• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಕಸಿತ ಭಾರತ ಸಾಕಾರಕ್ಕೆ ಕ್ರಾಂತಿಕಾರಿ ಹೆಜ್ಜೆ: ₹7,280 ಕೋಟಿಯ ಯೋಜನೆಗೆ ಕೇಂದ್ರ ಅಸ್ತು

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ದೇಶ, ರಾಜಕೀಯ
0
ವಿಕಸಿತ ಭಾರತ ಸಾಕಾರಕ್ಕೆ ಕ್ರಾಂತಿಕಾರಿ ಹೆಜ್ಜೆ: ₹7,280 ಕೋಟಿಯ ಯೋಜನೆಗೆ ಕೇಂದ್ರ ಅಸ್ತು
Share on WhatsAppShare on FacebookShare on Telegram
ADVERTISEMENT

ನವದೆಹಲಿ: 2047ಕ್ಕೆ ವಿಕಸಿತ ಭಾರತ ಸಾಕಾರ ಮಾಡಲೇಬೇಕೆನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ಭಾಗವಾಗಿ ಸಿಂಟೆರ್ಡ್ ರೇರ್ ಅರ್ಥ್ ಪರ್ಮನೆಂಟ್ ಮ್ಯಾಗ್ನೆಟ್ಸ್ (REPM) ಉತ್ಪಾದನೆ ಉತ್ತೇಜಿಸಲು ₹7,280 ಕೋಟಿ ಮೊತ್ತದ ಅತ್ಯಂತ ಮಹತ್ವದ ಬೃಹತ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

CM  siddaramaiah : ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಗಳೊಂದಿಗೆ ಸಭೆ #pratidhvani

ಜಾಗತಿಕ ಸವಾಲುಗಳನ್ನು ಮೆಟ್ಟಿ ನಿಲ್ಲಲು ಆರ್‌ಇಪಿಎಂ ಪೂರಕ ವ್ಯವಸ್ಥೆಯನ್ನು ರಾಷ್ಟ್ರದ ಉದ್ದಗಲಕ್ಕೂ ಉತ್ತೇಜಿಸಲು, ಈ ಕ್ಷೇತ್ರದಲ್ಲಿ ಸದೃಢವಾದ ಸ್ವಾವಲಂಬನೆ ಸಾಧಿಸಲು ಮತ್ತು ಜಾಗತಿಕ ಆರ್‌ಇಪಿಎಂ ಮಾರುಕಟ್ಟೆಯಲ್ಲಿ ಭಾರತವನ್ನು ಪ್ರಮುಖ ರಾಷ್ಟ್ರವನ್ನಾಗಿ ಮಾಡಲು ಕೇಂದ್ರ ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಂಪುಟ ನಿರ್ಧಾರದ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಕೃತಜ್ಞತೆ ಸಲ್ಲಿಸಿರುವ ಸಚಿವರು, ಈ ಯೋಜನೆ 6,000 ಎಂಟಿಪಿಎ ಸಿಂಟೆರ್ಡ್ ಆರ್‌ಇಪಿಎಂನ ಸ್ವದೇಶಿ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಆಟೋಮೊಬೈಲ್, ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರಗಳಿಗೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಬಹುದೊಡ್ಡ ಶಕ್ತಿಯನ್ನು ತುಂಬುತ್ತದೆ. ಜೊತೆಗೆ 2070ರ ವೇಳೆಗೆ ಭಾರತದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ತರುವ ಗುರಿಯನ್ನು ಹೊಂದಿದೆ ಎಂದು ಸಚಿವರು ಹೇಳಿದ್ದಾರೆ.

Siddaramaiah ; ಸಂವಿಧಾನ ವಿರೋಧಿಗಳು ಇದ್ದರಾ.?  ಇಲ್ವಾ..? #pratidhvani #siddaramaiah

ಭಾರತದ ಅಭಿವೃದ್ಧಿ ಪರ್ವದಲ್ಲಿ ಇಂದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದ್ದು, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಳೆದ ಜೂನ್ 17, 2025ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಡೆದ ನಿರ್ಣಾಯಕ ಅಂತರ ಸಚಿವಾಲಯಗಳ ಸಭೆ ನಡೆಸಿ ಸಿಂಟೆರ್ಡ್ ರೇರ್ ಅರ್ಥ್ ಪರ್ಮನೆಂಟ್ ಮ್ಯಾಗ್ನೆಟ್ಸ್ (REPM) ಮಹತ್ವದ ಬಗ್ಗೆ ಚರ್ಚೆ ನಡೆಸಿದ್ದರು.

ಅಂದು ಪರಮಾಣು ಶಕ್ತಿ ಇಲಾಖೆ, ಬೃಹತ್ ಕೈಗಾರಿಕೆ ಸಚಿವಾಲಯ, ಗಣಿ ಸಚಿವಾಲಯ, ವಿದೇಶಾಂಗ ಸಚಿವಾಲಯ, ಉಕ್ಕು ಸಚಿವಾಲಯ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮತ್ತು ಇತರ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ಧ ಆ ಸಭೆಯಲ್ಲಿ ಸ್ವದೇಶಿಯವಾಗಿ ಅಪರೂಪದದ ಖನಿಜಗಳನ್ನು ಶೋಧಿಸಿ ಬಳಕೆ ಮಾಡಿಕೊಳ್ಳುವ ಪೂರಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಕಾರ್ಯತಂತ್ರದ ಪ್ರಾಮುಖ್ಯತೆ ಬಗ್ಗೆ ಒತ್ತಿ ಹೇಳಿದ್ದರಲ್ಲದೆ, ಇದು ರಾಷ್ಟ್ರೀಯ ತುರ್ತು ಅಗತ್ಯ ಎಂದು ಪ್ರತಿಪಾದಿಸಿದ್ದರು.

ಆಧುನಿಕ ಉನ್ನತ ಮಟ್ಟದ ತಂತ್ರಜ್ಞಾನ ಬಳಕೆಯ ಕೈಗಾರಿಕೆಗಳಲ್ಲಿ ಬಳಸಲಾಗುವ ಪ್ರಬಲ ಮತ್ತು ಅತ್ಯಂತ ನಿರ್ಣಾಯಕ ಮ್ಯಾಗ್ನೆಟ್ (ಆಯಸ್ಕಾಂತ) ಗಳಾದ ಅಪರೂಪದ ಭೂಮಿಯಲ್ಲಿನ ಶಾಶ್ವತ ಆಯಸ್ಕಾಂತಗಳಿಗೆ ಸಂಪೂರ್ಣ ಸಂಯೋಜಿತ, ಸ್ಥಳೀಯ ಪೂರಕ ಸರಪಳಿ ವ್ಯವಸ್ಥೆಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿರುವ ರಾಷ್ಟ್ರದ ಇತಿಹಾಸದಲ್ಲಿಯೇ ಕೇಂದ್ರ ಸರ್ಕಾರ ಕೈಗೊಂಡ ಮಹತ್ವದ ಮೊತ್ತ ಮೊದಲ ಉಪಕ್ರಮ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಈ ನಿರ್ಧಾರವನ್ನು ಭಾರತೀಯ ಕೈಗಾರಿಕೆ ಪ್ರಗತಿಯ ದಿಕ್ಕಿನಲ್ಲಿ ಪರಿವರ್ತನಾತ್ಮಕ ಹಾಗೂ ಐತಿಹಾಸಿಕ ಹೆಜ್ಜೆ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು, 2047ರ ಹೊತ್ತಿಗೆ ಭಾರತ ವಿಕಸಿತ ಭಾರತವಾಗಿ ಅವತರಿಸಬೇಕು. ಈ ನಿಟ್ಟಿನಲ್ಲಿ ಭಾರತದ ವೇಗದ ಪಯಣಕ್ಕೆ ಪ್ರೇರಕ ಶಕ್ತಿಯಾಗಿ ಈ ನಿರ್ಧಾರಕ್ಕೆ ಕಾರಣೀಭೂತರಾಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಮೊದಲ ಬಾರಿಗೆ, ನಾವು ಸಿಂಟರ್ಡ್ ನಿಯೋಡೈಮಿಯಮ್ ಐರನ್ ಬೋರಾನ್ ಎಂಬ ಅಪರೂಪದ, ಭೂಮಿಯಲ್ಲಿನ ಶಾಶ್ವತ ಆಯಸ್ಕಾಂತಗಳನ್ನು ಹೊರತೆಗೆದು ಬಳಕೆ ಮಾಡಲು ಆರಂಭದಿಂದ ಅಂತ್ಯದವರೆಗೂ ಸಂಪೂರ್ಣವಾಗಿ ಸ್ವದೇಶಿ ಪೂರಕ ವ್ಯವಸ್ಥೆಯನ್ನು ನಿರ್ಮಿಸಲು ₹7,280 ಕೋಟಿ ವೆಚ್ಚದೊಂದಿಗೆ ಸಮರ್ಪಿತ, ಮಿಷನ್ ಆಧರಿತ ಯೋಜನೆಯನ್ನು ನಾವು ಪ್ರಾರಂಭಿಸುತ್ತಿದ್ದೇವೆ. ಭೂಮಿಯ ಅಪರೂಪದ ಶಾಶ್ವತ ಆಯಸ್ಕಾಂತಗಳು, ವಿಶೇಷವಾಗಿ ಸಿಂಟರ್ಡ್ ನಿಯೋಡೈಮಿಯಮ್ ಐರನ್ ಬೋರಾನ್ (NdFeB) ಆಯಸ್ಕಾಂತಗಳು ವಿದ್ಯುತ್ ಚಲನಶೀಲತೆ, ನವೀಕರಿಸಬಹುದಾದ ಶಕ್ತಿ, ರಕ್ಷಣಾ ವ್ಯವಸ್ಥೆಗಳು, ಏರೋಸ್ಪೇಸ್, ರೊಬೊಟಿಕ್ಸ್, ಕೈಗಾರಿಕಾ ಎಲೆಕ್ಟ್ರಾನಿಕ್ಸ್ ಮತ್ತು ಉದಯೋನ್ಮುಖ ಕ್ಲೀನ್ ಟೆಕ್ ನಾವೀನ್ಯತೆಗಳಿಗೆ ಅನಿವಾರ್ಯವಾಗಿದೆ ಎಂದರು.

Siddaramaiah : ಪ್ರಿಯಾಂಕ್‌ ಖರ್ಗೆ ದೆಹಲಿಯಿಂದ ಹೊತ್ತು ತಂದ ಸಂದೇಶ ಏನು ಸರ್? #pratidhvani
Tags: Central GovernmentHD KumaraswamyIndiaPM Narendra Modi
Previous Post

ಸಿಎಂ ಹುದ್ದೆ: ನೇರವಾಗಿ ಕೊಟ್ಟ ಮಾತು ನೆನಪಿಸಿದ ಡಿ.ಕೆ ಶಿವಕುಮಾರ್

Next Post

ಕ್ರಿಕೆಟರ್‌ ಚೇತೇಶ್ವರ ಪೂಜಾರ ಬಾವ ಸಾವಿಗೆ ಶರಣು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಕ್ರಿಕೆಟರ್‌ ಚೇತೇಶ್ವರ ಪೂಜಾರ ಬಾವ ಸಾವಿಗೆ ಶರಣು

ಕ್ರಿಕೆಟರ್‌ ಚೇತೇಶ್ವರ ಪೂಜಾರ ಬಾವ ಸಾವಿಗೆ ಶರಣು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada