ಬೆಂಗಳೂರು: ಮಾ.26: ನಾಡಿನ ಶಕ್ತಿಕೇಂದ್ರ ವಿಧಾನಸೌಧದ ಎದುರು ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ಸಂಜೆ ಅನಾವರಣಗೊಳಿಸಿದರು.
![](https://pratidhvani.com/wp-content/uploads/2023/03/WhatsApp-Image-2023-03-26-at-8.43.55-PM-2-1024x663.jpeg)
![](https://pratidhvani.com/wp-content/uploads/2023/03/WhatsApp-Image-2023-03-26-at-8.43.55-PM-1024x661.jpeg)
![](https://pratidhvani.com/wp-content/uploads/2023/03/WhatsApp-Image-2023-03-26-at-8.43.56-PM-1024x661.jpeg)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಸಚಿವರಾದ ಆರ್.ಅಶೋಕ, ಸಿ.ಸಿ.ಪಾಟೀಲ, ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಸಿ.ಎನ್.ಆಶ್ವತ್ಥನಾರಾಯಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರಿನ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವತೀರ್ಥ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಜಿ, ನಂಜಾವಧೂತ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ವಿಶ್ವ ಒಕ್ಕಲಿಗರ ಪೀಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಮಠಾಧೀಶರು ಹಾಜರಿದ್ದರು.