಸ್ಸಿನ ಸೋದರ ಮಾವನಿಗೆ ಆಕೆಯನ್ನು ಕೊಟ್ಟು ಮದುವೆ ಮಾಡಲು ಕುಟುಂಬ ನಿರ್ಧರಿಸಿತು.

ಆದರೆ ಬಾಲಕಿ ಇದನ್ನು ವಿರೋಧಿಸಿ ತಾನು ವಯಸ್ಕಳಾಗಿ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ತಾಯಿ ಮತ್ತು ಸೋದರ ಮಾವನಿಗೆ ಹೇಳಿದ್ದಾಳೆ. ಆದರೂ ಅವರು ತಲೆಕೆಡಿಸಿಕೊಳ್ಳದೆ ಮದುವೆ ತಯಾರಿಗೆ ಮುಂದಾಗಿದ್ದಾರೆ.

ಅಪ್ರಾಪ್ತ ಬಾಲಕಿಗೆ ತಿಂಗಳಿಗೆ 4 ಸಾವಿರ ರೂ: ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದು, ಕೊಸಾಂಬೆ ಗಮನಕ್ಕೆ ತರಲಾಗಿದೆ.

ಭಾನುವಾರ ತಹಶೀಲ್ದಾರ್ ದತ್ತಾತ್ರೇಯ ಗಡಾದ, ತಾಲ್ಲೂಕು ಪಂಚಾಯಿತಿ ಸಿಇಒ ರಮೇಶ ಸುಲ್ಫಿ, ಸಿಡಿಪಿಒ ಗೌತಮ್ ಸಿಂಧೆ, ಬಿಇಒ ಶಿವರುದ್ರಯ್ಯ, ಪಿಎಸ್‌ಐ ಜಯಶ್ರೀ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪುರ ಅವರೊಂದಿಗೆ ಗ್ರಾಮಕ್ಕೆ ದೌಡಾಯಿಸಿದ್ದು, ಬಾಲಕಿಯ ತಾಯಿ, ಸೋದರ ಮಾವ ಮತ್ತು ಗ್ರಾಮದ ಹಿರಿಯರನ್ನು ಭೇಟಿ ಮಾಡಿತು.

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನೆಯವರಿಗೆ ಮನವರಿಕೆ ಮಾಡಿಕೊಟ್ಟು, ಮದುವೆ ಮಾಡಿದರೆ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಹುಡುಗಿ ವಯಸ್ಕಳಾಗುವವರೆಗೆ ಮದುವೆ ಮಾಡಿಸುವುದಿಲ್ಲ ಎಂದು ತಾಯಿಯಿಂದ ವಾಗ್ದಾನ ಪಡೆದ ಅಧಿಕಾರಿಗಳ ತಂಡ ಬಾಲಕಿಯನ್ನು ಅಭಿನಂದಿಸಿತು.ಆಕೆಗೆ ಪ್ರತಿ ತಿಂಗಳು ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕೊಸಾಂಬೆ ಸೂಚಿಸಿದರು. ನಮ್ಮ ಹಳ್ಳಿಗೆ ಸಹಾಯ ಮಾಡಲು ನಾನು ಪೊಲೀಸ್ ಅಧಿಕಾರಿಯಾಗಲು ಬಯಸುತ್ತೇನೆ ಎಂದು ಬಾಲಕಿ ಹೇಳಿದಳು.

Tags: BEO ShivrudraiahCDPO Gautam SindeChild MarriageChild Protection Officer Gourishankar ParatapuraPSI JayashreeTaluk Panchayat CEO Ramesh SulfiTehsildar Dattatreya GadadaThe girl who stopped her marriage in Bidar!
Previous Post

ಇಂದು ರಾತ್ರಿಯೇ ಬೆಂಗಳೂರಿಗೆ ಸುರ್ಜೇವಾಲಾ- ಬುಧವಾರ ಬೆಳಗ್ಗೆ‌ ʼಕೈʼ ಮೀಟಿಂಗ್‌

Next Post

ಭವಿಷ್ಯ ನಿಧಿ ಸಂಸ್ಥೆಗೆ ಜುಲೈ ತಿಂಗಳಿನಲ್ಲಿ 19 ಲಕ್ಷ ಜನರ ಸೇರ್ಪಡೆ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಭವಿಷ್ಯ ನಿಧಿ ಸಂಸ್ಥೆಗೆ ಜುಲೈ ತಿಂಗಳಿನಲ್ಲಿ  19 ಲಕ್ಷ ಜನರ ಸೇರ್ಪಡೆ

ಭವಿಷ್ಯ ನಿಧಿ ಸಂಸ್ಥೆಗೆ ಜುಲೈ ತಿಂಗಳಿನಲ್ಲಿ 19 ಲಕ್ಷ ಜನರ ಸೇರ್ಪಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada