• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಿಜೆಪಿ ನಾಯಕರತ್ತ ರಾಹುಲ್‌ ಗಾಂಧಿ ಫ್ಲೈಯಿಂಗ್‌ ಕಿಸ್‌ | ಸ್ಮೃತಿ ಇರಾನಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಲೋಕಸಭೆ ಸದಸ್ಯತ್ವ ಮರುಸ್ಥಾಪನೆಯಾದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ (ಆಗಸ್ಟ್ 9) ಮೊದಲ ಬಾರಿಗೆ ಲೋಕಸಭೆ ಕಲಾಪದಲ್ಲಿ ಭಾಗವಹಿಸಿ ಮಣಿಪುರ ವಿಚಾರ ಪ್ರಸ್ತಾಪಿಸಿದರು. ಭಾಷಣದ ನಂತರ ನಿರ್ಗಮನದ ವೇಳೆ ಬಿಜೆಪಿ ನಾಯಕರಿಗೆ ಕೈಯಿಂದ ಮುತ್ತು ನೀಡಿದರು. ಇದನ್ನು ಬಿಜೆಪಿ ಖಂಡಿಸಿದೆ.

ADVERTISEMENT

ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಣಿಪುರ ವಿಚಾರದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ನಂತರ ರಾಹುಲ್‌ ಅವರು ಅಲ್ಲಿಂದ ನಿರ್ಗಮಿಸಿದರು. ಈ ವೇಳೆ ಬಿಜೆಪಿ ನಾಯಕರತ್ತ ನಗು ಬೀರುತ್ತ ಕೈಯಿಂದ ಮುತ್ತು ನೀಡಿದರು. ಇದರಿಂದ ಕೆಲವು ಬಿಜೆಪಿ ನಾಯಕರು ರಾಹುಲ್ ಅವರ ವರ್ತನೆಗೆ ನಗು ಬೀರಿದರು.

ರಾಹುಲ್‌ ಗಾಂಧಿ ಅವರ ವರ್ತನೆಯನ್ನು ಬಿಜೆಪಿ ನಾಯಕರು ಖಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

#WATCH | Union Minister and BJP MP Smriti Irani says, "I object to something. The one who was given the chance to speak before me displayed indecency before leaving. It is only a misogynistic man who can give a flying kiss to a Parliament which seats female members of Parliament.… pic.twitter.com/xjEePHKPKN

— ANI (@ANI) August 9, 2023

“ಕೇವಲ ಸ್ತ್ರೀದ್ವೇಷದ ವ್ಯಕ್ತಿ ಮಾತ್ರ ಸಂಸತ್ತಿನಲ್ಲಿ ಮಹಿಳಾ ಸಂಸದೆಯರಿಗೆ ಕೈಯಿಂದ ಮುತ್ತು ನೀಡಲು ಸಾಧ್ಯ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಮಹಿಳೆಯರ ಬಗ್ಗೆ ರಾಹುಲ್‌ ಅವರು ಏನು ಯೋಚಿಸುತ್ತಾರೆ ಎಂಬುದನ್ನು ಇದು ಬಿಂಬಿಸುತ್ತದೆ. ಇದು ಅಶ್ಲೀಲ ನಡೆ” ಎಂದು ಅವಿಶ್ವಾಸ ನಿರ್ಣಯದ ಚರ್ಚೆ ವೇಳೆ ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಚ್ಚರಿ ಆದರೂ ಸತ್ಯ ! ಕಳವಾದ ಮೊಬೈಲ್‌ಗಳ ಪತ್ತೆಯಲ್ಲಿ ದೇಶದಲ್ಲೇ ಕರ್ನಾಟಕವೇ ಮೊದಲು

ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಹುಲ್‌ ಗಾಂಧಿ ಅವರ ನಡೆಯನ್ನು ಖಂಡಿಸಿದ್ದಾರೆ. ರಾಹುಲ್‌ ಅವರ ಡೆ ಅನುಚಿತವಾಗಿದೆ ಎಂದು ಸಭಾಧ್ಯಕ್ಷ ಓಂ ಬರ್ಲಾ ಅವರಿಗೆ ದೂರು ನೀಡಿದ್ದಾರೆ. ಈ ದೂರು ಪತ್ರಕ್ಕೆ ಅನೇಕ ಮಹಿಳಾ ಸಂಸದೆಯರು ಸಹಿ ಹಾಕಿದ್ದಾರೆ.

ಇದಕ್ಕೂ ಮುನ್ನ ಮಧ್ಯಾಹ್ನ 12 ಗಂಟೆಗೆ ಲೋಕಸಭೆ ಕಲಾಪ ಮತ್ತೆ ಆರಂಭವಾದ ನಂತರ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ್ದ ರಾಹುಲ್ ಗಾಂಧಿ, “ಭಾರತದಲ್ಲಿ ಮಣಿಪುರವನ್ನು ಹತ್ಯೆ ಮಾಡಲಾಗಿದೆ. ಆದ್ದರಿಂದಲೇ ಪ್ರಧಾನಿ ಮೋದಿ ಮಣಿಪುರಕ್ಕೆ ಆಗಮಿಸುತ್ತಿಲ್ಲ” ಎಂದು ಕುಹಕವಾಡಿದ್ದರು.

“ಇಂದು ನಾನು ಹೃದಯದಿಂದ ಮಾತನಾಡುತ್ತೇನೆ. ಯಾವುದೇ ಟೀಕೆ ಮಾಡುವುದಿಲ್ಲ” ಎಂದು ರಾಹುಲ್‌ ಗಾಂಧಿ ಹೇಳಿದ್ದರು.

Tags: Lok SabhaParliament Mansoon SessionPM Narendra ModiRahul GandhiShobha KarandlajeSmriti Iraniಪ್ರಧಾಮಿ ನರೇಂದ್ರ ಮೋದಿಮಣಿಪುರ ವಿಚಾರರಾಹುಲ್‌ ಗಾಂಧಿಲೋಕಸಭೆಸ್ಮೃತಿ ಇರಾನಿ
Previous Post

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

Next Post

ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ 1

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಈಶ್ವರ ಖಂಡ್ರೆ

ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ 1

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada