• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾ ನಿರ್ವಹಣೆಯಲ್ಲಿ ಯೋಗಿ ಆದಿತ್ಯನಾಥ್‌ ವಿಫಲ: ಕೇಂದ್ರ ಸಚಿವ, ಬಿಜೆಪಿ ಸಂಸದರಿಂದಲೇ ಅಸಮಾಧಾನ

ಫೈಝ್ by ಫೈಝ್
May 11, 2021
in ದೇಶ
0
ಕರೋನಾ ನಿರ್ವಹಣೆಯಲ್ಲಿ ಯೋಗಿ ಆದಿತ್ಯನಾಥ್‌ ವಿಫಲ: ಕೇಂದ್ರ ಸಚಿವ, ಬಿಜೆಪಿ ಸಂಸದರಿಂದಲೇ ಅಸಮಾಧಾನ
Share on WhatsAppShare on FacebookShare on Telegram

ADVERTISEMENT

ಉತ್ತರ ಪ್ರದೇಶ ರಾಜ್ಯ ಸರ್ಕಾರ ಕೋವಿಡ್19‌ ನಿರ್ವಹಣೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕೇಂದ್ರ ಸಚಿವರು ಹಾಗೂ ಬಿಜೆಪಿ ಸಂಸದರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಜನತೆ ಆರೋಗ್ಯ ಸೌಕರ್ಯಗಳ ಕೊರತೆಯಿಂದ ಪರಿತಪಿಸುತ್ತಿದ್ದಾರೆಂದು ಸ್ವತಃ ಬಿಜೆಪಿ ಸಂಸದರೇ, ಯೋಗಿ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಬರೇಲಿ ಕ್ಷೇತ್ರದಿಂದ ಎಂಟು ಬಾರಿ ಸಂಸದರಾಗಿರುವ, ಕೇಂದ್ರ ಸಚಿವ ಸಂತೋಷ್‌ ಗಂಗವಾರ್‌, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರಿಗೆ ಪತ್ರ ಬರೆದಿದ್ದು, ತನ್ನ ಕ್ಷೇತ್ರದ ಜನತೆ ಕೋವಿಡ್‌ನಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪತ್ರದಲ್ಲಿ ಎತ್ತಿ ತೋರಿಸಿದ್ದಾರೆ.

ಪತ್ರದಲ್ಲಿ ಜಿಲ್ಲೆಯ ಜೊತೆಗೆ ರಾಜ್ಯದ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲು ಕೆಲವು ಕ್ರಮಗಳನ್ನು ಕೂಡಾ ಅವರು ಸೂಚಿಸಿದ್ದಾರೆ.

ಬರೇಲಿ ಜಿಲ್ಲೆಯ ರಾಜ್ಯ ವೈದ್ಯಕೀಯ ವಿಭಾಗದ ಹಿರಿಯ ಅಧಿಕಾರಿಗಳು ರೋಗಿಗಳು ಮತ್ತು ಪರಿಚಾರಕರ ದೂರವಾಣಿ ಕರೆಗಳಿಗೆ ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಗಂಗವಾರ್‌ ಆರೋಪಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಜನರು ತಮ್ಮ ಮನೆಯಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ಸಂಗ್ರಹಿಸುವ ವಿಷಯವನ್ನೂ ಉಲ್ಲೇಖಿಸಿದ ಅವರು, ಇದು ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯನ್ನು ಹೆಚ್ಚಿಸುತ್ತಿದೆ ಎಂದಿದ್ದಾರೆ, ಹಾಗೂ ಅನಗತ್ಯವಾಗಿ ಆಮ್ಲಜನಕವನ್ನು ಸಂಗ್ರಹಿಸುವ ಮತ್ತು ಸಿಲಿಂಡರ್‌ಗಳನ್ನು ಕಾಳ ಮಾರುಕಟ್ಟೆಯಲ್ಲಿ ಮಾರಾಟ ಮಾಡುವವರನ್ನು ಗುರುತಿಸುವ ತುರ್ತು ಅವಶ್ಯಕತೆಯಿದೆ ಎಂದು ಸರ್ಕಾರಕ್ಕೆ ಸೂಚಿಸಿದ್ದಾರೆ.

ಆಸ್ಪತ್ರೆಗಳಿಗೆ ದಾಖಲಿಸಲು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗ ಓಡುತ್ತಿರಬೇಕಾದ ಪರಿಸ್ಥಿತಿ ಇದೆ. ಆಮ್ಲಜನಕ ಕೊರತೆಯನ್ನು ಪೂರೈಸಲು ಬರೇಲಿಯಲ್ಲಿ ತುರ್ತಾಗಿ ಒಂದು ಆಮ್ಲಜನಕ ಘಟಕ ಪೂರೈಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಕಾಳ ಮಾರುಕಟ್ಟೆಯಲ್ಲಿ ವೈದ್ಯಕೀಯ ಸಾಮಾಗ್ರಿಗಳು ಮಾರಾಟವಾಗುವುದನ್ನು ತಡೆಯಲು ಸರ್ಕಾರ ಅಗತ್ಯ ವೈದ್ಯಕೀಯ ಸಾಮಾಗ್ರಿಗಳ ಬೆಲೆಗಳನ್ನು ನಿಯಂತ್ರಿಸಬೇಕು ಹಾಗೂ ಖಾಸಗಿಯಾಗಿ ನೋಂದಣಿಯಾಗಿರುವ ಆಸ್ಪತ್ರೆಗಳಿಗೆ MSME ಅಡಿಯಲ್ಲಿ ಹಣಕಾಸು ನೆರವು ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದೆ, ಕಾನ್ಪುರದ ಬಿಜೆಪಿಯ ಲೋಕಸಭಾ ಸದಸ್ಯ ಸತ್ಯದೇವ್ ಪಚೌರಿ ಉತ್ತರಪ್ರದೇಶ ಸಿಎಂಗೆ ಪತ್ರವೊಂದನ್ನು ಬರೆದಿದ್ದು, ಕೋವಿಡ್ -19 ರೋಗಿಗಳು ಉತ್ತಮ ಚಿಕಿತ್ಸೆ ಪಡೆಯುತ್ತಿಲ್ಲ. ಕೋವಿಡಡಡ ರೋಗಿಗಳಲ್ಲಿ ಅನೇಕರು ತಮ್ಮ ಮನೆಗಳ ಹೊರಗೆ, ಅಥವಾ ಆಸ್ಪತ್ರೆಗಳ ಹೊರಗೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಕಾನ್ಪುರದ ಆಂಬ್ಯುಲೆನ್ಸ್‌ಗಳಲ್ಲಿ ಸಾಕಷ್ಟು ಜೀವ ಉಳಿಸುವ ವ್ಯವಸ್ಥೆಯ ಅಗತ್ಯವಿದೆ ಎಂದು ಸೂಚಿಸಿದ್ದರು.

ಮಾರಣಾಂತಿಕ ವೈರಲ್ ಸೋಂಕಿನ ಮೂರನೇ ಅಲೆಯನ್ನು ಎದುರಿಸಲು ಯುಪಿ ಸರ್ಕಾರವು ಈಗ ಸಾಧ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪಚೌರಿ ಸಲಹೆ ನೀಡಿದ್ದರು.

ಇದಕ್ಕೂ ಮುನ್ನ ಲಖನೌ ಜಿಲ್ಲೆಯ ಮೋಹನ್‌ಲಾಲ್‌ಗಂಜ್‌ನ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರು ಲಕ್ನೋ ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕ, ಜೀವ ಉಳಿಸುವ ಔಷಧಿಗಳು ಮತ್ತು ಇತರ ಅಗತ್ಯ ಆಸ್ಪತ್ರೆ ಉಪಕರಣಗಳ ಕೊರತೆಯ ಬಗ್ಗೆ ಸಿಎಂಗೆ ಪತ್ರ ಬರೆದಿದ್ದರು.

ಒಂದು ಕಡೆ, ತನ್ನದೇ ಪಕ್ಷದ ಸಂಸದರು ಪರೋಕ್ಷವಾಗಿ ತನ್ನ ಆಡಳಿತದ ವೈಫಲ್ಯ ಹಾಗೂ ಕರೋನಾ ನಿರ್ವಹಣೆಯಲ್ಲಿ ತನ್ನ ಅಸಮರ್ಪಕತೆಯ ವಿರುದ್ಧ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದರೂ, ಯೋಗಿ ಆದಿತ್ಯನಾಥ್‌ ತನ್ನ ಮೊಂಡುತನ ಪ್ರದರ್ಶಿಸುತ್ತಿದ್ದಾರೆ.

ಆರೋಗ್ಯ ಕ್ಷೇತ್ರದ ಅಸಮರ್ಪಕತೆಯಿಂದಾಗಿ, ವೈದ್ಯಕೀಯ ಸವಲತ್ತುಗಳ ಕೊರತೆಯಿಂದಾಗಿ ಸಹಸ್ರ ಸಂಖ್ಯೆಯಲ್ಲಿ ನಾಗರಿಕರು ಜೀವ ಕಳೆದುಕೊಳ್ಳುತ್ತಿರುವುದರ ನಡುವೆಯೇ ದನಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದಾಗಿ ಘೋಷಿಸಿಕೊಂಡಿರುವ ಉತ್ತರಪ್ರದೇಶ ಸರ್ಕಾರಕ್ಕೆ ತನ್ನ ನಾಗರಿಕರ ಜೀವದ ಮೌಲ್ಯ ಅರಿವಾಗದಿರುವುದು ವಿಪರ್ಯಾಸ, ಈ ವಿಷಮ ಪರಿಸ್ಥಿತಿಯಲ್ಲೂ ಭಾವನಾತ್ಮಕವಾಗಿ ʼದನದ ಹೆಸರಿನ ರಾಜಕಾರಣʼ ಮಾಡುತ್ತಿರುವುದು ಯೋಗಿ ಆದಿತ್ಯನಾಥರ ಆದ್ಯತೆಯನ್ನು ವಿವರಿಸುತ್ತದೆ. ಯೋಗಿ ಆಡಳಿತದ ಉತ್ತರ ಪ್ರದೇಶದಲ್ಲಿ ಮನುಷ್ಯರಾಗಿ ಹುಟ್ಟುವುದಕ್ಕಿಂತ ದನವಾಗಿ ಹುಟ್ಟುವುದೇ ಲೇಸು ಅನ್ನುವುದನ್ನು ಉತ್ತರಪ್ರದೇಶದಲ್ಲಿ ಪದೇ ಪದೇ ಸಾಬೀತುಪಡಿಸಲಾಗುತ್ತಿದೆ.

Tags: Union Minister
Previous Post

ಸೆಂಟ್ರಲ್ ವಿಸ್ಟಾಗೆ ಮಧ್ಯಂತರ ತಡೆ ಕೋರಿ ಅರ್ಜಿಯ ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

Next Post

ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

Please login to join discussion

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada