ಕರೋನ ಎರಡಬೇ ಅಲೆಯ ಹೊಡೆತದಿಂದ ಕಳೆದ ಒಂದೂವರೆ ತಿಂಗಳಿನಿಂದ ಕರ್ನಾಟಕ ಕಂಪ್ಲೀಟ್ ಲಾಕ್ ಡೌನ್ ಆಗಿದ್ದು ಈಗ ಅನ್ ಲಾಕ್ ಆಗುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ. ಜೂನ್ 14 ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡುವುದಕ್ಕೆ ಇಂದು ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದಲ್ಲಿ ತಜ್ಞರ ಸಮಿತಿಯ ಸಭೆ ಕರೆಯಲಾಗಿದೆ.
ಪಾಸಿಟಿವಿಟಿ ರೇಟ್ ಶೇಕಡಾ 5% ಒಳಗೆ ಬಂದರೆ ಲಾಕ್ಡೌನ್ ತೆರುವು ಮಾಡುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಸದ್ಯ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದ್ದು ಇನ್ನೊಂದು ವಾರದೊಳಗೆ ಸೋಂಕಿತರ ಸಂಖ್ಯೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಇದನ್ನು ಆಧರಿಸಿ ಇವತ್ತು ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಧ್ಯಾಹ್ನ ವಿಧಾನ ಸೌಧದಲ್ಲಿ ತಜ್ಞರ ಟಾಸ್ಕ್ಫೋರ್ಸ್ನ ಜೊತೆ ಮಹತ್ವದ ಸಭೆ ನಡೆಯಲಿದೆ.