• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

UP Election | ಬಿಜೆಪಿಗೆ 4ನೇ ಹಂತದ ಮತದಾನವೇ ನಿರ್ಣಾಯಕ!

ಯದುನಂದನ by ಯದುನಂದನ
February 22, 2022
in ದೇಶ, ರಾಜಕೀಯ
0
UP Election | ಬಿಜೆಪಿಗೆ 4ನೇ ಹಂತದ ಮತದಾನವೇ ನಿರ್ಣಾಯಕ!
Share on WhatsAppShare on FacebookShare on Telegram

ಮೊದಲ 2 ಹಂತಗಳ ಚುನಾವಣೆ ನಡೆದ ಪಶ್ಚಿಮ ಉತ್ತರ ಪ್ರದೇಶದ ಜಿಲ್ಲೆಗಳಲ್ಲಿ ಜಾಟ್ ಸಮುದಾಯದ (jat community in uttar pradesh) ಪ್ರಾಬಲ್ಯವಿದೆ. ಈ ಬಾರಿ ಸಮಾಜವಾದಿ ಪಕ್ಷ (Samajawadi Party) ಮತ್ತು ಜಾಟ್ ಸಮುದಾಯದ ಪಕ್ಷ ಎಂದೇ ಹೇಳಲಾಗುವ ರಾಷ್ಟ್ರೀಯ ಲೋಕದಳ (Rashtriya Lok Dal) ಮೈತ್ರಿ ಮಾಡಿಕೊಂಡಿರುವುದರಿಂದ ಮೊದಲೆರಡು ಹಂತಗಳ ಮತದಾನದಲ್ಲಿ ಈ ಮೈತ್ರಿ ಮುನ್ನಡೆ ಸಾಧಿಸಬಹುದು ಎಂದು ಹೇಳಲಾಗುತ್ತಿದೆ. 3ನೇ ಹಂತದಲ್ಲಿ ಚುನಾವಣೆ ನಡೆದ 16 ಜಿಲ್ಲೆಗಳ 59 ಕ್ಷೇತ್ರಗಳು ಯಾದವ್ ಸಮುದಾಯದ (Yadav community ) ಪ್ರಭಾವವನ್ನು ಹೊಂದಿವೆ. ಹಾಗಾಗಿ 3ನೇ ಹಂತದಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಗಳಿಸಬಹುದು ಎಂಬ ಲೆಕ್ಕಾಚಾರ ಇದೆ. ಹೀಗೆ ಮೊದಲ ಮೂರೂ ಹಂತಗಳು ಆಶಾದಾಯಕವಾಗಿಲ್ಲದ ಕಾರಣಕ್ಕೆ ಬಿಜೆಪಿಗೆ ನಾಳೆ (ಫೆಬ್ರವರಿ 23ರಂದು) ನಡೆಯುವ 4ನೇ ಹಂತದ ಚುನಾವಣೆ ಅತ್ಯಂತ ನಿರ್ಣಾಯಕವಾದುದಾಗಿದೆ.

ADVERTISEMENT

4ನೇ ಹಂತದಲ್ಲಿ 9 ಜಿಲ್ಲೆಗಳ 60 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರೋಹಿಲ್‌ಖಂಡ್‌ನಿಂದ ತೆರಾಯ್ ಬೆಲ್ಟ್ ಮತ್ತು ಅವಧ್ ಪ್ರದೇಶದವರೆಗೆ 4ನೇ ಹಂತ ಮತದಾನವಾಗಿದ್ದು ಇಲ್ಲಿ ಸೋನಿಯಾ ಗಾಂಧಿ (Sonia gandhi) ಅವರ ಲೋಕಸಭಾ ಕ್ಷೇತ್ರ ರಾಯ್ ಬರೇಲಿ, ರಾಜನಾಥ್ ಸಿಂಗ್ ಅವರ ಲೋಕಸಭಾ ಕ್ಷೇತ್ರ ಲಕ್ನೋ, ಮೇನಕಾ ಗಾಂಧಿ (Menaka Gandhi) ಮತ್ತು ವರುಣ್ ಗಾಂಧಿ ಅವರ ಪಿಲಿಭಿತ್, ಇತ್ತೀಚೆಗೆ ರೈತರ ಹತ್ಯಾಕಾಂಡ ನಡೆದ ಲಖಿಂಪುರ ಖೇರಿ, ಕೆಲ ದಿನಗಳ ಹಿಂದೆ ದಲಿತರ ನರಮೇಧ ನಡೆದ ಉನ್ನಾವೋ, ಫತೇಪುರ್ ಮತ್ತು ಬಂದಾ ಜಿಲ್ಲೆಗಳು ಇವೆ. 60 ಸ್ಥಾನಗಳ ಪೈಕಿ 16 ಸ್ಥಾನಗಳು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಸಮಾಜವಾದಿ ಪಕ್ಷ 58 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.‌ ಓಂ ಪ್ರಕಾಶ್ ರಾಜ್‌ಭರ್ ಅವರ ಪಕ್ಷಕ್ಕೆ ಉಳಿದ ಎರಡು ಸ್ಥಾನಗಳನ್ನು ನೀಡಿದೆ. ಬಿಎಸ್‌ಪಿ ಮತ್ತು ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಿಗೆ ಸೆಣಸಾಡುತ್ತಿವೆ. ಬಿಜೆಪಿ 57 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷ ಅಪ್ನಾ ದಳಕ್ಕೆ 3 ಸ್ಥಾನ ಬಿಟ್ಟುಕೊಟ್ಟಿದೆ.

ಈ ಕ್ಷೇತ್ರಗಳಲ್ಲಿ 2017ರ ಚುನಾವಣೆಯಲ್ಲಿ ಸಂಪೂರ್ಣವಾಗಿ ಬಿಜೆಪಿ (BJP) ಪರವಾದ ಅಲೆ ಕಂಡುಬಂದಿತ್ತು. 60 ಸ್ಥಾನಗಳಲ್ಲಿ ಬಿಜೆಪಿ 51 ಮತ್ತು ಅದರ ಮೈತ್ರಿ ಪಕ್ಷ ಅಪನಾದಳ 1 ಗೆದ್ದಿದ್ದವು. ಸಮಾಜವಾದಿ ಪಕ್ಷ 4, ಕಾಂಗ್ರೆಸ್ ಮತ್ತು ಬಿಎಸ್‌ಪಿ ತಲಾ 2 ಸ್ಥಾನಗಳನ್ನು ಗೆದ್ದಿದ್ದವು. ಬಳಿಕ ಕಾಂಗ್ರೆಸ್‌ನಿಂದ ಗೆದ್ದಿದ್ದ ಇಬ್ಬರು ಶಾಸಕರು ಮತ್ತು ಬಿಎಸ್‌ಪಿಯ ಓರ್ವ ಶಾಸಕ ಬಿಜೆಪಿಗೆ ಸೇರಿದ್ದರು. ಅಲ್ಲಿಗೆ ಬಿಜೆಪಿ ಇಲ್ಲಿ 55 ಸ್ಥಾನಗಳನ್ನು (ಶೇಕಡಾ 90ರಷ್ಟು) ತನ್ನದಾಗಿಸಿಕೊಂಡಿತ್ತು. 9 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡಿತ್ತು. ಲಕ್ನೋ ಜಿಲ್ಲೆಯ 9 ಸ್ಥಾನಗಳ ಪೈಕಿ ಬಿಜೆಪಿ 8 ಸೀಟು ಗೆದ್ದುಕೊಂಡಿತ್ತು. ಹರ್ದೋಯ್ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಡೆ ಬಿಜೆಪಿ ಗೆದ್ದಿತ್ತು. ಸೀತಾಪುರ ಜೆಲ್ಲೆಯಲ್ಲು 9ರ ಪೈಕಿ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಬಂಡಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ತಲಾ 6 ಸ್ಥಾನಗಳನ್ನು ಗೆದ್ದಿತ್ತು.

ಲಖಿಂಪುರ್ ಖೇರಿ (lakhimpur kheri) ಪ್ರಕರಣದ ಪರಿಣಾಮ

2021ರ ಅಕ್ಟೋಬರ್ 3ರಂದು ನಡೆದ ಲಖಿಂಪುರ ಖೇರಿ ರೈತರ ಹತ್ಯಾಕಾಂಡ ಪ್ರಕರಣ ಕೂಡ ಉತ್ತರ ಪ್ರದೇಶ ಚುನಾವಣೆಯ (Uttar Pradesh Election) ಮೇಲೆ ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ಘಟನೆ ನಡೆದ ತೆರಾಯ್ ಪ್ರದೇಶದಲ್ಲಿ. ಇಲ್ಲಿ ಕೂಡ 4ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ (Union minister Ajay Kumar Mishra ‘Teni’ ) ಅವರ ಪುತ್ರ ಆಶಿಶ್ ಮಿಶ್ರಾ (Ashish Mishra) ಅವರು ಲಖಿಂಪುರ ಖೇರಿ ಹಿಂಸಾಚಾರದ ಸಂದರ್ಭದಲ್ಲಿ ರೈತರನ್ನು ಕಾರಿನಲ್ಲಿ ಕೊಂದ ಆರೋಪ ಹೊತ್ತಿದ್ದಾರೆ. ಆಶಿಶ್ ಮಿಶ್ರಾ ಅವರನ್ನು ಉಳಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಬಿಜೆಪಿ ರೈತರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದು ಬಿಂಬಿತವಾಗಿರುವುದು ತೆರಾಯ್ ಪ್ರದೇಶದ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಮೇಲೆ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಲಖಿಂಪುರ ಖೇರಿ ಮತ್ತು ನೆರೆಯ ಜಿಲ್ಲೆಗಳಾದ ಪಿಲಿಭಿತ್, ಹರ್ದೋಯಿ ಮತ್ತು ಸೀತಾಪುರದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿತ್ತು. ಪಿಲಿಭಿತ್‌ನ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು 2017 ರಲ್ಲಿ ಬಿಜೆಪಿ ಗೆದ್ದಿತ್ತು. ಹರ್ದೋಯ್‌ನಲ್ಲಿ ಬಿಜೆಪಿ 8 ವಿಧಾನಸಭಾ ಸ್ಥಾನಗಳ ಪೈಕಿ 7 ಸ್ಥಾನಗಳನ್ನು ವಶಪಡಿಸಿಕೊಂಡಿದ್ದರೆ, ಸೀತಾಪುರದಲ್ಲಿ ಬಿಜೆಪಿ 9 ರಲ್ಲಿ 7 ಸ್ಥಾನಗಳನ್ನು ಗೆದ್ದುಕೊಂಡಿತು. ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣವು ಚುನಾವಣೆಯ ಮೇಲೆ ಗಮನಾರ್ಹ ಪರಿಣಾಮ ಬೀರಿದರೆ ಬಿಜೆಪಿಯು ಸ್ವಲ್ಪ ನೆಲೆಯನ್ನು ಕಳೆದುಕೊಳ್ಳಬೇಕಾಗುತ್ತದೆ.

ನಾಲ್ಕನೇ ಹಂತವು ಅನೇಕ ಹಿರಿಯ ನಾಯಕರ ಪ್ರಾಬಲ್ಯವನ್ನು ಪರೀಕ್ಷೆಗೆ ಒಳಪಡಿಸುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಅದಿತಿ ಸಿಂಗ್ ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್ ಬರೇಲಿ ಸದರ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರು ಸಮಾಜವಾದಿ ಪಕ್ಷದ ಆರ್‌ಪಿ ಯಾದವ್ ವಿರುದ್ಧ ಕಣಕ್ಕಿಳಿದಿದ್ದಾರೆ. ಯೋಗಿ ಆದಿತ್ಯನಾಥ್ ಸಂಪುಟದ ಸಚಿವ ಮತ್ತು ಪಕ್ಷದ ಬ್ರಾಹ್ಮಣ ಮುಖ, ಬ್ರಿಜೇಶ್ ಪಾಠಕ್ ಅವರು ತಮ್ಮ ಹಳೆಯ ಸ್ಥಾನವನ್ನು ತ್ಯಜಿಸಿ ಲಕ್ನೋ ಕ್ಯಾಂಟ್ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಪೊಲೀಸ್ ಅಧಿಕಾರಿ ಹುದ್ದೆ ತೊರೆದು ರಾಜಕೀಯ ಪ್ರವೇಶಿಸಿರುವ ರಾಜೇಶ್ವರ್ ಸಿಂಗ್ ಸರೋಜಿನಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರ ವಿರುದ್ಧ ಸಮಾಜವಾದಿ ಪಕ್ಷದ ಮಾಜಿ ಸಚಿವ ಅಭಿಷೇಕ್ ಮಿಶ್ರಾ ಕಣದಲ್ಲಿದ್ದಾರೆ.

ಅಖಿಲೇಶ್ ಯಾದವ್ ಸರ್ಕಾರದಲ್ಲಿ ಸಚಿವರಾಗಿದ್ದ ಮನೋಜ್ ಪಾಂಡೆ ಅವರು ತಮ್ಮ ಸಾಂಪ್ರದಾಯಿಕ ಸ್ಥಾನವಾದ ಉಂಚಹರ್‌ನಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ವಿರುದ್ಧ ಬಿಜೆಪಿ ಅಮರನಾಥ್ ಮೌರ್ಯ ಅವರನ್ನು ಕಣಕ್ಕಿಳಿಸಿದೆ. ನರೇಶ್ ಅಗರ್ವಾಲ್ ಅವರ ಪುತ್ರ ನಿತಿನ್ ಅಗರ್ವಾಲ್ ಈ ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಹರ್ದೋಯ್ ಕ್ಷೇತ್ರಕ್ಕೆ ಸ್ಪರ್ಧಿಸುತ್ತಿದ್ದಾರೆ. ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರು ಉನ್ನಾವೋ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಸಂಸದ ವಿಶಂಭರ್ ಪ್ರಸಾದ್ ನಿಶಾದ್ ಅವರು ಫತೇಪುರ್‌ನ ಅಯಾ ಶಾ ಅಸೆಂಬ್ಲಿ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಹೀಗೆ 4ನೇ ಹಂತ ತೀವ್ರ ಕುತೂಹಲ ಮೂಡಿಸಿದೆ. ಘಟಾನುಘಟಿ ನಾಯಕರು ಕಣದಲ್ಲಿದ್ದಾರೆ. ರಾಷ್ಟ್ರ ನಾಯಕರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ನಡೆಯುತ್ತಿದೆ. ಬಿಜೆಪಿ ಕಳೆದ ಬಾರಿಯಂತೆ ಈ ಸಲವೂ ಇಲ್ಲಿ ಭರ್ಜರಿ ಮುನ್ನಡೆ ಸಾಧಿಸಿದರೆ ಮಾತ್ರ ಇನ್ನೊಮ್ಮೆ ಉತ್ತರ ಪ್ರದೇಶದ ಗದ್ದುಗೆ ಏರಲು ಸಾಧ್ಯವಾಗುತ್ತದೆ.

Tags: BJPCongress PartyCovid 19jat community in uttar pradeshRashtriya Lok DalSamajawadi PartySonia GandhiUP Election 2022Yadav communityಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪೋಷಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಗಮನ : ಮಕ್ಕಳಿಗೆ ಶಿಕ್ಷಣಕ್ಕಿಂತ ಲವ್ ಮೇಲೆ ಒಲವು!

Next Post

ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು : ಭಾರತೀಯರನ್ನು ಕರೆತರಲು ಹೊರಟ ಏರ್ ಇಂಡಿಯಾ ವಿಶೇಷ ವಿಮಾನ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು : ಭಾರತೀಯರನ್ನು ಕರೆತರಲು ಹೊರಟ ಏರ್ ಇಂಡಿಯಾ ವಿಶೇಷ ವಿಮಾನ

ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು : ಭಾರತೀಯರನ್ನು ಕರೆತರಲು ಹೊರಟ ಏರ್ ಇಂಡಿಯಾ ವಿಶೇಷ ವಿಮಾನ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada