• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶ: ಪೊಲೀಸರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿಯಾದ ಸ್ಥಳೀಯ ಸಂಸ್ಥೆಗಳ ಚುನಾವಣೆ

ಪ್ರತಿಧ್ವನಿ by ಪ್ರತಿಧ್ವನಿ
July 11, 2021
in ದೇಶ
0
ಉತ್ತರ ಪ್ರದೇಶ: ಪೊಲೀಸರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿಯಾದ ಸ್ಥಳೀಯ ಸಂಸ್ಥೆಗಳ ಚುನಾವಣೆ
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಲಾಠಿ, ಕಲ್ಲು, ಬಂದೂಕು ಅಷ್ಟೇ ಯಾಕೆ ಬಾಂಬ್ ಗಳು ಕೂಡಾ ಪಾಲ್ಗೊಂಡಿವೆ. ರಕ್ಷಣೆ ನೀಡಬೇಕಾಗಿದ್ದ ಪೊಲೀಸರ ಮೇಲೆ ದಾಳಿಯಾದಾಗಲೂ ಅಸಹಾಯಕರಂತೆ ಕೈಕಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ.

ADVERTISEMENT

ಸಾಮಾನ್ಯವಾಗಿ ಉತ್ತರ ಪ್ರದೇಶದಿಂದ ಪೊಲೀಸರ ದೌರ್ಜನ್ಯದ ಕುರಿತಾದ ಸುದ್ದಿಗಳು ಬರುತ್ತಿದ್ದವು. ತೀರಾ ಅಪರೂಪವೆಂಬಂತೆ, ಪೊಲೀಸರೊಬ್ಬರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಅಸಹಾಯಕತೆಯಿಂದ ಮೇಲಧಿಕಾರಿಗೆ ಕರೆ ಮಾಡಿ ತಿಳಿಸುತ್ತಿರುವ ಘಟನೆ ಈ ಬಾರಿ ವರದಿಯಾಗಿದೆ.

ಇಟಾವ ಜಿಲ್ಲೆಯ ಎಸ್ ಪಿ ಆಗಿರುವ ಪ್ರಶಾಂತ್ ಕುಮಾರ್ ಅವರ ವಿಡಿಯೋ ಒಂದು ವೈರಲ್ ಆಗುತ್ತಿದೆ. “ಇವರು ನಮ್ಮ ಮೇಲೆ ಕಲ್ಲು ಮತ್ತು ಇಟ್ಟಿಗೆ ಎಸೆಯುತ್ತಿದ್ದಾರೆ ಸರ್. ನನ್ನ ಕೆನ್ನೆಗೂ ಬಾರಿಸಿದರು. ಬಾಂಬ್ ಗಳನ್ನು ಕೂಡಾ ತಂದಿದ್ದಾರೆ. ಬಿಜೆಪಿಯ ಜನರು. ಶಾಸಕ ಮತ್ತು ಜಿಲ್ಲಾಧ್ಯಕ್ಷ,” ಎಂದು ಅವರು ಫೋನ್ ನಲ್ಲಿ ಮಾತನಾಡುತ್ತಿರುವುದು ಸ್ಪಷ್ಟವಾಗಿ ರೆಕಾರ್ಡ್ ಆಗಿದೆ

https://twitter.com/AnshumanSP/status/1413793417356713990

ಇನ್ನೊಂದು ವಿಡಿಯೋದಲ್ಲಿ ಪ್ರಶಾಂತ್ ಕುಮಾರ್ ಅವರ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ಅಜಯ್ ಧಾಕ್ರೆ ಆವಾಜ್ ಹಾಕುತ್ತಿರುವ ವಿಡಿಯೋ ಕೂಡಾ ವೈರಲ್ ಆಗುತ್ತಿದೆ.

https://twitter.com/manishjagan/status/1413792273754574852

ಈ ಪರಿಸ್ಥಿತಿ ಕೇವಲ ಪೊಲೀಸರದಷ್ಟೇ ಅಲ್ಲದೇ ಪತ್ರಕರ್ತರದೂ ಆಗಿತ್ತು. ಈ ಬಾರಿ ಉನ್ನಾವೋದಲ್ಲಿ ಒಬ್ಬ ಹಿರಿಯ ಅಧಿಕಾರಿ ಪತ್ರಕರ್ತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದರು. ಇದರಿಂದಾಗಿ ಸಿಟ್ಟಿಗೆದ್ದ ಪತ್ರಕರ್ತರು ಸ್ಥಳದಲ್ಲಿಯೇ ಧರಣಿಗೆ ಕುಳಿತುಕೊಂಡರು.

ये कोई गुंडा नहीं।उन्नाव के IAS सीडीओ हैं,जो एक टी वी पत्रकार को दौड़ा-दौड़ा कर पीट रहे हैं।उसका क़ुसूर सिर्फ यह था कि सीडीओ की आंख के सामने हो रही बीडीसी मेंबर्स की धर-पकड़ उसने शूट कर ली थी। pic.twitter.com/mb6suKa98w

— Kamal khan (@kamalkhan_NDTV) July 10, 2021

ಇಂತಹ ಅಹಿತಕಾರಿ ಘಟನೆಗಳ ಕುರಿತಾಗಿ ಹೇಳಿಕೆ ನೀಡಿರುವ ಇಟಾವಾ ಜಿಲ್ಲೆಯ SSP ಬ್ರಜೇಶ್ ಕುಮಾರ್ ಅವರು, ಜನರ ಗುಂಪು ಪೋಲಿಂಗ್ ಬೂತ್ ಕಡೆಗೆ ಬರುವುದನ್ನು ತಡೆಯಲು ಪ್ರಯತ್ನಿಸಿದೆವು. ಆಗ, ಕಲ್ಲು ತೂರಾಟ ಮತ್ತು ಫೈರಿಂಗ್ ಶುರುವಾಯಿತು. ನಮ್ಮಲ್ಲಿ ಸಿಸಿಟಿವಿ ಫೂಟೇಜ್ ಇದೆ. ಚುನಾವಣೆ ಮುಗಿದ ಬಳಿಕ ಈ ಕುರಿತಾಗಿ ವಿಚಾರಣೆ ನಡೆಸಲಿದ್ದೇವೆ. ಶೀಘ್ರದಲ್ಲಿಯೇ ಪ್ರಕರಣ ದಾಖಲಿಸುತ್ತೇವೆ ಎಂದಿದ್ದಾರೆ.

ದಾಳಿಯೇ ಚುನಾವಣೆ ಗೆಲ್ಲುವ ‘ಮಾಸ್ಟರ್ ಸ್ಟ್ರೋಕ್’- ರಾಹುಲ್ ಗಾಂಧಿ ಟೀಕೆ

ಚುನಾವಣೆ ವೇಳೆಯಲ್ಲಿ ನಡೆದಿರುವ ‘ಹಿಂಸೆ’ಯನ್ನು ಮರುನಾಮಕರಣ ಮಾಡಿ ಮಾಸ್ಟರ್ ಸ್ಟ್ರೋಕ್ ಎಂದು ಕರೆಯಲಾಗುವುದು, ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.

https://twitter.com/RahulGandhi/status/1413699399411195905\

ಚುನಾವಣೆ ವೇಳೆ ನಡೆದಿರುವ ಅನಾಹುತಕಾರಿ ಘಟನೆಗಳ ಕುರಿತು ಪ್ರಿಯಾಂಕ ಗಾಂಧಿ ಕೂಡಾ ಯೋಗಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.

“ಕೆಲವು ವರ್ಷಗಳ ಹಿಂದೆ, ಅತ್ಯಾಚಾರ ಸಂತ್ರಸ್ತೆ ಬಿಜೆಪಿ ಶಾಸಕರ ವಿರುದ್ದ ದನಿ ಎತ್ತಿದ್ದಳು. ಅವಳನ್ನು ಮತ್ತು ಅವಳ ಕುಟುಂಬವನ್ನು ಕೊಲ್ಲಲಾಯಿತು. ಮಹಿಳೆ ನಾಮಪತ್ರ ಸಲ್ಲಿಸುವುದನ್ನು ತಡೆಯುವ ಮೂಲಕ ಬಿಜೆಪಿ ಎಲ್ಲಾ ಮಿತಿಗಳನ್ನು ದಾಟಿದೆ. ಅದೇ ಸರ್ಕಾರ, ಅದೇ ವರ್ತನೆ,” ಎಂದು ಅವರು ಹೇಳಿದ್ದಾರೆ.

Previous Post

ವಿಶ್ವದಲ್ಲಿ ಕರೋನಾ ಸೋಂಕಿನ ಹರಡುವಿಕೆ ಕ್ಷೀಣಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ- WHO ಮುಖ್ಯ ವಿಜ್ಞಾನಿ

Next Post

ತಾಲಿಬಾನ್ ಹಿಡಿತ ಹೆಚ್ಚುತ್ತಿದ್ದಂತೆ ಕಂದಹಾರ್‌ನಲ್ಲಿನ 50 ದೂತವಾಸ ಸಿಬ್ಬಂದಿಗಳನ್ನು ದೆಹಲಿಗೆ ಸ್ಥಳಾಂತರಿಸಿದ ಭಾರತ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ತಾಲಿಬಾನ್ ಹಿಡಿತ ಹೆಚ್ಚುತ್ತಿದ್ದಂತೆ ಕಂದಹಾರ್‌ನಲ್ಲಿನ 50 ದೂತವಾಸ ಸಿಬ್ಬಂದಿಗಳನ್ನು ದೆಹಲಿಗೆ ಸ್ಥಳಾಂತರಿಸಿದ ಭಾರತ

ತಾಲಿಬಾನ್ ಹಿಡಿತ ಹೆಚ್ಚುತ್ತಿದ್ದಂತೆ ಕಂದಹಾರ್‌ನಲ್ಲಿನ 50 ದೂತವಾಸ ಸಿಬ್ಬಂದಿಗಳನ್ನು ದೆಹಲಿಗೆ ಸ್ಥಳಾಂತರಿಸಿದ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada